ರಾಯಚೂರು| ವರದಕ್ಷಿಣೆ ಕಿರುಕುಳ ಸಾವು;ಆರೋಪಿ ಬಂಧಿಸುವಲ್ಲಿ ವಿಫಲರಾದ ಸಿಪಿಐ ಅಮಾನತಿಗೆ ಆಗ್ರಹ

Date:

Advertisements

ವರದಕ್ಷಿಣೆ ಕಿರುಕುಳಕ್ಕೆ ಸಾವಿಗೀಡಾದ ಶಾಂತಲಾ ಸಾವಿಗೆ ಕಾರಣರಾದ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲವಾದ ಲಿಂಗಸೂಗೂರು ಠಾಣೆಯ ಸಿಪಿಐ ಪುಂಡಲೀಕರನ್ನು ಸೇವೆಯಿಂದ ಅಮಾನತು ಮಾಡಬೇಕು ಎಂದು ಆಗ್ರಹಿಸಿ ಪ್ರಗತಿಪರ ಜಂಟಿ ಸಂಘಟನೆಗಳು ಪ್ರತಿಭಟಿಸಿದರು.

ನಗರದ ಗುರುಭವನದಿಂದ ಆರಂಭಗೊಂಡು, ಬಸ್ ನಿಲ್ದಾಣ, ನಗರದ ಮುಖ್ಯ ರಸ್ತೆಗಳ ಮೂಲಕ ಸಹಾಯಕ ಆಯುಕ್ತ ಕಚೇರಿವರೆಗೆ ಸಿಪಿಐ ವಿರುದ್ಧ ಘೋಷಣೆ ಹಾಕುವ ಮೂಲಕ ಮೆರವಣಿಗೆ ನಡೆಸಿ ಸಹಾಯಕ ಆಯುಕ್ತರ ಕಚೇರಿಗೆ ಮನವಿ ಸಲ್ಲಿಸಿದರು.

ಮೃತ ಶಾಂತಲಾನ್ನು ಸುನೀಲ್ ಎನ್ನುವ ವ್ಯಕ್ತಿಯ ಜೊತೆ ವಿವಾಹವಾಗಿರುತ್ತದೆ. ಮದುವೆ ನಂತರ ಸುನೀಲ್ ಹಾಗೂ ಅವರ ಕುಟುಂಬಸ್ಥರು ನಿರಂತರ ವರದಕ್ಷಣೆ ಕಿರುಕುಳ, ಮಕ್ಕಳಾಗಿಲ್ಲ ಎಂದು ದೈಹಿಕವಾಗಿ ಮಾನಸಿಕವಾಗಿ ಕಿರುಕುಳ ನೀಡಿದ್ದರಿಂದ ಶಾಂತಲಾ ಆರೋಗ್ಯ ಸಂಪೂರ್ಣ ಹದೆಗಟ್ಟು ಸಾವನ್ನಪ್ಪಿದ್ದು, ಈ ಸಂಬಂಧ ಲಿಂಗಸೂಗೂರು ಪೊಲೀಸ್ ಠಾಣೆಯಲ್ಲಿ ಕಳೆದ ತಿಂಗಳು ಏಪ್ರಿಲ್ 09 ರಂದು ಪ್ರಕರಣ ದಾಖಲಾಗಿರುತ್ತದೆ.

Advertisements

ಪ್ರಕರಣ ದಾಖಲಾಗಿ ಒಂದು ತಿಂಗಳು ಕಳೆದರೂ ಸಿಪಿಐ ಪುಂಡಲೀಕ ಪಟಾತರ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲರಾಗಿದ್ದಾರೆ. ಹಾಗೂ ನೊಂದ ಕುಟುಂಬಸ್ಥರು ಕೇಳಿದರೆ ಉಡಾಫೆ ಉತ್ತರ ನೀಡುವುದು ಮತ್ತು ಆರೋಪಿಗಳ ಜೊತೆ ಶಾಮೀಲಾಗಿ ಕಾಲಹರಣ ಮಾಡಲಾಗುತ್ತಿದೆ ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ತಕ್ಷಣ ಇವರನ್ನು ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು |ಕಾರ್ಮಿಕರ ಲೇಬರ್ ಕಾರ್ಡ್ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಎಸ್ಎಫ್ಐ ಜಿಲ್ಲಾಧ್ಯಕ್ಷ ರಮೇಶ್ ವೀರಾಪೂರು, ಶಾಂತಲಾನ್ನು ನಿರಂತರ ವರದಕ್ಷಿಣೆ ಕಿರುಕುಳ, ಮಕ್ಕಳಾಗಿಲ್ಲವೆಂದು ದೈಹಿಕ ಮಾನಸಿಕವಾಗಿ ನೊಂದು ಆರೋಗ್ಯದಲ್ಲಿ ಏರುಪೇರಾಗಿ ಸಾವನ್ನಪ್ಪಿದ್ದು, ಸಾಕ್ಷಿ ಸಮೇತ ಪೊಲೀಸ್ ಠಾಣೆಗೆ ದೂರು ನೀಡಿದರು ಆರೋಪಿಗಳನ್ನು ಬಂಧಿಸುವಲ್ಲಿ ಸಿಪಿಐ ವಿಫಲವಾಗಿದ್ದಾರೆ ಎಂದು ಆರೋಪಿಸಿದರು.

