ಧಾರವಾಡ ಜಿಲ್ಲೆ ಕಲಘಟಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಿ ಎಂ ನಿಂಬಣ್ಣವರ (76) ಭಾನುವಾರ ನಿಧನರಾದರು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಬನ್ನೇರುಘಟ್ಟ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಗೆಲುವು ಸಾಧಿಸಿದ್ದರು. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸಂಗೇದೇವರಕೊಪ್ಪ ಗ್ರಾಮದ ರೈತ ಕುಟುಂಬದಲ್ಲಿ 1947ರಲ್ಲಿ ಜನಿಸಿದ್ದಾರೆ. ಹುಬ್ಬಳ್ಳಿಗೆ ಮೃತದೇಹ ಸಾಗಿಸಲಿದ್ದು, ಸೋಮವಾರ ಮಧ್ಯಾಹ್ನ 3 ಗಂಟಗೆ ಅಂತ್ಯಕ್ರೀಯೆ ನಡೆಯಲಿದೆ.
ಸಿ ಎಂ ನಿಂಬಣ್ಣವರ್ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸಂಗೇದೇವರಕೊಪ್ಪ ಗ್ರಾಮದ ರೈತ ಕುಟುಂಬದಲ್ಲಿ 1947ರಲ್ಲಿ ಜನಿಸಿದದ್ದು, ಧಾರವಾಡದ ಜೆಎಸ್ಎಸ್ ಬನಶಂಕರಿ ಆರ್ಟ್ಸ್ ಕಾಲೇಜ್ನಿಂದ ಇಂಗ್ಲಿಷ್ ವಿಷಯದಲ್ಲಿ ಬಿಎ ಪದವಿ, ಕರ್ನಾಟಕ ವಿಶ್ವವಿದ್ಯಾಲಯದಿಂದ ರಾಜ್ಯಶಾಸ್ತ್ರದಲ್ಲಿ ಎಂಎ ಹಾಗೂ ಎಲ್ಎಲ್ಬಿ ಪದವಿ, ಮೈಸೂರು ವಿವಿಯಿಂದ ಬಿ.ಎಡ್ ಪದವಿ ಪಡೆದಿದ್ದಾರೆ.
ಈ ಸುದ್ದಿ ಓದಿದ್ದೀರಾ? ಹಾಸನ | ವಿದ್ಯುತ್ ತಂತಿ ಸ್ಪರ್ಶಿಸಿ ವೃದ್ಧೆ, ಹಸು ಸಾವು ಪ್ರಕರಣ; ಎಇಇ ಅಮಾನತು
ನಂತರ ಕಲಘಟಗಿ ತಾಲೂಕಿನ ಮಿಶ್ರೀಕೋಟಿಯಲ್ಲಿರುವ ಸಹಕಾರಿ ಶಿಕ್ಷಣ ಸಂಸ್ಥೆಯ ಪ್ರೌಢಶಾಲೆಯಲ್ಲಿ 1970ರಲ್ಲಿ ಇಂಗ್ಲಿಷ್ ಶಿಕ್ಷಕರಾಗಿ, ಬಳಿಕ ಪದೋನ್ನತಿ ಹೊಂದಿ ಮುಖ್ಯ ಶಿಕ್ಷಕರಾಗಿದ್ದರು. ಬಳಿಕ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರಾಗಿ ನಿವೃತ್ತರಾಗಿದ್ದರು.1995 ರಲ್ಲಿ ಬಿಜೆಪಿಗೆ ಸೇರ್ಪಡೆಯಾಗಿ ಸಕ್ರೀಯ ರಾಜಕಾರಣದಲ್ಲಿದ್ದರು.