ಅರ್ಮಾನ್ ಮಲಿಕ್‌ಗೆ ಜೀವ ಬೆದರಿಕೆ, ಬಂದೂಕು ಪರವಾನಗಿ ಕೋರಿದ ಯೂಟ್ಯೂಬರ್

Date:

Advertisements

ಯೂಟ್ಯೂಬರ್, ಗಾಯಕ ಮತ್ತು ರಿಯಾಲಿಟಿ ಶೋನಲ್ಲಿ ಭಾಗವಹಿಸುವ ಅರ್ಮಾನ್ ಮಲಿಕ್‌ಗೆ ಜೀವ ಬೆದರಿಕೆ ಬಂದಿದೆ. ಇದಾದ ಬೆನ್ನಲ್ಲೇ ಅರ್ಮಾನ್ ಮಲಿಕ್ ಪಂಜಾಬ್ ಪೊಲೀಸರಿಂದ ಬಂದೂಕು ಪರವಾನಗಿ ನೀಡುವಂತೆ ಕೋರಿದ್ದಾರೆ.

ಅರ್ಮಾನ್ ಕೊಲೆ ಬೆದರಿಕೆಗಳು ಬಂದಿದ್ದು, ಈ ಸಂಬಂಧ ವಿಡಿಯೋ ಒಂದು ವೈರಲ್ ಆಗಿದೆ. ಈ ಬೆನ್ನಲ್ಲೇ ತನ್ನ ಸುರಕ್ಷತೆಗಾಗಿ ಬಂದೂಕು ಪರವಾನಗಿ ಅತ್ಯಗತ್ಯ ಎಂದು ಅರ್ಮಾನ್ ಹೇಳಿದ್ದಾರೆ. ಸದ್ಯ ವಿಡಿಯೋ ಡಿಲೀಟ್ ಆಗಿದೆ.

ಇದನ್ನು ಓದಿದ್ದೀರಾ? ಬೆಂಗಳೂರು | ಹಳೆ ದ್ವೇಷಕ್ಕೆ ಸಂಗಡಿಗನ ಹತ್ಯೆ; ನಾಲ್ವರ ಬಂಧನ

Advertisements

ಗುಂಪೊಂದು ನಿರಂತರವಾಗಿ ಪಂಜಾಬ್‌ನ ಕಲಾವಿದರನ್ನು ಗುರಿಯಾಗಿಸಿಕೊಂಡು ಕಾಲಕಾಲಕ್ಕೆ ಕೊಲೆ ಬೆದರಿಕೆ ಮತ್ತು ಸುಲಿಗೆಯನ್ನು ಮಾಡುತ್ತಿವೆ. ಪಂಜಾಬ್ ಸಿನಿಮಾ ಉದ್ಯಮದ ಅರ್ಮಾನ್ ಮಲಿಕ್ ಈಗ ಇದಕ್ಕೆ ಬಲಿಯಾಗಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಅರ್ಮಾನ್ ವಿಡಿಯೋ ಹಾಕಿದ್ದಾರೆ. “ನನ್ನ ಸುರಕ್ಷತೆಗಾಗಿ ನಾನು ಶಸ್ತ್ರಾಸ್ತ್ರ ಪರವಾನಗಿಗೂ ಅರ್ಜಿ ಸಲ್ಲಿಸಿದ್ದೇನೆ. ನನ್ನ ಕುಟುಂಬ ಮತ್ತು ನನ್ನನ್ನು ನಾನು ರಕ್ಷಿಸಿಕೊಳ್ಳಬೇಕಾಗಿದೆ. ಪ್ರತಿ ಬಾರಿಯೂ ನನ್ನ ವಿರುದ್ಧ ಒಂದು ಪ್ರಕರಣವಿದೆ ಎಂದು ಕಾರಣ ನೀಡಿ ಪರವಾನಗಿಯನ್ನು ನಿರಾಕರಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಈ ಪ್ರಕರಣವು ಸಂಪೂರ್ಣವಾಗಿ ಸುಳ್ಳು ಮತ್ತು ಆಧಾರರಹಿತ. ನ್ಯಾಯಾಂಗದ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ. ಕೊನೆಗೆ ಸತ್ಯವು ಮೇಲುಗೈ ಸಾಧಿಸುತ್ತದೆ. ನನ್ನ ಕುಟುಂಬ ಮತ್ತು ನಾನು ಅಭದ್ರತೆಯ ಬೆಂಕಿಯ ಅಡಿಯಲ್ಲಿ ಬದುಕುತ್ತಿರುವುದನ್ನು ಮುಂದುವರಿಸಬೇಕೇ” ಎಂದು ಅರ್ಮಾನ್ ಪ್ರಶ್ನಿಸಿದ್ದಾರೆ.

ಇನ್ನು ಅಧಿಕಾರಿಗಳಿಗೆ ಪರಿಸ್ಥಿತಿಯ ಗಂಭೀರತೆಯನ್ನು ಅರ್ಥಮಾಡಿಕೊಳ್ಳಲು ಮನವಿ ಮಾಡಿದರು. ಒಬ್ಬ ತಂದೆ ಮತ್ತು ಜವಾಬ್ದಾರಿಯುತ ನಾಗರಿಕನಾಗಿ, ನನ್ನನ್ನು ಮತ್ತು ನನ್ನ ಮಕ್ಕಳನ್ನು ರಕ್ಷಿಸಿಕೊಳ್ಳುವ ಹಕ್ಕು ನನಗಿದೆ. ಈ ವಿನಂತಿಯು ಬಂಡಾಯವಲ್ಲ, ಆದರೆ ಸುರಕ್ಷತೆಗಾಗಿ ಮನವಿ ಎಂದಿದ್ದಾರೆ.

ಕಾನೂನು ಮಾರ್ಗಗಳನ್ನು ಅನುಸರಿಸುತ್ತಿದ್ದರೂ, ತಾನೂ ಮತ್ತು ಕುಟುಂಬಕ್ಕೆ ನಿರಂತರ ಬೆದರಿಕೆಗಳನ್ನು ಎದುರಿಸಬೇಕಾಗಿದೆ. ಆದ್ದರಿಂದ ಪರವಾನಗಿ ನೀಡಿ ಎಂದು ಮನವಿ ಮಾಡಿರಬಹುದು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X