ಬಾಲ ಬಿಚ್ಚಿದರೆ ಹುಷಾರ್! – ರೌಡಿಶೀಟರ್‌ಗಳಿಗೆ ಬಳ್ಳಾರಿ ಎಸ್‌ಪಿ ಶೋಭಾರಾಣಿ ಖಡಕ್‌ ವಾರ್ನಿಂಗ್

Date:

Advertisements

ಬಳ್ಳಾರಿ ನಗರದ ಡಿಎಆರ್ ಪೊಲೀಸ್ ಮೈದಾನದಲ್ಲಿ ಎಸ್‌ಪಿ ಡಾ. ಶೋಭಾರಾಣಿ ರೌಡಿಶೀಟರ್‌ಗಳ ಪರೇಡ್ ನಡೆಸಿ ಹಾಲಿ ಮಾಜಿ ರೌಡಿಶೀಟರ್‌ಗಳಿಗೆ ‘ಬಾಲ ಬಿಚ್ಚಿದರೆ ಹುಷಾರ್’ ಎಂದು ಖಡಕ್ ಎಚ್ಚರಿಕೆ ನೀಡಿದರು.

ನಗರದ ಕೌಲ್ ಬಜಾರ್, ಗಾಧಿನಗರ, ಬ್ರೂಸ್ ಪೇಟೆ, ಎಪಿಎಂಸಿ, ಬಳ್ಳಾರಿ ಗ್ರಾಮೀಣ, ಕುರುಗೋಡು ಪೋಲಿಸ್ ಠಾಣೆ ಸೇರಿದಂತೆ ಜಿಲ್ಲೆಯ ಒಟ್ಟು 17 ಪೊಲೀಸ್ ಠಾಣಾ ವ್ಯಾಪ್ತಿಯ 660ಕ್ಕೂ ಹೆಚ್ಚು ರೌಡಿ ಶೀಟರ್‌ಗಳು ಈ ಪರೇಡ್‌ನಲ್ಲಿ ಹಾಜರಿದ್ದರು. ಈ ಪೈಕಿ 67 ಆ್ಯಕ್ಟಿವ್ ರೌಡಿಗಳಿದ್ದಾರೆಂದು ತಿಳಿದುಬಂದಿದೆ.

WhatsApp Image 2025 05 12 at 9.56.48 PM

ರೌಡಿಶೀಟರ್‌ಗಳಿಗೆ ಕ್ಲಾಸ್ ತೆಗೆದುಕೊಂಡ ಎಸ್‌ಪಿ “ಯಾರೇ ಆಗಲಿ ಆಗಿರುವ ಘಟನೆಗಳನ್ನು ಮರೆತು ಒಳ್ಳೆ ರೀತಿ ಜೀವನ ಮಾಡಿ, ಮತ್ತೆ ಏನಾದರೂ ಸಮಾಜದ ಅಹಿತಕರ ಘಟನೆಗಳಲ್ಲಿ ಭಾಗಿಯಾಗಿದ್ದು ಕಂಡುಬಂದಲ್ಲಿ ಅಥವಾ ಅಕ್ರಮ ಚಟುವಟಿಕೆಗಳಲ್ಲಿ
ಭಾಗಿಯಾದಲ್ಲಿ ಕಾನೂನು ಪ್ರಕಾರ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು.

Advertisements

ಪರೇಡ್‌ನಲ್ಲಿ ಎಎಸ್‌ಪಿ ನವೀನ್ ಕುಮಾರ್, ಕೆ ಪಿ ರವಿಕುಮಾರ್, ಡಿವೈಎಸ್‌ಪಿಗಳಾದ ನಂದಾರೆಡ್ಡಿ ಸೇರಿದಂತೆ ವಿವಿಧ ಠಾಣೆಗಳ ಇನ್ಸ್‌ಪೆಕ್ಟರ್‌ಗಳು, ಪಿಎಸ್ಐ ಹಾಗೂ ಸಿಬ್ಬಂದಿಗಳು ಹಾಜರಿದ್ದರು.

ಇದನ್ನೂ ಓದಿ: ಬಳ್ಳಾರಿ | ಮೇ 20ರಂದು ಅಂಗನವಾಡಿ ನೌಕರರ ಮುಷ್ಕರ

WhatsApp Image 2025 05 12 at 9.56.47 PM 1
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X