ಬೀದರ್ | ಗೌತಮ ಬುದ್ಧರ ಅರಿವಿನ ಪ್ರಜ್ಞೆ ಬೆಳೆಸಿಕೊಳ್ಳಿ : ಸುಖದೇವ್ ಡೊಂಗ್ರೆ

Date:

Advertisements

ಕಮಲನಗರ ತಾಲೂಕಿನ ಬೆಳಕುಣಿ (ಭೋ) ಗ್ರಾಮದಲ್ಲಿ ತಥಾಗತ ಗೌತಮ ಬುದ್ಧರ 2588ನೇ ಜನ್ಮ ವಾರ್ಷಿಕೋತ್ಸವವನ್ನು ಪ್ರಜ್ಞೆ ಮತ್ತು ಉತ್ಸಾಹದಿಂದ ಆಚರಿಸಲಾಯಿತು.

ಪ್ರೊ.ದಿಗಂಬ‌ರ್ ಡೊಂಗ್ರೆ ಅವರು ಪಂಚಶೀಲ ಧ್ವಜಾರೋಹಣ ನೆರವೇರಿಸಿದರು. ಕಪಿಲ್ ಡೊಂಗ್ರೆ ಅವರು ಬುದ್ಧ ಮತ್ತು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಯ ಬಳಿ ಪೂಜೆ ಸಲ್ಲಿಸಿದರು.

ಬಳಿಕ ಬುದ್ದ ಪೂರ್ಣಿಮೆಯ ಸಂಭ್ರಮದಲ್ಲಿ ಪಂಚಶೀಲ ಬುದ್ಧ ವಿಹಾರದಿಂದ ಅಂಬೇಡ್ಕರ್ ವೃತ್ತದವರೆಗೆ ಮೇಣದಬತ್ತಿ ಬೆಳಕಿನ ಮೆರವಣಿಗೆ ನಡೆಯಿತು.

Advertisements

ಚಿಂತಕ ಸುಖದೇವ್ ಡೊಂಗ್ರೆ ಅವರು ಮಾತನಾಡಿ, ‘ಬುದ್ಧರ ಪ್ರಜ್ಞೆ, ಶೀಲ ಮತ್ತು ಕರುಣೆಯನ್ನು ಅಳವಡಿಸಿಕೊಳ್ಳಬೇಕು. ಈ ಮೌಲ್ಯಗಳು ಒಳ್ಳೆಯ ನಡವಳಿಕೆ, ಸದಾಚಾರದ ಜೀವನ, ಸ್ನೇಹಪರತೆ, ಮತ್ತು ಕರುಣೆಯನ್ನು ಬೆಳೆಸುತ್ತವೆ. ಬೌದ್ಧ ತತ್ವಗಳನ್ನು ಅಳವಡಿಸಿಕೊಳ್ಳಲು ಮತ್ತು ಸಂತೋಷದಾಯಕ ಹಾಗೂ ಸಮೃದ್ಧ ಜೀವನಕ್ಕಾಗಿ ಅಷ್ಟಾಂಗ ಮಾರ್ಗವನ್ನು ಅನುಸರಿಸಲು ಅವರು ಕರೆ ನೀಡಿದರು.

ರಾಜಕುಮಾರ್ ಡೊಂಗ್ರೆ, ಶಿಕಿಂದರ್ ಕಾಂಬಳೆ, ತಾನಾಜಿ ಕಾಂಬಳೆ, ರಾಹುಲ್ ಗಾಯಕವಾಡ್, ರಾಜ್ ಡೊಂಗ್ರೆ ಯದವರಾವ್ ರಾನಡೆ, ಮಾರುತಿ ರಾನಡೆ, ಲೋಕೇಶ್ ರಾನಡೆ, ಮಾಧಬಾಯಿ ರಾನಡೆ, ದತ್ತಾ ಸಾವಂತ್, ವೈಭವ್ ಕಾಂಬಳೆ ಹಾಗೂ ಮಕ್ಕಳು, ಮಹಿಳೆಯರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X