ಪತಿಯ ವಿವಾಹೇತರ ಸಂಬಂಧ ಕ್ರೌರ್ಯವಾಗಲೀ, ಆತ್ಮಹತ್ಯೆಗೆ ಪ್ರಚೋದನೆಯಾಗಲೀ ಅಲ್ಲ: ಹೈಕೋರ್ಟ್

Date:

Advertisements

ಪತಿಯ ವಿವಾಹೇತರ ಸಂಬಂಧವು ಪತ್ನಿಗೆ ತೊಂದರೆ ಉಂಟುಮಾಡಿದೆ ಎಂದು ಸಾಬೀತಾಗದ ಹೊರತು, ಅದು ಕ್ರೌರ್ಯ ಅಥವಾ ಆತ್ಮಹತ್ಯೆಗೆ ಪ್ರಚೋದನೆ ಆಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ.

ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಮತ್ತು ಕೊಲೆ ಆರೋಪದ‌ ಮೇಲೆ‌ ಬಂಧನಕ್ಕೊಳಗಾಗಿದ್ದ ಆರೋಪಿ ಪತಿಗೆ ಜಾಮೀನು ಮಂಜೂರು ಮಾಡಿದೆ.

ಮಹಿಳೆಯೊಬ್ಬರು 2024ರ ಮಾರ್ಚ್ 18ರಂದು ತನ್ನ ಪತಿಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಸಾವಿಗೆ ಆತ್ಮಹತ್ಯೆಗೆ ಪ್ರಚೋದನೆ, ವರದಕ್ಷಿಣೆ ಕಿರುಕುಳ ಹಾಗೂ ಪತಿಯ ವಿವಾಹೇತರ ಸಂಬಂಧ ಕಾರಣವೆಂದು ಆರೋಪಿಸಲಾಗಿತ್ತು. ಮಹಿಳೆಯ ಪತಿಯನ್ನು ಪೊಲೀಸರು ಬಂಧಿಸಿದ್ದರು.

Advertisements

ಆರೋಪಿ ಪತಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಸಂಜೀವ್ ನರುಲಾ ವಿಚಾರಣೆ ನಡೆಸಿದ್ದಾರೆ. “ವಿವಾಹೇತರ ಸಂಬಂಧವು ಪತಿಯನ್ನು ವರದಕ್ಷಿಣೆ, ಕೊಲೆಗೆ ಸಿಲುಕಿಸಲು ಆಧಾರವಲ್ಲ” ಎಂದು ಹೇಳಿದ್ದಾರೆ.

“ಮೃತ ಮಹಿಳೆಯು ಪತಿಯ ವಿವಾಹೇತರ ಸಂಬಂಧದ ಕಾರಣಕ್ಕಾಗಿ ಸಾವನ್ನಪ್ಪಿದ್ದರೆ (ಆತ್ಮಹತ್ಯೆ ಮಾಡಿಕೊಂಡಿದ್ದರೆ) ಪ್ರಕರಣದಲ್ಲಿ ವರದಕ್ಷಿಣೆ ಬೇಡಿಕೆ ಅಥವಾ ಕಿರುಕುಳ ಹೇಗೆ ಬರುತ್ತದೆ. ವಿವಾಹೇತರ ಸಂಬಂಧ ಮತ್ತು ವರದಕ್ಷಿಣೆ ಕಿರುಕುಳ ನಡುವಿನ ಸಂಬಂಧವನ್ನು ಸಾಕ್ಷ್ಯಗಳ ಆಧಾರದ ಮೇಲೆ ಸಾಬೀತುಪಡಿಸಬೇಕು” ಎಂದು ನ್ಯಾಯಾಧೀಶರು ಹೇಳಿದ್ದಾರೆ.

“ಪ್ರಕರಣದಲ್ಲಿ ಮಹಿಳೆ ಜೀವಂತವಾಗಿರುವವರೆಗೆ, ಮಹಿಳೆಯಾಗಲೀ ಅಥವಾ ಆಕೆಯ ಪೋಷಕರಾಗಲೀ ವರದಕ್ಷಿಣೆ ಕಿರುಕುಳದ ಯಾವುದೇ ಆರೋಪ ಮಾಡಿಲ್ಲ. ದೂರನ್ನೂ ನೀಡಿಲ್ಲ. ಮಹಿಳೆ ಮೃತಪಟ್ಟ ಬಳಿಕ ವರದಕ್ಷಿಣೆ ಆರೋಪ‌ ಮಾಡಲಾಗಿದೆ. ಇಂತಹ ಆರೋಪಗಳು ನಂಬಿಕಾರ್ಹವಲ್ಲ. ಪ್ರಕರಣದ ಪೂರ್ಣ ವಿಚಾರಣೆಯ ನಂತರವೇ ನ್ಯಾಯಾಲಯವು ತನ್ನ ಅಂತಿಮ ನಿರ್ಧಾರವನ್ನು ನೀಡಲು ಸಾಧ್ಯ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X