ರಾಯಚೂರು | ನರೇಗಾ ಕೂಲಿ ಕೆಲಸದ ವೇಳೆ ತೀವ್ರ ಬಿಸಿಲಿಗೆ ಕುಸಿದು ಬಿದ್ದು ಮಹಿಳೆ ಸಾವು

Date:

Advertisements

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಯಲ್ಲಿ ಕೆಲಸ ಮಾಡುತ್ತಿದ್ದಾಗಲೇ ಕಾರ್ಮಿಕ ಮಹಿಳೆ ಸಾವನ್ನಪ್ಪಿದ ಘಟನೆ ಲಿಂಗಸುಗೂರು ತಾಲ್ಲೂಕಿನ ಚಿಕ್ಕ ನಗನೂರು ಗ್ರಾಮದಲ್ಲಿ ನಡೆದಿದೆ.

ಸುಕನ್ಯಾ ಮಹಾವೀರ ಸಿಂಗ್ (50) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ.ಗೆಜ್ಜಲಗಟ್ಟಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕ ನಗನೂರು ಗ್ರಾಮದ ಶಿವರಾಜ ದೇಸಾಯಿ ಅವರ ಹೊಲದ ಹತ್ತಿರದ ನಾಲಾ ಹೂಳೆತ್ತುವ ಕಾಮಗಾರಿ ಮಾಡುತ್ತಿದ್ದ ವೇಳೆ ಮಹಿಳೆಗೆ ತೀವ್ರ ಬಿಸಿಲಿಗೆ ತಲೆ ಸುತ್ತು ಬಂದು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಜರುಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ನಾರಾಯಣಪುರ ಬಲದಂಡೆ ಕಾಲುವೆಗೆ ಬಸಿನೀರು ಹರಿಸಲು ರೈತರ ಆಗ್ರಹ

Advertisements

ಮೃತ ಕಾರ್ಮಿಕ ಮಹಿಳೆಗೆ ಪರಿಹಾರ ಒದಗಿಸುವಂತೆ ಉದ್ಯೋಗ ಖಾತ್ರಿ ಕೂಲಿಕಾರರ ಸಂಘಟನೆ ಮುಖಂಡರು (ಟಿಯುಸಿಐ) ಒತ್ತಾಯಿಸಿದ್ದಾರೆ.ಈ ವಿಚಾರ ತಿಳಿಯುತ್ತಿದ್ದಂತೆ ಮೃತ ಮಹಿಳೆ ಮನೆಗೆ ಆಗಮಿಸಿದ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಾದ ಜೆಇ ರಾಘವೇಂದ್ರ ಹಾಗೂ ಬಿಲ್ ಕಲೆಕ್ಟರ್ ವೆಂಕಪ್ಪ ಚಿಕ್ಕ ನಗನೂರು ಭೇಟಿ ನೀಡಿದರು.

ಕಾಮಗಾರಿ ಮಾಡುವ ವೇಳೆಯಲ್ಲಿ ಧೀಡೀರ್ ಕುಸಿದು ಬಿದ್ದು ಸಾವನ್ನಪ್ಪಿದ್ದು, ಮೃತಳು ನಿರ್ಗತಿಕ ,ಕಡು ಬಡತನದ ಪರಿಸ್ಥಿತಿಯಲ್ಲಿ ಜೀವನ ನಡೆಸುತ್ತಿದ್ದಳು,ಮೃತರಿಗೆ ಒಬ್ಬ ಮಗ ನಿದ್ದು,ನೊಂದ ಈ ಬಡ ಕುಟುಂಬ ನಿರ್ವಹಣೆಗೆ ಸರಕಾರದಿಂದ ಕನಿಷ್ಠ 2 ಲಕ್ಷ ರೂಪಾಯಿ ಪರಿಹಾರ ಧನ ನೀಡುವಂತೆ ಮನವಿ ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X