ಕೊಡಗು ಜಿಲ್ಲೆ, ಪೊನ್ನಂಪೇಟೆ ತಾಲ್ಲೂಕು ಶ್ರೀಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳ್ಳೂರು ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ರೋಷನ್ ಕುಮಾರ್ ಹಾಗೂ ಸಚಿನ್ ಕುಮಾರ್ ಮೇಲೆ ರಿವಾಲ್ವಾರ್ ನಿಂದ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ ಆರೋಪಿಗಳಾದ ಬಾಳೇರ ಟಿಮ್ಸನ್ ಮತ್ತು ತಾಯಿ ಬಾಳೇರ ಜ್ಯೋತಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಳೆದ ಹಲವು ವರ್ಷಗಳಿಂದ ಆಸ್ತಿ ಸಂಬಂಧವಾಗಿ ವಿವಾದವಿದ್ದು, ಗಾಯಾಳು ತಂದೆಯವರಾದ ಪೂವಪ್ಪ ಟಿಮ್ಸ್ ಅವರಿಗೆ ಕಂದಾಯ ಇಲಾಖೆಯ ದಾಖಲಾತಿಗಳಿಗೆ ಸಹಿ ಹಾಕಿಕೊಡದೆ ಕಿರುಕುಳ ನೀಡುತ್ತಿದ್ದರು. ಹಲವು ಬಾರಿ ಈ ಬಗ್ಗೆ ಕೇಳಿಕೊಂಡರು ಸ್ಪಂದಿಸದೆ ಇದ್ದಾಗ, ಮನೆಯ ಬಳಿಗೆ ತಾಯಿ ಮಗ ತೆರಳಿ ಕೇಳಿಕೊಂಡಾಗಲೂ ಕೂಡ ಸ್ಪಂದಿಸಿಲ್ಲ. ಮಾತಿಗೆ ಮಾತು ಬೆಳೆದು ರಿವಲ್ವಾರ್ ನಿಂದ ಗುಂಡು ಹಾರಿಸಿರುವುದಾಗಿ ತಿಳಿದು ಬಂದಿದೆ.
ಬಿ.ಪಿ. ಸಚಿನ್ ಕುಮಾರ್ ರವರು ದಿನಾಂಕ-13-05-2025 ರಂದು ಮಧ್ಯಾಹ್ನ 4-30 ಗಂಟೆಗೆ ಮನೆಯಲ್ಲಿದ್ದಾಗ ಬಾಳೇರ ಟಿಮ್ಸನ್ ಮತ್ತು ತಾಯಿ ಬಾಳೇರ ಜ್ಯೋತಿ ಕಾರಿನಲ್ಲಿ ಬಂದಿದ್ದಾರೆ. ನಿನ್ನೊಂದಿಗೆ ಮಾತನಾಡಬೇಕು ಎಂದು ಸಚಿನ್ ಕುಮಾರ್ ರವರನ್ನು ಕರೆದಿದ್ದಾರೆ. ಮನೆಯಿಂದ ಹೊರಗೆ ಬಂದ ಸಚಿನ್ ಕುಮಾರ್ ಜೊತೆ ಟಿಮ್ಸ ಜಗಳ ನಿರತನಾಗಿದ್ದಾನೆ. ಜೋರಾದ ಶಬ್ದವನ್ನು ಕೇಳಿ ಸಚಿನ್ ಕುಮಾರ್ ರವರ ಚಿಕ್ಕಪ್ಪನ ಮಗನಾದ ರೋಷನ್ ಕುಮಾರ್ ಸ್ಥಳಕ್ಕೆ ಬಂದಿದ್ದಾರೆ. ಟಿಮ್ಸ ನಿಂದಿಸಿದಲ್ಲದೆ,ತಲೆಗೆ ಹೊಡೆದಿದ್ದಾನೆ, ಆತನ ತಾಯಿ ಜ್ಯೋತಿ ಸಚಿನ್ ಕುಮಾರ್ ರವರ ಎಡ ಬೆನ್ನಿಗೆ ಕಚ್ಚಿದ್ದಾರೆ. ನಂತರ ಟಿಮ್ಸ ಕಾರಿನಲ್ಲಿದ್ದ ರಿವಾಲ್ವಾರ್ ತಂದು ಏಕಾಏಕಿ ಸಚಿನ್ ಕುಮಾರ್ ರವರ ಬಲಗಾಲಿಗೆ ಮತ್ತು ರೋಷನ್ ಕುಮಾರ್ ರವರ ಎಡ ಕುತ್ತಿಗೆ ಭಾಗಕ್ಕೆ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಕೊಡಗು | ಅರ್ಜಿ ಸಲ್ಲಿಕೆ ಅನುಸಾರ ಸಕಾಲ ಕಾಯ್ದೆಯಡಿ ಕಾಲಮಿತಿಯೊಳಗೆ ಮಾಹಿತಿ ನೀಡಿ : ವೆಂಕಟ್ ರಾಜಾ
ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಾಲಾಗಿದ್ದು. ವಿರಾಜಪೇಟೆ ಉಪ ವಿಭಾಗದ ಡಿಎಸ್ಪಿ ಮಹೇಶ್ ಕುಮಾರ್, ಕುಟ್ಟ ಪೊಲೀಸ್ ವೃತ್ತ ನಿರೀಕ್ಷಕ ಬಿ.ಎಸ್. ಶಿವರುದ್ರ, ಶ್ರೀಮಂಗಲ ಸಬ್ ಇನ್ಸ್ ಪೆಕ್ಟರ್ ರವೀಂದ್ರ, ಅಪರಾಧ ಪತ್ತೆ ಸಿಬ್ಬಂದಿಗಳು ಹಾಗೂ ತಾಂತ್ರಿಕ ಸಿಬ್ಬಂದಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ತನಿಖೆ ನಡೆಸಿ ಆರೋಪಿಗಳಿಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.