ವಿಜಯಪುರ | ʼಬುದ್ಧನ ತತ್ವ ಸಂದೇಶಗಳು ಪ್ರತಿ ಮನೆ ಮನಕ್ಕೂ ತಲುಪಬೇಕುʼ

Date:

Advertisements

ಜ್ಞಾನದ ಬೆಳಕು ಗೌತಮ ಬುದ್ಧನ ತತ್ವ ಸಂದೇಶಗಳನ್ನು ಪ್ರತಿ ಮನೆ ಮನಗಳಿಗೆ ತಲುಪಿಸುವಂತಹ ಕಾರ್ಯವಾಗಬೇಕು. ಪ್ರತಿಯೊಬ್ಬರೂ ಬುದ್ಧನ ಆದರ್ಶಗಳನ್ನು ಅಳವಡಿಸಿಕೊಂಡರೆ ಜಗತ್ತು ಶಾಂತಿಯಿಂದ ಇರುತ್ತದೆ ಎಂದು ವಿಜಯಪುರ ಪುರಸಭೆ ಅಧ್ಯಕ್ಷೆ ಜಗದೇವಿ ಗುಂಡಳ್ಳಿ ಹೇಳಿದರು.

ಬಸವನಬಾಗೇವಾಡಿ ತಾಲೂಕಿನ ಅಂಬೇಡ್ಕರ್ ವೃತ್ತದಲ್ಲಿ ತಾಲೂಕಾಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಬುದ್ಧಪೂರ್ಣಿಮೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಹಶೀಲ್ದಾರ್ ಯಮನಪ್ಪ ಸೋಮನಕಟ್ಟಿ ಮಾತನಾಡಿ, “ಬುದ್ದನ ಉನ್ನತ ಆದರ್ಶಗಳು, ಅಹಿಂಸಾ ತತ್ವ, ಸಾಮರಸ್ಯದ ಸಂದೇಶಗಳು ಚಿರನೂತನ. ಅವರ ಶ್ರೇಷ್ಠ ಚಿಂತನೆಗಳು ಮುಂದಿನ ಪೀಳಿಗೆಗೂ ಮಾರ್ಗದರ್ಶನ ನೀಡುವೆಂತಿವೆ. ಇಂದಿನ ಪ್ರಜ್ಞಾವಂತರು ಮುಂದಿನ ತಲೆಮಾರುಗಳಿಗೆ ಬುದ್ಧನ ಆದರ್ಶಗಳನ್ನು ತಿಳಿಸಿ ಉತ್ತಮ ಸಮಾಜ ನಿರ್ಮಾಣ ಮಾಡಲು ಶ್ರಮಿಸಬೇಕು” ಎಂದು ಹೇಳಿದರು.

Advertisements

ಕಾರ್ಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಂಜುಳಾ ಹಿರೇಮನಿ, ಪುರಸಭೆ ವ್ಯವಸ್ಥಾಪಕ ಸುರೇಶ ಬಾಗೇವಾಡಿ, ಸಿಡಿಪಿಒ ಬಸವರಾಜ ನಿಲುಗಲ್, ಪುರಸಭೆ ವ್ಯವಸ್ಥಾಪಕ ಸುರೇಶ, ಡಿಎಸ್ಎಸ್ ಮುಖಂಡ ಪರಶುರಾಮ ದಿಂಡವಾರ, ಅಶೋಕ ಚಲವಾದಿ, ಅರವಿಂದ ಸಾಲವಾಡಗಿ, ಗುರುರಾಜ ಗೂಡಿಮನಿ, ಕಚೇರಿ ಸಿಬ್ಬಂದಿಗಳಾದ ಮಂಜು ಹಳ್ಳೂರ, ರಾಮಚಂದ್ರ ಘಾಟಗೆ, ಕಸಾಪ ತಾಲೂಕಾಧ್ಯಕ್ಷ ಶಿವಾನಂದ ಡೋಣೂರ, ನಿವೃತ್ತ ಶಿಕ್ಷಕ ಎಸ್ ಎ ದೇಗಿನಾಳ, ಡಿಎಸ್ಎಸ್ ಮುಖಂಡರಾದ ಯಮನಪ್ಪ ಚಲವಾದಿ, ಯಮನೂರಿ ಅಂಬಳನೂರ, ರಾಜು ದಿಂಡವಾರ, ಶೇಖರ ಕಾಣೆ, ವೈ ಎಸ್ ಕಾನಾಗಡ್ಡಿ ಅವಿನಾಶ ಬಾನಿಕೋಲ, ಶಿವು ಮಸಬಿನಾಳ, ಶ್ರೀಶೈಲ ಹೆಬ್ಬಾಳ, ರಮೇಶ ಮ್ಯಾಗೇರಿ ಸೇರಿದಂತೆ ಅನೇಕರು ಇದ್ದರು.

ಇದನ್ನೂ ಓದಿ: ವಿಜಯಪುರ | ಮೇ 14ರಂದು ರಾಜ್ಯಮಟ್ಟದ ಜನ ಹೋರಾಟ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X