ಮುಂಬರುವ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಚುನಾವಣೆಗೆ ರಾಜಕಾರಣಿಗಳು ನಾಮಪತ್ರ ಸಲ್ಲಿಸಿದ್ದಾರೆ. ಸಂಘವು ರಾಜಕೀಯೇತರ ಆಗಿರಬೇಕು. ಕಲಾವಿದರು, ಸಾಹಿತಿಗಳು ಚುನಾವಣೆಗೆ ಸ್ಪರ್ಧಿಸಬೇಕು ಎಂದು ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಚಂದ್ರಶೇಖರ ರಾಯರ ಹೇಳಿದರು.
ಗುರುವಾರ ನಗರದ ಜರ್ನಲಿಸ್ಟ್ ಗಿಲ್ಡ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾವರ್ಧಕ ಸಂಘದ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷದವರು ಕಣಕ್ಕಿಳಿಯಲು ಮುಂದಾಗಿರುವುದು ಖಂಡನೀಯ. ಕವಿವಿ ಸಂಘವು ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯಾಗಿದ್ದು, ಸಂಘಕ್ಕೆ ಸಾಹಿತಿಯೇ ಅಧ್ಯಕ್ಷರಾಗಬೇಕು. ರಾಜಕೀಯ ವ್ಯಕ್ತಿಗಳ ಪ್ರವೇಶ ಆಗಬಾರದು.
ಇದನ್ನು ಓದಿದ್ದೀರಾ? ಧಾರವಾಡ | ಕೆಜಿಗೆ 2.7ಲಕ್ಷ; ‘ಮಿಯಾಝಾಕಿ’ ಮಾವಿನ ವಿಶೇಷತೆ ಏನು ಗೊತ್ತಾ?
ಆ ಹಿನ್ನೆಲೆಯಲ್ಲಿ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಅವರು ವಿದ್ಯಾವರ್ಧಕ ಸಂಘದ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ ತರಲು ವಿಫಲರಾಗಿದ್ದಾರೆ. ಹೀಗಾಗಿ ಅವರು ನಾಮಪತ್ರ ಹಿಂಪಡೆದರೆ ನಾನೂ ವಾಪಸ್ ಪಡೆಯುತ್ತೇನೆ. ಇಲ್ಲಿ ಸಾಹಿತಿಗಳಿಗೆ ಅವಕಾಶ ಕಲ್ಪಿಸಬೇಕು ಎಂದರು.