ಅಭಯಾರಣ್ಯದಲ್ಲಿ ಅಕ್ರಮ ಗಣಿಗಾರಿಕೆ – ಯಮುನಾ ನದಿಗೆ ಒಡ್ಡು ನಿರ್ಮಾಣ: ವರದಿ ಕೇಳಿದ ಸುಪ್ರೀಂ

Date:

Advertisements

ಹರಿಯಾಣದ ಕಲೆಸರ್ ವನ್ಯಜೀವಿ ಅಭಯಾರಣ್ಯದ ಬಳಿ ಗಣಿಗಾರಿಕೆಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಯಮುನಾ ನದಿಗೆ ಒಡ್ಡು ನಿರ್ಮಿಸಲಾಗಿದೆ. ಅಭಯಾರಣ್ಯದಲ್ಲಿ ಅಕ್ರಮ ಗಣಿಗಾರಿಕೆ ಚಟುವಟಿಕೆಗಳು ಹೇರಳವಾಗಿವೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡಿರುವ ಸುಪ್ರೀಂ ಕೋರ್ಟ್‌, ಒಡ್ಡು ನಿರ್ಮಾಣದ ಕುರಿತಾಗಿ ಸಂಪೂರ್ಣ ವರದಿ ನೀಡುವಂತೆ ಕೇಂದ್ರೀಯ ಅಧಿಕಾರ ಸಮಿತಿಗೆ (ಸಿಇಸಿ) ನಿರ್ದೇಶನ ನೀಡಿದೆ.

ಯಮುನಾ ನದಿ ತೀರದಲ್ಲಿರುವ ಯಮುನಾ ನಗರದ ಪೂರ್ವ ಭಾಗದಲ್ಲಿ ಕಲೆಸರ್ ವನ್ಯಜೀವಿ ಅಭಯಾರಣ್ಯವಿದೆ. ಇದೇ ಭಾಗದಲ್ಲಿ ಅಕ್ರಮ ಗಣಿಗಾರಿಕೆಗಳು ನಡೆಯುತ್ತಿವೆ. ಈ ಗಣಿಗಾರಿಕೆಗೆ ಅನುಕೂಲ ಮಾಡಿಕೊಡಲು ಅಭಯಾರಣ್ಯದ ಬಳಿ ನದಿಗೆ ಒಡ್ಡು ನಿರ್ಮಿಸಲಾಗಿದೆ ಎಂದು ಅರ್ಜಿದಾರರು ಒತ್ತಿ ಹೇಳಿದ್ದಾರೆ.

ಅರ್ಜಿದಾರರ ಪರವಾಗಿ ವಾದ ಮಂಡಿಸಿದ ವಕೀಲ ಗೌರವ್ ಕುಮಾರ್ ಬನ್ಸಾಲ್, “ಅಕ್ರಮ ಮತ್ತು ಅತಿರೇಕದ ಗಣಿಗಾರಿಕೆಗೆ ಅನುಕೂಲವಾಗುವಂತೆ ಒಡ್ಡು ನಿರ್ಮಾಣ ಮಾಡಲಾಗಿದೆ. ಪರಿಣಾಮ, ಅಭಯಾರಣ್ಯಕ್ಕೆ ಭಾರೀ ಹಾನಿಯಾಗಲಿದ್ದು, ವನ್ಯಜೀವಿಗಳಿಗೂ ಅಪಾಯ ತೊಂದರೆಯಾಗಲಿದೆ” ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

Advertisements

ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಅಗಸ್ಟೀನ್ ಜಾರ್ಜ್ ಅವರನ್ನೊಳಗೊಂಡ ಪೀಠವು, ಅರ್ಜಿದಾರರು ಎತ್ತಿರುವ ಸಮಸ್ಯೆಗಳನ್ನು ಪರಿಶೀಲಿಸಿ ವರದಿ ಸಲ್ಲಿಸಬೇಕು ಎಂದು ಸಿಇಸಿಗೆ ಸೂಚಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X