ಹಿನ್ನಡೆ ಹಣೆಪಟ್ಟಿಯಿಂದ ಹೊರಬಂದ ಯಾದಗಿರಿ; ಎಸ್‌ಎಸ್‌ಎಲ್‌ಸಿಯಲ್ಲಿ 33ನೇ ಸ್ಥಾನ

Date:

Advertisements

ರಾಜ್ಯದಲ್ಲಿ ಶೈಕ್ಷಣಿಕವಾಗಿ ಹಿಂದುಳಿದಿದೆ, ಕೊನೆಯ ಸ್ಥಾನದಲ್ಲಿದೆ ಎನ್ನುವ ಹಣೆ ಪಟ್ಟಿ ಅಳಿಸಿ ಹಾಕಿ ಈ ಬಾರಿ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಯಾದಗಿರಿ ಎರಡು ಹೆಜ್ಜೆ ಮುಂದಕ್ಕೆ ಸಾಗಿದೆ.

2024-25ನೇ ಶಾಲಿನ ಪಿಯುಸಿ ಫಲಿತಾಂಶದಲ್ಲಿ ರಾಜ್ಯದಲ್ಲಿಯೇ ಕೊನೆಯ ಸ್ಥಾನ ಪಡೆದುಕೊಂಡಿದ್ದ ಯಾದಗಿರಿ ಇದೀಗ 2025ರ ಮೇ 2ರಂದು ಪ್ರಕಟವಾದ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಕೊನೆಯ ಸ್ಥಾನದಿಂದ ಎರಡು ಹೆಜ್ಜೆ ಮುಂದಕ್ಕೆ ಜಿಗಿದಿದೆ.

ಜಿಲ್ಲೆಯ ನೀಷ್ಟಾ ಚನ್ನರಾಜು ಹಾಗೂ ವರುಣ ದರಬಾರಿ 625ಕ್ಕೆ 622 ಅಂಕ ಪಡೆದು ಜಿಲ್ಲೆಗೆ ಪ್ರಥಮ ರಾಜ್ಯಕ್ಕೆ ನಾಲ್ಕನೆ ಸ್ಥಾನ ಪಡೆದುಕೊಂಡು ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ.

Advertisements

ಈ ಬಾರಿ ಜಿಲ್ಲೆಯಲ್ಲಿ 7,214 ವಿದ್ಯಾರ್ಥಿಗಳು ಹಾಗೂ 7,822 ವಿದ್ಯಾರ್ಥಿನಿಯರು ಸೇರಿ ಒಟ್ಟು 15,036 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 3,138 ವಿದ್ಯಾರ್ಥಿಗಳು ಹಾಗೂ 4,621 ವಿದ್ಯಾರ್ಥಿನಿಯರು ಸೇರಿ ಒಟ್ಟು 7,759 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಮೂಲಕ ಜಿಲ್ಲೆಗೆ ಶೇ.51.60 ಫಲಿತಾಂಶ ಲಭಿಸಿದೆ. ಅದರಲ್ಲಿ ವಿದ್ಯಾರ್ಥಿಗಳು 43.50%, ವಿದ್ಯಾರ್ಥಿನಿಯರು 59.08% ಪಡೆದು ಎಂದಿನಂತೆ ಹೆಣ್ಣು ಮಕ್ಕಳೇ ಮೇಲುಗೈ ಸಾಧಿಸಿದ್ದಾರೆ.

ಜಿಲ್ಲೆಯಲ್ಲಿ ಪರೀಕ್ಷೆ ಬರೆದ ಒಟ್ಟು 10,539 ಸರ್ಕಾರಿ ವಿದ್ಯಾರ್ಥಿಗಳ ಪೈಕಿ 5132 ವಿದ್ಯಾರ್ಥಿಗಳು ಪಾಸಾಗಿದ್ದಾರೆ (48.70%). 1,099 ಅನುದಾನಿತ ಶಾಲೆ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 428 ಮಂದಿ ಪಾಸಾಗಿದ್ದಾರೆ(38.94). ಅನುದಾನ ರಹಿದ ಶಾಲೆಯ ಒಟ್ಟು 3,398 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿ 2,199 ವಿದ್ಯಾರ್ಥಿಗಳು ಪಾಸಾಗಿದ್ದು, ಶೇ.64.71 ಫಲಿತಾಂಶ ದೊರಕಿದೆ. ಹಾಗಾಗಿ ಒಟ್ಟು ಜಿಲ್ಲೆಗೆ 51.60% ಫಲಿತಾಂಶ ಲಭಿಸಿದೆ.

