ಮೊಸರಲ್ಲಿ ಕಲ್ಲು ಹುಡುಕುವ ಪಕ್ಷ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ ಟೀಕೆ

Date:

Advertisements

ಕಾಂಗ್ರೆಸ್ ಪಕ್ಷವು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದೆ. ಈ ನೀತಿ ಅವರನ್ನೇ ನುಂಗಲಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.

ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಕಾಂಗ್ರೆಸ್ಸಿನವರು ತಮ್ಮ ವಕ್ರಬುದ್ಧಿಯನ್ನು ಪ್ರದರ್ಶನ ಮಾಡಿದ್ದಾರೆ. ಮುಖ್ಯಮಂತ್ರಿಗಳು, ಪ್ರಿಯಾಂಕ ಖರ್ಗೆ, ದಿನೇಶ್ ಗುಂಡುರಾವ್, ಸಂತೋಷ್ ಲಾಡ್ ರವರು ಇನ್ನೂ ಅನೇಕರು ನಮಗೆ ಯುದ್ಧ ಬೇಕಾಗಿಲ್ಲ, ನಾವು ಯುದ್ಧದ ಪರ ಇಲ್ಲ ಎಂದು ಹೇಳಿಕೆಯನ್ನು ನೀಡಿದ್ದರು” ಎಂದರು.

“ಈಗ ಎಐಸಿಸಿ ಒಂದು ತೀರ್ಮಾನಕ್ಕೆ ಬಂದು, ನಾವು ಕೇಂದ್ರ ಸರ್ಕಾರದ ಜೊತೆ ನಿಲ್ಲದಿದ್ದರೆ ನಮಗೆ ಈ ದೇಶದಲ್ಲಿ ಉಳಿಗಾಲವಿಲ್ಲ ಜನ ನಮ್ಮ ವಿರುದ್ಧ ತಿರುಗಿ ಬೀಳುತ್ತಾರೆ ಎಂದು ಗಮನಿಸಿತು. ಬಳಿಕ ಮೋದಿ ತೀರ್ಮಾನಕ್ಕೆ ನಮ್ಮ ಬೆಂಬಲವಿದೆ ಎಂದು ಹೇಳಿದಾಗ ಇಲ್ಲಿನ ನಾಯಕರು ಬಾಯಿ ಮುಚ್ಚಿಕೊಂಡರು” ಎಂದು ಟೀಕಿಸಿದರು.

Advertisements

“ಭಾರತ ಸರ್ಕಾರ ಭಯೋತ್ಪಾದಕರು ಅಡಗಿ ಕುಳಿತಿರುವ 9 ಸ್ಥಳಗಳನ್ನು ಗುರುತಿಸಿ 100 ಭಯೋತ್ಪಾದಕರನ್ನು ಕೊಂದಿರುವ ವಿಷಯ ಹಳೆಯದಲ್ಲ. ನಾವು ಪಾಕಿಸ್ತಾನದ ವಿರುದ್ಧವಾಗಿ ಯುದ್ಧ ಸಾರಲಿಲ್ಲ ಹಾಗೂ ಮಾಡಲಿಲ್ಲ. ಆಗಿದ್ದು ಏನು ಎಂದರೆ ಕಳೆದ ತಿಂಗಳು 22ನೇ ತಾರೀಖು ನಮ್ಮ ನೆಲಕ್ಕೆ ಭಯೋತ್ಪಾದಕರು ಬಂದು 26 ಜನರನ್ನು ಧರ್ಮ ಕೇಳಿ ಅವರ ತಲೆಗೆ ಹೊಡೆದು ಹತ್ಯೆ ಮಾಡಿರುವುದು ದೇಶಕ್ಕೆ ತಿಳಿದಿರುವ ವಿಚಾರ. ಆ ಕಾರಣಕ್ಕಾಗಿ ನಾವು ಭಯೋತ್ಪಾದಕಕರನ್ನು ಗುರಿ ಮಾಡಿದ್ದು, ನಮ್ಮ ಸೈನಿಕರು 100 ಜನರನ್ನು ಬಲಿತೆಗೆದುಕೊಂಡಿದ್ದಾರೆ” ಎಂದು ವಿವರಿಸಿದರು.

