ಮಂಡ್ಯ | ಕೃಷಿ ಇಲಾಖೆಯಿಂದ ಸಬ್ಸಿಡಿ ದರದಲ್ಲಿ ಸಲಕರಣೆ ವಿತರಿಸಿ : ಶಾಸಕ ಎಚ್, ಟಿ. ಮಂಜು

Date:

Advertisements

ಮಂಡ್ಯ ಜಿಲ್ಲೆ, ಕೃಷ್ಣರಾಜಪೇಟೆ ತಾಲೂಕಿನ ಸಿಂದಘಟ್ಟ ಗ್ರಾಮದ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಗ್ರಾಮ ಪಂಚಾಯಿತಿ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಭಾಗಿಯಾಗಿದ್ದ ಶಾಸಕ ಎಚ್. ಟಿ. ಮಂಜು ಕೃಷಿ ಇಲಾಖೆಯಿಂದ ರೈತರಿಗೆ ಸಬ್ಸಿಡಿ ದರದಲ್ಲಿ ಸಲಕರಣೆ ವಿತರಿಸಿ ಎಂದು ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು.

ರೈತರಿಗೆ ಕೃಷಿ ಇಲಾಖೆಯಿಂದ ಸಬ್ಸಿಡಿ ದರದಲ್ಲಿ ಪೂರೈಕೆ ಆಗುವಂತಹ ಸಲಕರಣೆಗಳ ಮಾಹಿತಿ ಹಾಗೂ ವಿವಿಧ ಇಲಾಖೆಗಳಿಂದ ಸಾರ್ವಜನಿಕರಿಗೆ ಒದಗಿಸಲಾಗುವ ಸೇವಾ ಸೌಲಭ್ಯಗಳನ್ನು ಪಂಚಾಯಿತಿ ಮಟ್ಟದಲ್ಲಿ ವ್ಯಾಪಕ ಪ್ರಚಾರ ಕೈಗೊಂಡು. ಅರ್ಹ ಫಲಾನುಭವಿಗಳ ಬೇಡಿಕೆಗಳಿಗೆ ಅನುಗುಣವಾಗಿ ಸ್ಪಂದಿಸಿ ಸೇವೆ ಒದಗಿಸಲು ಕ್ರಮ ವಹಿಸಬೇಕು.

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ತೋಟಗಾರಿಕೆ ಇಲಾಖೆಯಲ್ಲಿ ಕೈಗೆತ್ತಿಕೊಳ್ಳಬಹುದಾದ ಕಾಮಗಾರಿಗಳನ್ನು ಗ್ರಾಮ ಪಂಚಾಯತ್ ಗಳ ಮಟ್ಟದಲ್ಲಿ ಕ್ರಿಯಾ ಯೋಜನೆ ತಯಾರಿಸಿ ಅನುಷ್ಠಾನಗೊಳಿಸಲು ಕ್ರಮ ವಹಿಸಬೇಕು. ಮೀನುಗಾರಿಕೆಯ ಇಲಾಖೆ ವತಿಯಿಂದ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯದ ಯೋಜನೆ ಬಗ್ಗೆ ವಿವರಣೆ ನೀಡಬೇಕು.

Advertisements

ಸಿಂದಘಟ್ಟ ಶಾಲೆಯ ಎಸ್ ಎಸ್ ಎಲ್ ಸಿ ಫಲಿತಾಂಶದ ಬಗ್ಗೆ ಬೇಸರ ವ್ಯಕ್ತಪಡಿಸಿ ಜನ ಸಾಮಾನ್ಯರಿಗೆ ಜನ ಸ್ನೇಹಿಯಾಗಿ ಕಾರ್ಯ ನಿರ್ವಹಿಸಬೇಕೆಂದು ಶಾಸಕ ಎಚ್ ಟಿ ಮಂಜು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಭಾರತ ವೈವಿಧ್ಯಮಯ ದೇಶ; ಬಹುತ್ವದಿಂದ ಕೂಡಿ ನಾವೆಲ್ಲಾ ಒಂದಾಗಿದ್ದೇವೆ : ಸಚಿವ ಡಾ. ಹೆಚ್. ಸಿ. ಮಹದೇವಪ್ಪ

ಸಭೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಲಾವಣ್ಯ ಕುಮಾರ್, ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಸುಷ್ಮಾ, ತಾಲೂಕ್ ಪಂಚಾಯತ್ ಯೋಜನಾಧಿಕಾರಿ ಶ್ರೀನಿವಾಸ್, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೆ. ಜೆ. ವಾಣಿ ಹಾಗೂ ಗ್ರಾಮ ಪಂಚಾಯತಿ ಸದಸ್ಯರುಗಳು, ತಾಲೂಕು ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X