ಜೇವರ್ಗಿ ತಾಲ್ಲೂಕಿನ ರೇವನೂರ ಗ್ರಾಮದಲ್ಲಿ ಗುರುವಾರ ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟಿದ್ದಾನೆ.
ಶ್ರೀನಾಥ ದತ್ತಪ್ಪ ಮೈನಾಳ(26) ಮೃತ ಯುವಕ ಎಂದು ತಿಳಿದು ಬಂದಿದೆ.ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಬಿರುಗಾಳಿ ಸಹಿತ ಮಳೆ ಬೀಳಲು ಪ್ರಾರಂಭವಾಗಿದೆ. ಹೊಲದಿಂದ ಜಿಟಿಜಿಟಿ ಮಳೆಯಲ್ಲಿಯೇ ಮರಳಿ ಮನೆಗೆ ಬರುವಾಗ ಸಿಡಿಲು ಬಡಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಘಟನಾ ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಜೇವರ್ಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಬೀದರ್ | ಪತ್ನಿಯನ್ನು ಕೊಂದ ಪತಿ; ಆರೋಪಿ ಬಂಧನ