“ಪುಲ್ವಾಮ ದಾಳಿಯ ವಿಚಾರದಲ್ಲಿ ಭಾರತ ಸರ್ಜಿಕಲ್ ಸ್ಟ್ರೈಕ್ ಮಾಡಿದ ತರುವಾಯ ಕಾಂಗ್ರೆಸ್ಸಿನ ಒಬ್ಬ ವಕ್ತಾರ ಗಿಡಕ್ಕೆ ಗುಂಡು ಹೊಡೆದು ಸರ್ಜಿಕಲ್ ಸ್ಟ್ರೈಕ್ ಮಾಡಿದ್ದಾರೆ ಎಂದು ಹೇಳಿದ್ದರು. ನಂತರ ಸಾಕ್ಷಿ ಕೇಳಿದ್ದರು. ಪ್ರಸ್ತುತ ಪಾಕಿಸ್ತಾನದ ಮಂತ್ರಿಗಳು ಪುಲ್ವಾಮ ದಾಳಿಗೆ ನಾವೇ ಕಾರಣ ಎಂದು ಹೇಳಿಕೆ ನೀಡಿದ್ದಾರೆ. ಅವತ್ತು ಸಾಕ್ಷಿ ಕೇಳಿದ ನಾಯಕರು ಈಗ ನಿಮ್ಮ ಮುಖ ಮತ್ತು ತಲೆಯನ್ನು ಎಲ್ಲಿ ಇಟ್ಟುಕೊಳ್ಳುತ್ತೀರಿ” ಎಂದು ಪ್ರಶ್ನಿಸಿದರು.

“ಕಾಂಗ್ರೆಸ್ ಪಕ್ಷವು ಅವರ ನಾಯಕರು ಏನೇ ಮಾತನಾಡಿದರೂ ಖಂಡಿಸುವುದಿಲ್ಲ. ಅಂದರೆ ಕಾಂಗ್ರೆಸ್ ಇನ್ನೂ ವಕ್ರಬುದ್ಧಿಯನ್ನು ಬಿಟ್ಟಿಲ್ಲ. ಪಾಕಿಸ್ತಾನ ಯಾವ ಪ್ರಶ್ನೆಗಳನ್ನು ಕೇಳಬೇಕಿತ್ತೋ ಆ ಪಾಕಿಸ್ತಾನದ ಪ್ರಶ್ನೆಗಳನ್ನು ಪ್ರಿಯಾಂಕ ಖರ್ಗೆ, ಸಂತೋಷ್ ಲಾಡ್, ಕೊತ್ತೂರು ಮಂಜುನಾಥ್ ಅವರು ಕೇಳುತ್ತಿದ್ದಾರೆ ಎಂದರೆ ಪಾಕಿಸ್ತಾನದ ಕೆಲವು ನಾಯಕರು ಜೊತೆ ಇವರು ಸಂಪರ್ಕದಲ್ಲಿ ಇರಬಹುದು ಎಂಬ ಸಂಶಯ ಉದ್ಭವಿಸುತ್ತಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ನಾವು ಯಾರ ಪರವೂ ಇಲ್ಲ; ನ್ಯಾಯದ ಪರ: ಡಿಸಿಎಂ ಡಿ.ಕೆ.ಶಿವಕುಮಾರ್

"ನಾವು ಧರ್ಮಸ್ಥಳದವರ ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ...

ಆಗಸ್ಟ್ 23ರಿಂದ ರಾಜ್ಯಾದ್ಯಂತ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು...

ಬೀದರ್‌ | ಈ ತಾಂಡಾಕ್ಕೆ ದಾರಿ ಯಾವುದಯ್ಯಾ?

ʼನಾವು ಹುಟ್ಟಿನಿಂದ ಅಲ್ಲ, ಈ ತಾಂಡಾ ಹುಟ್ಟಿನಿಂದಲೂ ರಸ್ತೆಯೇ ಕಂಡಿಲ್ಲ. ಸ್ವಲ್ಪ...

ಕರಾವಳಿಯಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ ಕೆ ಶಿವಕುಮಾರ್

"ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ...

Download Eedina App Android / iOS

X