ಪೆನ್ಸಿಲ್ವೇನಿಯಾದಲ್ಲಿ ಕಾರು ಅಪಘಾತ; ಇಬ್ಬರು ಭಾರತೀಯ ವಿದ್ಯಾರ್ಥಿಗಳು ಸಾವು

Date:

Advertisements

ಲ್ಯಾಂಕಾಸ್ಟರ್ ಕೌಂಟಿಯ ಪೆನ್ಸಿಲ್ವೇನಿಯಾ ಟರ್ನ್‌ಪೈಕ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಓಹಿಯೋದ ಕ್ಲೀವ್‌ಲ್ಯಾಂಡ್‌ನಲ್ಲಿ ಈ ವಿದ್ಯಾರ್ಥಿಗಳು ವಾಸವಿದ್ದರು ಎನ್ನಲಾಗಿದೆ.

ಮೃತ ವಿದ್ಯಾರ್ಥಿಗಳನ್ನು 23 ವರ್ಷದ ಸೌರವ್ ಪ್ರಭಾಕರ್ ಮತ್ತು 20 ವರ್ಷದ ಮಾನವ್ ಪಟೇಲ್ ಎಂದು ಗುರುತಿಸಲಾಗಿದೆ. ಮೇ 10ರ ಶನಿವಾರ ಈ ಅಪಘಾತ ನಡೆದಿದೆ ಎಂದು ವರದಿಯಾಗಿದೆ. ಮೃತರ ಗುರುತನ್ನು ಲ್ಯಾಂಕಾಸ್ಟರ್ ಕೌಂಟಿ ಕರೋನರ್ ಕಚೇರಿ ದೃಢಪಡಿಸಿದೆ. ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಗಿದೆ. ಹಾಗೆಯೇ ಆಕಸ್ಮಿಕ ಸಾವು ಎಂದು ಪರಿಗಣಿಸಲಾಗಿದೆ.

ಇದನ್ನು ಓದಿದ್ದೀರಾ? ವೀಸಾ ರದ್ದು | ಅಮೆರಿಕದಿಂದ ಸ್ವಯಂ ಗಡಿಪಾರಾದ ಭಾರತೀಯ ವಿದ್ಯಾರ್ಥಿನಿ ರಂಜನಿ ಶ್ರೀನಿವಾಸನ್ ಯಾರು?

Advertisements

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಪೆನ್ಸಿಲ್ವೇನಿಯಾ ರಾಜ್ಯ ಪೊಲೀಸ್ (ಪಿಎಸ್‌ಪಿ), “ವಾಹನವು ರಸ್ತೆಯನ್ನು ಬಿಟ್ಟು ಮರಕ್ಕೆ ಡಿಕ್ಕಿ ಹೊಡೆದು ಸೇತುವೆಗೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಧಾವಿಸಿದ ತುರ್ತು ಸಿಬ್ಬಂದಿಗಳು ಪರಿಶೀಲಿಸಿದಾಗ ಚಾಲಕ ಮತ್ತು ಹಿಂಭಾಗದ ಪ್ರಯಾಣಿಕರು ಸಾವನ್ನಪ್ಪಿರುವುದು ದೃಢಪಟ್ಟಿದೆ. ಮುಂಭಾಗ ಕುಳಿತಿದ್ದ ಪ್ರಯಾಣಿಕರೊಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ರೀಡಿಂಗ್ ಆಸ್ಪತ್ರೆಗೆ ಸಾಗಿಸಲಾಗಿದೆ” ಎಂದು ಹೇಳಿದ್ದಾರೆ.

ಅಪಘಾತದ ಸ್ಥಳವು ಮುಖ್ಯ ರಸ್ತೆಯಿಂದ ಸಂಪೂರ್ಣವಾಗಿ ಹೊರಗಿದೆ. ಆದ್ದರಿಂದಾಗಿ ಸಂಚಾರಕ್ಕೆ ವ್ಯತ್ಯಯವಾಗಿಲ್ಲ. ಪಿಎಸ್‌ಪಿಯ ವಿಧಿವಿಜ್ಞಾನ ಸೇವಾ ಘಟಕವು ತನಿಖೆಗೆ ಸಹಾಯ ಮಾಡಲು ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನ್ಯೂಯಾರ್ಕ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯು ಇಬ್ಬರು ಭಾರತೀಯರ ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿದೆ. ವಿದ್ಯಾರ್ಥಿಗಳು ಕ್ಲೀವ್‌ಲ್ಯಾಂಡ್ ಸ್ಟೇಟ್ ವಿಶ್ವವಿದ್ಯಾಲಯದಲ್ಲಿ ದಾಖಲಾಗಿದ್ದರು ಎಂದು ಹೇಳಿದೆ.

“ಇಬ್ಬರು ಭಾರತೀಯ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡ ದುರದೃಷ್ಟಕರ ರಸ್ತೆ ಅಪಘಾತದ ಬಗ್ಗೆ ತಿಳಿದು ತೀವ್ರ ದುಃಖವಾಯಿತು. ಇಂತಹ ಸಂದರ್ಭದಲ್ಲಿ ನಾವು ಅವರ ಕುಟುಂಬದೊಂದಿಗೆ ಇದ್ದೇವೆ. ಮೃತರ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದೇವೆ. ಕುಟುಂಬಕ್ಕೆ ಸಾಧ್ಯವಿರುವ ಎಲ್ಲಾ ಸಹಾಯ ಮಾಡಲಾಗುವುದು” ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌...

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

ಭಾನುವಾರ ಗಾಝಾ ನಗರದಲ್ಲಿ ಅಲ್‌ಜಝೀರಾ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ...

Download Eedina App Android / iOS

X