ಗ್ರಾಮೀಣ ಭಾಗದ ಫಲಿತಾಂಶ ಮಾಹಿತಿ:
5036 ವಿದ್ಯಾರ್ಥಿಗಳು ಹಾಗೂ 5309 ವಿದ್ಯಾರ್ಥಿನಿಯರು ಸೇರಿ ಒಟ್ಟು ‌10,345 ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 2125 ವಿದ್ಯಾರ್ಥಿಗಳು, 3060 ವಿದ್ಯಾರ್ಥಿನಿಯರು ಸೇರಿ ಒಟ್ಟು 5,185 ವಿದ್ಯಾರ್ಥಿಗಳು ಪಾಸಾಗಿದ್ದು, ಶೇ. ಗ್ರಾಮೀಣ ಪ್ರದೇಶದಲ್ಲಿ ಪಾಸಾದ ವಿದ್ಯಾರ್ಥಿಗಳು ಸಂಖ್ಯೆ ಶೇ. 42.20% ಗಂಡು ಮಕ್ಕಳು, ಶೇ.57.64% ಹೆಣ್ಣು ಮಕ್ಕಳು ಪಾಸಾಗಿದ್ದು, ಗ್ರಾಮೀಣ ಪ್ರದೇಶದಲ್ಲಿ ಒಟ್ಟು ಶೇ 50.12 ಫಲಿತಾಂಶ ದೊರಕಿದೆ.

ಇದನ್ನೂ ಓದಿ: ಯಾದಗಿರಿ | ‘ಲುಂಬಿನಿ ವನ’ ಉದ್ಯಾನವನಕ್ಕಿಲ್ಲ ನಿರ್ವಹಣೆ ಭಾಗ್ಯ; ಆಡಳಿತದ ವಿರುದ್ಧ ಜನರ ಆಕ್ರೋಶ

ನಗರ ಪ್ರದೇಶದ ಫಲಿತಾಂಶ ಮಾಹಿತಿ:
ಇನ್ನು ನಗರ ಪ್ರದೇಶದಲ್ಲಿ 2,178 ವಿದ್ಯಾರ್ಥಿಗಳು, 2513 ವಿದ್ಯಾರ್ಥಿನಿಯರು ಸೇರಿ ಒಟ್ಟು 4691 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈಪೈಕಿ 1,013 ವಿದ್ಯಾರ್ಥಿಗಳು, 1,561 ವಿದ್ಯಾರ್ಥಿನಿಯರು ಸೇರಿ ನಗರ ಪ್ರದೇಶದಲ್ಲಿ ಪಾಸಾದವರ ಒಟ್ಟು ಸಂಖ್ಯೆ 2,574 ಇದೆ. ಇದರಿಂದ ಶೇ. 46.51 ಫಲಿತಾಂಶ ಬಂದಿದೆ.

ಉಳಿದಂತೆ ಮಾತೃಭಾಷೆ ಕನ್ನಡದಲ್ಲಿ 11207, ದ್ವಿತೀಯ ಭಾಷೆ ಇಂಗ್ಲಿಷ್‌ನಲ್ಲಿ 9,502, ತೃತೀಯ ಭಾಷೆ ಹಿಂದಿಯಲ್ಲಿ 10219, ಗಣಿತದಲ್ಲಿ 9,368, ವಿಜ್ಞಾನ ವಿಷಯದಲ್ಲಿ 10397, ಸಮಾಜ ವಿಜ್ಞಾನ ವಿಷಯದಲ್ಲಿ 1,0397 ಮಂದಿ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಒಟ್ಟು 6 ಖಾಸಗಿ ಶಾಲೆಗಳು ಶೇ.100 ರಷ್ಟು ಫಲಿತಾಂಶ ಪಡೆದಿವೆ. ಜಿಲ್ಲೆಯ ಶಹಾಪೂರ ತಾಲೂಕಿನ ಒಂದು ಅನುದಾನರಹಿತ ಶಾಲೆ, ಸುರಪುರ ತಾಲೂಕಿನ ಒಂದು ಅನುದಾನರಹಿತ ಶಾಲೆ ಸೇರಿದಂತೆ ಎರಡು ಅನುದಾನರಹಿತ ಶಾಲೆಗಳು ಶೂನ್ಯ ಫಲಿತಾಂಶ ಪಡೆದುಕೊಂಡು ಕಳಪೆ ಪ್ರದರ್ಶನ ತೋರಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X