ಕಲಬುರಗಿ | ಗೌತಮ ಬುದ್ಧ ಜಯಂತಿ ಆಚರಿಸದ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಿ : ದಲಿತ ಸೇನೆ ಆಗ್ರಹ

Date:

Advertisements

ಜೇವರ್ಗಿ ತಾಲೂಕಿನ ಬಹುತೇಕ ಸರ್ಕಾರಿ ಕಚೇರಿಗಳಲ್ಲಿ ಗೌತಮ ಬುದ್ಧ ಜಯಂತಿ ಆಚರಿಸದೆ ಅಗೌರವ ತೋರಿದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ದಲಿತ ಸೇನೆ ಒತ್ತಾಯಿಸಿದೆ.

ಈ ಸಂಬಂಧ ಜೇವರ್ಗಿ ತಾಲೂಕು ಸಮಿತಿಯಿಂದ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ದಲಿತ ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಗೋಲಾ ಮಾತನಾಡಿ, ‘ಮೇ12 2025 ರಂದು ಬುದ್ಧ ಪೂರ್ಣಿಮೆ ದಿನದಂದು ಗೌತಮ ಬುದ್ಧರ ಜಯಂತಿಯನ್ನು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಆಚರಣೆ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿದೆ. ಆದರೆ ತಾಲೂಕಿನ ವಿವಿಧ ಸರ್ಕಾರಿ ಕಚೇರಿಗಳಲ್ಲಿ ಗೌತಮ ಬುದ್ಧರ ಜಯಂತಿ ಆಚರಿಸದೆ ಅಗೌರವ ತೋರಿದ್ದಾರೆ’ ಎಂದು ದೂರಿದರು.

Advertisements

‘ಜೇವರ್ಗಿ ತಾಲೂಕಿನ ಆಂದೋಲಾ ಗ್ರಾಮದ ಗ್ರಾಪಂ ಪಿಡಿಒ ವಿಜಯಕುಮಾರ್ ನವಣಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸದೇ ಕೆಳಹಂತದ ಸಿಬ್ಬಂದಿ ಮುಖಾಂತರ ಕಾಟಾಚಾರಕ್ಕೆ ಭಗವಾನ್ ಬುದ್ಧರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ್ದಾರೆ’ ಎಂದು ಆರೋಪಿಸಿದರು.

ಇದನ್ನೂ ಓದಿ : ಗುಲಬರ್ಗಾ ವಿಶ್ವವಿದ್ಯಾಲಯ ಉಳಿಸಿ : ಎಐಡಿಎಸ್ಒ ಪ್ರತಿಭಟನೆ

‘ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ, ಸರ್ಕಾರಿ ಆಸ್ಪತ್ರೆ, ಶಾಲಾ-ಕಾಲೇಜುಗಳಲ್ಲಿ ಆಚರಣೆ ಮಾಡದೆ ಸಂಪೂರ್ಣ ನಿರ್ಲಕ್ಷಿಸಿ ಶಾಂತಿಯ ಸಂದೇಶ ಸಾರಿದ ಗೌತಮ ಬುದ್ಧರಿಗೆ ಅವಮಾನಿಸಿದ್ದಾರೆ. ಗೌತಮ ಬುದ್ಧರ ಜಯಂತಿ ಆಚರಿಸಿದ ವೇಳೆ ತೆಗೆಯಲಾದ ಜಿಪಿಎಸ್, ಫೋಟೋ ಸಂಗ್ರಹಿಸಿ, ಜಯಂತಿ ಆಚರಣೆ ಮಾಡದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ‘ ಎಂದು ಆಗ್ರಹಿಸಿದರು.

ದಲಿತ ಸೇನೆ ಅಧ್ಯಕ್ಷ ಶಿವಶರಣಪ್ಪ ಮುಂದೇವಾಲ, ಪ್ರಕಾಶ ಕಾಂಬಳೆ, ಜಗದೀಶ್ ನಡಗಟ್ಟಿ, ಖಮರ್ ಪೀರಾನಾಬ್, ಶರಣು ರತ್ನಾಕರ್, ಅಮರನಾಥ ಬೊಮ್ಮನಹಳ್ಳಿ,ದೇವರಾಜ ಕೂಡಲಗಿ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X