ಮೈಸೂರು | ಸಾವಿನಲ್ಲೂ ಸಂಪನ್ಮೂಲ ಕ್ರೂಡೀಕರಣ ಕೈಬಿಡಿ, ಜನ ಹಿತ ಕಾಪಾಡಿ : ಎಬಿಜಿಪಿ

Date:

Advertisements

ಅಖಿಲ ಭಾರತೀಯ ಗ್ರಾಹಕ ಪಂಚಾಯತಿ ಮೈಸೂರು ಘಟಕದ ವತಿಯಿಂದ ಮೈಸೂರು ಮಹಾನಗರ ಪಾಲಿಕೆಗೆ ಭೇಟಿ ನೀಡಿ ಆರೋಗ್ಯ ಅಧಿಕಾರಿ ಡಾ. ವೆಂಕಟೇಶ್ ಅವರಿಗೆ ಸಾವಿನಲ್ಲೂ ಸಂಪನ್ಮೂಲ ಕ್ರೂಡೀಕರಣ ಮಾಡುವುದನ್ನು ಕೈ ಬಿಟ್ಟು ಜನರ ಹಿತ ಕಾಪಾಡುವಂತೆ ಮನವಿ ಪತ್ರ ಸಲ್ಲಿಸಿದರು.

ಮೈಸೂರು ಬಡಾವಣೆಯ ನಾಗರೀಕರಿಗೆ ಮೂಲಭೂತ ಸೌಲಭ್ಯ ಜೊತೆಯಲ್ಲೆ ಜನನ ಮತ್ತು ಮರಣ ಸಂಧರ್ಭದಲ್ಲಿ ಅವಶ್ಯಕ ವ್ಯವಸ್ಥೆಯನ್ನ ಒದಗಿಸುವುದು ತೆರಿಗೆ ಸಂಗ್ರಹಿಸಿಸುವ ಮೈಸೂರು ಮಹಾನಗರ ಪಾಲಿಕೆ ಕರ್ತವ್ಯ. ಈಗಾಗಲೇ ಪ್ರತಿಯೊಂದು ಮನೆಯಿಂದ ವಾರ್ಷಿಕ ತೆರಿಗೆಯಲ್ಲಿ ₹150 ರೂಪಾಯಿಗಳ ಸೆಸ್ ಸ್ಮಶಾನ ನಿರ್ವಹಣೆಗೆಂದು ಸಂದಾಯ ಮಾಡಿಕೊಳ್ಳುತ್ತಿದೆ.

ನಗರಪಾಲಿಕೆ ಸ್ಮಶಾನದಲ್ಲಿ ನೀರಿನ ವ್ಯವಸ್ಥೆ, ವಿದ್ಯುತ್ ದೀಪ ಮತ್ತು ಸ್ವಚ್ಛತೆಯ ಬಗ್ಗೆ ಅಧಿಕಾರಿಗಳು ಭೇಟಿ ಮಾಡಿ ವರದಿ ಪಡೆದು ಅಭಿವೃದ್ಧಿಯ ಕೆಲಸಗಳು ಮಾಡದಿರುವುದು ಜನ ಸಾಮನ್ಯರ ಹಿಡಿ ಶಾಪಕ್ಕೆ ಕಾರಣವಾಗುತ್ತಿದೆ. ಸ್ಮಶಾನ ಅಭಿವೃದ್ಧಿ ಬಗ್ಗೆ ಚಿಂತಿಸದ ನಗರ ಪಾಲಿಕೆ ಜನನ, ಮರಣ ವಿಭಾಗದಲ್ಲಿ ಚಿತೆಯಲ್ಲಿ ಕಂತೆ ಕಂತೆ ಹೇಗೆ ಕಿತ್ತುಕೊಳ್ಳಬಹುದು ಎಂದು ಎಬಿಜಿಪಿ ಮುಖಂಡರು ಪ್ರಶ್ನಿಸಿದ್ದಾರೆ.

Advertisements

ಸ್ಮಶಾನಗಳಲ್ಲಿ ಹೆಣ ಸುಡಲು ( ಅಂತ್ಯ ಸಂಸ್ಕಾರ ) ಮಾಡಲು ₹500 ರೂಪಾಯಿಗಳನ್ನು ನಿಗಧಿಪಡಿಸಿರುವುದು ಮೈಸೂರಿಗರಿಗೆ ಆಗುತ್ತಿರುವ ಅನ್ಯಾಯ. ಸತ್ತವರ ಕುಟುಂಬದಿಂದಲೂ ಹಣ ಕೀಳುವ ಪರಿಸ್ಥಿತಿ ಪಾಲಿಕೆಯದ್ದು. ಯಾವ ಸೌಕರ್ಯ ಒದಗಿಸಲು ಸಾಧ್ಯ ಇಲ್ಲದೆ ಇದ್ದರು ವಸೂಲಿ ಮಾತ್ರ ನಿಲ್ಲುವುದಿಲ್ಲ.

ಜನ ಪ್ರತಿನಿಧಿಗಳೇ ಇಲ್ಲದ ನಗರಪಾಲಿಕೆಯಲ್ಲಿ ಅಧಿಕಾರಿಗಳ ದುರಾಲೋಚನೆ ಒಬ್ಬ ಬಡ ಸಾಮಾನ್ಯ ಕುಟುಂಬದ ಮೇಲೆ ಬರೆ ಹಾಕುವಂತಾಗಿದೆ. ಸಾವಿನಲ್ಲೂ ಸಂಪನ್ಮೂಲ ತೆಗೆದುಕೊಳ್ಳುತ್ತಿರುವುದು ನಗರ ಪಾಲಿಕೆಯ ಮಾನವೀಯತೆ ಹೀನ, ದುರಾಡಳಿತ, ಭ್ರಷ್ಟಾಚಾರದ ಕೈಗನ್ನಡಿಯಾಗಿದೆ. ಹಾಗಾಗಿ, ಈ ಕೂಡಲೇ ಮೈಸೂರು ಮಹಾನಗರಪಾಲಿಕೆಯ ಆಯುಕ್ತರು, ಜನನ ಮರಣ ವಿಭಾಗದ ಅಧಿಕಾರಿಗಳು ಇದರ ಬಗ್ಗೆ ಪರಿಶೀಲಿಸಿ, ಪರಿಗಣಿಸಿ ಜನರ ಹಿತಕ್ಕಾಗಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅಖಿಲ ಭಾರತೀಯ ಪಂಚಾಯತ್ ಮೈಸೂರು ಘಟಕದ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?ಮೈಸೂರು | ