ಬೆಂಗಳೂರು ಹರೇ ಕೃಷ್ಣ ದೇವಸ್ಥಾನವು ಬೆಂಗಳೂರಿನ ಇಸ್ಕಾನ್ ಸೊಸೈಟಿಗೆ ಸೇರಿದ್ದು: ಸುಪ್ರೀಂ ಕೋರ್ಟ್

Date:

Advertisements

ಬೆಂಗಳೂರಿನಲ್ಲಿರುವ ಐತಿಹಾಸಿಕ ಹರೇ ಕೃಷ್ಣ ದೇವಸ್ಥಾನವು ಬೆಂಗಳೂರಿನ ಇಸ್ಕಾನ್ ಸೊಸೈಟಿಗೆ ಸೇರಿದ್ದು ಎಂದು ಶುಕ್ರವಾರ ಸುಪ್ರೀಂ ಕೋರ್ಟ್ ಹೇಳಿದೆ. ಈ ಮೂಲಕ ದೇವಸ್ಥಾನ ಮತ್ತು ಶೈಕ್ಷಣಿಕ ಸಂಕೀರ್ಣದ ನಿಯಂತ್ರಣದ ವಿಚಾರದಲ್ಲಿ ಇಸ್ಕಾನ್ ಮುಂಬೈ ಪರವಾಗಿ ತೀರ್ಪು ನೀಡಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಇಸ್ಕಾನ್ ಬೆಂಗಳೂರಿನ ಅರ್ಜಿಯನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿದೆ.

ನ್ಯಾಯಮೂರ್ತಿಗಳಾದ ಎ ಎಸ್ ಓಕಾ ಮತ್ತು ಆಗಸ್ಟೀನ್ ಜಾರ್ಜ್ ಮಾಸಿಹ್ ಅವರನ್ನೊಳಗೊಂಡ ಪೀಠವು ಈ ತೀರ್ಪು ನೀಡಿದೆ. 2011ರ ಮೇ 23ರಂದು ಹೈಕೋರ್ಟ್ ತೀರ್ಪನ್ನು ನೀಡಿದೆ. ಈ ತೀರ್ಪನ್ನು ಪಶ್ನಿಸಿ ಇಸ್ಕಾನ್ ಬೆಂಗಳೂರು 2011ರ ಜೂನ್ 2ರಂದು ಉನ್ನತ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ.

ಇದನ್ನು ಓದಿದ್ದೀರಾ? ‘ಇಸ್ಕಾನ್’ ನಿಷೇಧಕ್ಕೆ ಬಾಂಗ್ಲಾ ಹೈಕೋರ್ಟ್‌ ನಕಾರ

Advertisements

2009ರಲ್ಲಿ ಬೆಂಗಳೂರಿನ ಸ್ಥಳೀಯ ನ್ಯಾಯಾಲಯವು ಇಸ್ಕಾನ್ ಬೆಂಗಳೂರಿನ ಪರವಾಗಿ ತೀರ್ಪು ನೀಡಿತ್ತು. ಆದರೆ ಹೈಕೋರ್ಟ್ ಈ ತೀರ್ಪು ರದ್ದುಗೊಳಿಸಿ, ಬೆಂಗಳೂರಿನಲ್ಲಿರುವ ಹರೇ ಕೃಷ್ಣ ದೇವಸ್ಥಾನವು ಇಸ್ಕಾನ್ ಮುಂಬೈಗೆ ಸೇರಿದ್ದು ಎಂಬ ತೀರ್ಪು ನೀಡಿತು.

ಹೈಕೋರ್ಟ್ ತೀರ್ಪು ಪ್ರಶ್ನಿಸಿ ಬೆಂಗಳೂರು ಇಸ್ಕಾನ್‌ನ ಪದಾಧಿಕಾರಿ ಕೋದಂಡರಾಮ ದಾಸ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಕೋದಂಡರಾಮ ಅರ್ಜಿ ಪುರಸ್ಕರಿಸಿದ ಉನ್ನತ ನ್ಯಾಯಾಲಯವು ಬೆಂಗಳೂರಿನಲ್ಲಿ ಹರೇ ಕೃಷ್ಣ ದೇವಸ್ಥಾನವು ಬೆಂಗಳೂರಿನ ಇಸ್ಕಾನ್ ಸೊಸೈಟಿಗೆ ಸೇರಿದ್ದು ಎಂದು ತೀರ್ಪು ನೀಡಿದೆ.

ಕರ್ನಾಟಕ-ನೋಂದಾಯಿತ ಸಮಾಜವಾದ ಇಸ್ಕಾನ್ ಬೆಂಗಳೂರು, ದಶಕಗಳಿಂದ ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಅರ್ಜಿದಾರರು ವಾದಿಸಿದ್ದರು. 1860ರ ರಾಷ್ಟ್ರೀಯ ಸಂಘಗಳ ನೋಂದಣಿ ಕಾಯ್ದೆ ಮತ್ತು ಬಾಂಬೆ ಸಾರ್ವಜನಿಕ ಟ್ರಸ್ಟ್ ಕಾಯ್ದೆ, 1950ರ ಅಡಿಯಲ್ಲಿ ನೋಂದಾಯಿಸಲಾದ ಇಸ್ಕಾನ್ ಮುಂಬೈ, ಇಸ್ಕಾನ್ ಬೆಂಗಳೂರು ತನ್ನ ಶಾಖೆಯಾಗಿದೆ. ಇದರ ಆಸ್ತಿ ತನ್ನ ವ್ಯಾಪ್ತಿಗೆ ಸೇರಿದ ಎಂದು ಇಸ್ಕಾನ್ ಮುಂಬೈ ವಾದಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

Download Eedina App Android / iOS

X