ಆರೋಪಿಗಳನ್ನು ಬಂಧಿಸುವಲ್ಲಿ ಸಿಪಿಐ ಜೊತೆ ಠಾಣೆಯಲ್ಲಿ ಚರ್ಚಿಸಿದಾಗ ನಮ್ಮ ಹತ್ತಿರ ಆಪ್ಷನ್ ಇಲ್ಲ, ನಾನು ಬಂಧಿಸಿದರೆ ಕೆಲಸದಿಂದ ವಜಾಗೊಳ್ಳುತ್ತೇನೆ. ನೀವು ಎಲ್ಲಿಗೆ ಹೋಗ್ತೀರಾ ಎಂದು ಉಡಾಫೆ ಉತ್ತರ ಕೊಡುವ ಮೂಲಕ ಮಾತನಾಡಿದ್ದಾರೆ. ನೊಂದ ಕುಟುಂಬಕ್ಕೆ ನ್ಯಾಯ ಕೊಡಿಸುವಲ್ಲಿ ಪೋಲಿಸರು ಮುಂದಾಗಬೇಕು ಹೊರೆತು ಆರೋಪಿಗಳ ಜೊತೆ ಶಾಮೀಲಾಗಿ ಪ್ರಕರಣವನ್ನು ತಮಗೆ ಸಂಬಂಧವಿಲ್ಲದಂತೆ ಇದ್ದಾನೆ ಎಂದು ಕಿಡಿಕಾರಿದರು.

ಕೂಡಲೇ ಸರಕಾರ ಸಿಪಿಐರನ್ನು ಅಮಾನತುಗೊಳಿಸಿ ಹಾಗೂ ಸಂಬಂಧ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳುವುದು ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ತಾಲೂಕು ಮುಖಂಡರಾದ ಸಾಹೀರಾ ಬಾನು, ಶಾಂತಕುಮಾರಿ, ಡಿವೈಎಫ್ಐ ನ ಜಿಲ್ಲಾ ಸಮಿತಿ ಸದಸ್ಯ ಚನ್ನಬಸವ ವಂದ್ಲಿಹೊಸೂರು, ಕೆಪಿಆರ್ ಎಸ್ ಮುಖಂಡರಾದ, ಅಪ್ಪಣ್ಣ ಕಾಂಬಳೆ, ನಿಂಗಪ್ಪ ಎಂ, ಆಂಜನೇಯ, ಹನುಮಂತ ಚಲುವಾದಿ, ಮಹಾಂತೇಶ ಬುದ್ದಿನ್ನಿ, ಸಿಐಟಿಯುನ ಶ್ರೀದರ್, ಖಾಜಾ ಮೈನುದ್ದೀನ್, ಬಾಬಾಜಾನಿ, ಶಂಸುದ್ದೀನ್, ಶಾಂತಲಾ ತಂದೆ ನರಸಿಂಗಪ್ಪ, ನಾರಾಯಣ್ ಗೊಂದಳಿ, ತುಕಾರಾಂ, ಶಂಕರ್, ಸುನೀಲ್, ಅನೀಲ್, ನಾಮದೇವ, ಕೃಷ್ಣ, ದೇವು ಸಿಂದೆ, ಬಾಲಕೃಷ್ಣ, ರವಿ ಪಾತಂಗೆ, ರಾಹುಲ್ ಸೇರಿದಂತೆ ಕುಟುಂಬಸ್ಥರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X