ಮಂಗಳೂರು | ‘ಏಮ್ಸ್’ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಅಬ್ದುಲ್ಲಾ ಮದುಮೂಲೆ ಆಯ್ಕೆ

Date:

Advertisements

ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಕಡಬದ ಏಮ್ಸ್ ಎಜುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ (ರಿ) ನ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಖ್ಯಾತ ಲೆಕ್ಕ ಪರಿಶೋಧಕ, ಸಾಮಾಜಿಕ, ಧಾರ್ಮಿಕ ಮುಂದಾಳು ಅಬ್ದುಲ್ಲಾ ಮದುಮೂಲೆ ಅವರು ಆಯ್ಕೆಯಾಗಿದ್ದಾರೆ.

ಅಬುಧಾಬಿಯ ಪ್ರತಿಷ್ಠಿತ ಕಂಪೆನಿಯ ಫೈನಾನ್ಸ್ ವಿಭಾಗದ ಉನ್ನತ ಅಧಿಕಾರಿಯಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿರುವ ಅಬ್ದುಲ್ಲಾ ಮಾದುಮೂಲೆಯವರು ಅಬುಧಾಬಿ ಇಂಡಿಯನ್ ಸ್ಕೂಲ್ ನ ಬೋರ್ಡ್ ಸದಸ್ಯರಾಗಿ, ಎಸ್ ಡಿ ಎಂ ಕಾಲೇಜು ಉಜಿರೆಯ ಗ್ಲೋಬಲ್ ಅಲುಮ್ಮಿ ಅಸೋಸಿಯೇಷನ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಅಬುಧಾಬಿಯ ‘ಬ್ಯಾರೀಸ್ ವೆಲ್ಫೇರ್ ಫೋರಂ’ನ ಪ್ರಧಾನ ಕಾರ್ಯದರ್ಶಿಯಾಗಿರುವ ಅಬ್ದುಲ್ಲಾ ಮದುಮೂಲೆಯವರ ಸಾಮಾಜಿಕ ಸೇವೆಯನ್ನು ಗುರುತಿಸಿ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

Advertisements

ಉಪ್ಪಿನಂಗಡಿಯ ಫೌಝಿಯಾ ಬಿ ಎಸ್ ಹಾಗೂ ಕಡಬದ ಸಮೀರಾ ಕೆ ಎ ಎಂಬ ಇಬ್ಬರು ಸ್ನೇಹಿತೆಯರು ಪ್ರಾರಂಭಿಸಿದ ಏಮ್ಸ್ ಎಜುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ (ರಿ) ಪ್ರೌಢಶಾಲೆಯಿಂದ ಪದವಿಯವರೆಗೆ ಶಿಕ್ಷಣ ನೀಡುತ್ತಿದೆ.

ಮಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಉಪಕುಲಪತಿ ಡಾ. ಸುಬ್ರಹ್ಮಣ್ಯ ಎಡಪಡಿತ್ತಾಯ ಅವರು ಆಡಳಿತ ಮಂಡಳಿಯ ಗೌರವಾಧ್ಯಕ್ಷರಾಗಿದ್ದು, ಮಾಜಿ ಶಾಸಕಿ ಶಕುಂತಲಾ ಶೆಟ್ಟಿಯವರು ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ ಎಂದು ‘ಏಮ್ಸ್’ ಪ್ರಕಟಣೆಯಲ್ಲಿ ತಿಳಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X