ಇಡೀ ದೇಶ, ಸೇನೆ, ಯೋಧರು ಪ್ರಧಾನಿ ಪಾದಕ್ಕೆ ನಮಸ್ಕರಿಸುತ್ತದೆ: ಮಧ್ಯಪ್ರದೇಶ ಡಿಸಿಎಂ ವಿವಾದಾತ್ಮಕ ಹೇಳಿಕೆ

Date:

Advertisements

ಇಡೀ ದೇಶ, ಭಾರತೀಯ ಸೇನೆ, ಯೋಧರು ಪ್ರಧಾನಿ ನರೇಂದ್ರ ಮೋದಿ ಅವರ ಪಾದಕ್ಕೆ ನಮಸ್ಕರಿಸುತ್ತದೆ ಎಂದು ಮಧ್ಯಪ್ರದೇಶದ ಉಪಮುಖ್ಯಮಂತ್ರಿ ಜಗದೀಶ್ ದೇವ್ಡಾ ಅವರು ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದಾರೆ. ಜಗದೀಶ್ ದೇವ್ಡಾ ಭಾರತೀಯ ಸೇನೆಯ ಪಾತ್ರವನ್ನು ದುರ್ಬಲಗೊಳಿಸುತ್ತಿದ್ದಾರೆ ಎಂದು ವಿಪಕ್ಷಗಳು ದೂರಿದೆ.

ಜಬಲ್ಪುರದಲ್ಲಿ ನಡೆದ ನಾಗರಿಕ ರಕ್ಷಣಾ ಸ್ವಯಂಸೇವಕರ ತರಬೇತಿ ಕಾರ್ಯಕ್ರಮದ ಸಂದರ್ಭದಲ್ಲಿ, ಪಹಲ್ಗಾಮ್ ಭಯೋತ್ಪಾದಕಾ ದಾಳಿಗೆ ಪ್ರತೀಕಾರವಾಗಿ ನಡೆಸಿದ ಆಪರೇಷನ್ ಸಿಂಧೂರ ಕ್ರಮದ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಮಾತ್ರ ಶ್ಲಾಘಿಸಿದರು. ಸೇನೆ, ಯೋಧರು ಪ್ರಧಾನಿ ಪಾದಕ್ಕೆ ನಮಸ್ಕರಿಸುತ್ತದೆ” ಎಂದು ಹೇಳಿದ್ದಾರೆ. ಈ ಹೇಳಿಕೆಯು ತೀವ್ರ ಟೀಕೆಗೆ ಗುರಿಯಾಗಿದೆ.

ಇದನ್ನು ಓದಿದ್ದೀರಾ? ಉಗ್ರರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನೇ ಕಳುಹಿಸಿದ್ದೆವು: ಸಚಿವ ವಿಜಯ್ ಶಾ ವಿವಾದಾತ್ಮಕ ಹೇಳಿಕೆ

Advertisements

“ನಮ್ಮ ಸಹೋದರಿಯರ ಸಿಂಧೂರವನ್ನು ಅಳಿಸಿಹಾಕಿದ ಭಯೋತ್ಪಾದಕರು, ಅವರಿಗೆ ಆಶ್ರಯ ನೀಡುವವರನ್ನು ಬೇರುಸಹಿತ ನಿರ್ಮೂಲನೆ ಮಾಡುವವರೆಗೆ ನಾವು ವಿಶ್ರಾಂತಿ ಪಡೆಯುವುದಿಲ್ಲ. ಈ ವಿಚಾರದಲ್ಲಿ ನಾವು ಪ್ರಧಾನಿ ಮೋದಿ ಅವರಿಗೆ ಧನ್ಯವಾದ ತಿಳಿಸಬೇಕು. ಇಡೀ ದೇಶ ಮತ್ತು ನಮ್ಮ ಸೇನೆ ಪಿಎಂ ಮೋದಿ ಪಾದಗಳಿಗೆ ನಮಸ್ಕರಿಸುತ್ತಿದೆ. ಮೋದಿ ಅವರು ನೀಡಿದ ಸೂಕ್ತ ಉತ್ತರವನ್ನು ಎಷ್ಟು ಹೊಗಳಿದರೂ ಸಾಲದು” ಎಂದು ಹೇಳಿದರು.

ಭಾರತೀಯ ಸೇನೆಯು ಪ್ರಧಾನಿಯ ಮುಂದೆ ತಲೆಬಾಗುತ್ತದೆ ಎಂಬ ಹೇಳಿಕೆ ಈಗ ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಹೇಳಿಕೆಯು ಯೋಧರ ತ್ಯಾಗಕ್ಕೆ ಬೆಲೆಯೇ ಇಲ್ಲದಂತೆ ಮಾಡುತ್ತದೆ. ಭಾರತೀಯ ಸೇನೆಗೆ ಇರುವ ಗೌರವವನ್ನು ತಗ್ಗಿಸಲಾಗುತ್ತಿದೆ” ಎಂದು ವಿಪಕ್ಷಗಳು ಆರೋಪಿಸಿದೆ.

ದೇವ್ಡಾ ಹೇಳಿಕೆಯನ್ನು ಕಾಂಗ್ರೆಸ್ ತೀವ್ರವಾಗಿ ಟೀಕಿಸಿದೆ. “ತುಂಬಾ ಕೀಳಾದ ಮತ್ತು ನಾಚಿಕೆಗೇಡಿನ” ಹೇಳಿಕೆ ಎಂದು ಹೇಳಿದೆ. “ಇದು ಸೇನೆಯ ಶೌರ್ಯ ಮತ್ತು ಧೈರ್ಯಕ್ಕೆ ಮಾಡಿದ ಅವಮಾನ. ಇಂದು ಇಡೀ ದೇಶ ಸೇನೆಯ ಮುಂದೆ ತಲೆಬಾಗುತ್ತಿರುವಾಗ, ಬಿಜೆಪಿ ನಾಯಕರು ನಮ್ಮ ಧೈರ್ಯಶಾಲಿ ಸೇನೆಯ ಬಗ್ಗೆ ತಮ್ಮ ಕೀಳು ಭಾವನೆಯನ್ನು ವ್ಯಕ್ತಪಡಿಸುತ್ತಿದ್ದಾರೆ” ಎಂದು ದೂರಿದೆ.

ಈ ವಿವಾದಾತ್ಮಿಕ ಹೇಳಿಕೆ ನೀಡಿದ ದೇವ್ಡಾ ರಾಜೀನಾಮೆ ನೀಡಬೇಕು ಮತ್ತು ಬಿಜೆಪಿಯು ಅಧಿಕೃತವಾಗಿ ಕ್ಷಮೆಯಾಚಿಸಬೇಕು ಎಂದು ವಿರೋಧ ಪಕ್ಷಗಳು ಆಗ್ರಹಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X