ಹಾಸನ l ಪ್ರೇಮ ವಿವಾಹಕ್ಕೆ ಪೋಷಕರ ನಿರಾಕರಣೆ: ಮಗಳನ್ನು ಕರೆದೊಯ್ಯುವಾಗ ಕಾರಿನಲ್ಲಿ ಜೋತಾಡಿದ  ತಂದೆ 

Date:

Advertisements

ಅಪ್ಪನ ಎದುರೇ ಮಗಳನ್ನು ಕಾರಿನಲ್ಲಿ ಅಪಹರಿಸಿದ ಆರೋಪ ಕೇಳಿ ಬಂದಿರುವ ಘಟನೆ ಹಾಸನ ಜಿಲ್ಲೆ  ಬೇಲೂರು ತಾಲೂಕಿನ, ಅರೇಹಳ್ಳಿ ಗ್ರಾಮದ ಮುಖ್ಯ ರಸ್ತೆಯಲ್ಲಿ ನಡೆದಿದೆ. 

ಚನ್ನರಾಯಪಟ್ಟಣ ಮೂಲದ ಯುವಕ ಪ್ರಜ್ವಲ್ ಮತ್ತು ಮಲಸಾವರ ಗ್ರಾಮದ ಪ್ರಸ್ಟಲ್ ಡಿಯೀಲಾ ಫರ್ನಾಂಡೀಸ್ (19) ಪ್ರೇಮಿಗಳು. ಎರಡು ತಿಂಗಳ ಹಿಂದೆ ಮದುವೆಯಾಗಿದ್ದರು. ಈ ವಿಚಾರ ತಿಳಿದ ಯುವತಿ ಪ್ರಸ್ಟಲ್ ಡಿಯಲಾರ ತಂದೆ-ತಾಯಿ ಮರಳಿ ಮನೆಗೆ ಬರುವಂತೆ ಮಗಳಿಗೆ ತಿಳಿಸಿದ್ದಾರೆ. ಪೋಷಕರ ಒತ್ತಡ ಹಿನ್ನೆಲೆಯಲ್ಲಿ ಯುವತಿ ಪ್ರಸ್ಟಲ್ ಡಿಯೀಲಾ ಫರ್ನಾಂಡೀಸ್ ಮರಳಿ ಮನೆಗೆ ಬಂದಿದ್ದಾರೆ. ಪ್ರಸ್ಟಲ್ ಡಿಯೀಲಾ ಫರ್ನಾಂಡೀಸ್​ ಮನೆಗೆ ಮರಳುತ್ತಿದ್ದಂತೆ ಯುವತಿಯ ಪೋಷಕರು ಪ್ರೇಮ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಪ್ರೇಮ ವಿವಾಹಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸುತ್ತಿರುವುದರ ಬಗ್ಗೆ ಪ್ರಸ್ಟಲ್ ಡಿಯೀಲಾ ಫರ್ನಾಂಡೀಸ್ ಪತಿ ಪ್ರಜ್ವಲ್​ಗೆ ಹೇಳಿದ್ದಾರೆ

ಅರೇಹಳ್ಳಿ ಗ್ರಾಮಕ್ಕೆ ಪ್ರಜ್ವಲ್​ ಬಂದು ಪತ್ನಿಯನ್ನು ತನ್ನ ಜೊತೆ ಕಳಸಿಕೊಡುವಂತೆ ಪ್ರಜ್ವಲ್ ಹೇಳಿದಾಗ​ ಪ್ರಸ್ಟಲ್ ಡಿಯೀಲಾ ಫರ್ನಾಂಡೀಸ್​ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ. ಮಂಗಳವಾರ (ಮೇ.13) ರಂದು ತಂದೆ ಜೊತೆ ಪ್ರಸ್ಟಲ್ ಡಿಯೀಲಾ ಫರ್ನಾಂಡೀಸ್​ ಅರೇಹಳ್ಳಿ ಪಟ್ಟಣದ ಹೈಸ್ಕೂಲ್ ಮುಂಭಾಗ ನಡೆದುಕೊಂಡು ಹೋಗುತ್ತಿರುವ ವೇಳೆ ಕಾರಿನಲ್ಲಿ ಬಂದ ಪ್ರಜ್ವಲ್​, ತನ್ನ ಪತ್ನಿ ಪ್ರಸ್ಟಲ್ ಡಿಯೀಲಾ ಫರ್ನಾಂಡೀಸ್​ರನ್ನು ಕರೆದುಕೊಂಡು ಹೋಗಿದ್ದಾರೆ. 

ಇದನ್ನೂ ಓದಿದ್ದೀರಾ?ಹಾಸನ | ತಹಶೀಲ್ದಾರರ ಭ್ರಷ್ಟಾಚಾರ ವಿರೋಧಿಸಿ ಕಚೇರಿಗೆ ಮುತ್ತಿಗೆ; ಪ್ರತಿಭಟನಾಕಾರರ ಬಂಧನ

ಈ ವೇಳೆ ತಡೆಯಲು ಹೋಗಿ ಪ್ರಸ್ಟಲ್ ಡಿಯೀಲಾ ಫರ್ನಾಂಡೀಸ್​​ ರ ತಂದೆ ಕಾರಿನ ಡೋರ್​ಗೆ ಜೋತು ಬಿದ್ದಿದ್ದಾರೆ. ಚಾಲಕ ಮಾತ್ರ ಕಾರು ನಿಲ್ಲಿಸದೆ ಸುಮಾರು 200 ಮೀಟರ್ ಪ್ರಸ್ಟಲ್ ಡಿಯೀಲಾ ಫರ್ನಾಂಡೀಸ್​ರ ತಂದೆಯನ್ನು ಎಳೆದೊಯ್ದಿದ್ದಾನೆ. ದಂಪತಿಗಳು ಚನ್ನರಾಯಪಟ್ಟಣ ಶಹರ ಠಾಣೆ ಪೊಲೀಸರ ಎದುರು ಹಾಜಾರಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

Download Eedina App Android / iOS

X