ಗುಲಬರ್ಗಾ ವಿಶ್ವವಿದ್ಯಾಲಯ ಉಳಿಸಿ : ಎಐಡಿಎಸ್ಒ ಪ್ರತಿಭಟನೆ

Date:

Advertisements

ಗುಲಬರ್ಗಾ ವಿಶ್ವವಿದ್ಯಾಲಯ ಉಳಿಸುವಂತೆ ಒತ್ತಾಯಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿಗಳ ಸಂಘಟನೆಯ (ಎಐಡಿಎಸ್‌ಒ) ಜಿಲ್ಲಾ ಸಮಿತಿ ಮುಖಂಡರು ಮತ್ತು ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಎಐಡಿಎಸ್ಒ ರಾಜ್ಯ ಉಪಾಧ್ಯಕ್ಷ ಹಣಮಂತ ಎಸ್.ಎಚ್. ಮಾತನಾಡಿ, ‘ಗುಲಬರ್ಗಾ ವಿಶ್ವವಿದ್ಯಾಲಯವು 45 ವರ್ಷಗಳಿಂದ ಕಲ್ಯಾಣ ಕರ್ನಾಟಕ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ನೀಡಿ ಅವರ ಭವಿಷ್ಯವನ್ನು ರೂಪಿಸಿದೆ. ಆಳುವ ಸರ್ಕಾರಗಳು ಉನ್ನತ ಶಿಕ್ಷಣವನ್ನು ಬಲಪಡಿಸಿ ಉಳಿಸಲು ಮುಂದಾಗಬೇಕಿತ್ತು. ಆದರೆ, ಅಂತಹ ಯಾವುದೇ ಪ್ರಯತ್ನಗಳು ನಡೆಯುತ್ತಿಲ್ಲ’ ಎಂದರು.

‘ವಿ.ವಿಯ ಜಾಗವನ್ನು ಶಿಕ್ಷಣೇತರ ವಿವಿಧ ಇಲಾಖೆಗಳಿಗೆ ನೀಡಲು ಮುಂದಾಗಿರುವುದು ದುರಂತ. ವಿ.ವಿ ಅಭಿವೃದ್ಧಿಗೆ ಯಾವುದೇ ಕ್ರಮ ತೆಗೆದುಕೊಳ್ಳದೆ, ವಿದ್ಯಾರ್ಥಿ ವಿರೋಧಿ ನಿಲುವುಗಳು ತೆಗೆದುಕೊಳ್ಳಲಾಗುತ್ತಿದೆ. ವಿ.ವಿಯ ಬೆಳವಣಿಗೆಗೆ ಆಸಕ್ತಿ ಇಲ್ಲದೆ ಇರುವುದು ಎದ್ದು ತೋರುತ್ತದೆ’ ಎಂದು ಹೇಳಿದರು.

Advertisements

ಎಐಡಿಎಸ್ಒ ಜಿಲ್ಲಾ ಖಜಾಂಚಿ ವೆಂಕಟೇಶ ದೇವದುರ್ಗ ಮಾತನಾಡಿ, ‘ಅನ್ಯ ಕಾರ್ಯಗಳಿಗೆ ವಿ.ವಿ ಜಾಗವನ್ನು ಕೊಡುವುದರಿಂದ ಶೈಕ್ಷಣಿಕ ವಾತಾವರಣ ಹಾಳಾಗುತ್ತದೆ’ ಎಂದರು.‘ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ನೀಡಲು ಸರಿಯಾದ ಕ್ರಮಗಳನ್ನು ಕೈಗೊಂಡು ಮೂಲಸೌಕರ್ಯ ಒದಗಿಸಬೇಕು. ವಿಶ್ವವಿದ್ಯಾಲಯದ ಜಾಗ ಸಂಪೂರ್ಣವಾಗಿ ವಿದ್ಯಾರ್ಥಿಗಳ ಸಂಶೋಧನೆ ಮತ್ತು ಉನ್ನತೀಕರಣಕ್ಕೆ ಬಳಸಬೇಕು’ ಎಂದು ಆಗ್ರಹಿಸಿದರು.

ಎಐಡಿಎಸ್ಒ ಜಿಲ್ಲಾ ಉಪಾಧ್ಯಕ್ಷರಾದ ಪ್ರೀತಿ ದೊಡ್ಡಮನಿ, ಗೋವಿಂದ ಯಳವರ, ಜಿಲ್ಲಾ ಕಾರ್ಯದರ್ಶಿ ತುಳಜರಾಮ ಎನ್.ಕೆ, ಸದಸ್ಯರಾದ ಯುವರಾಜ್, ರಾಹುಲ್, ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X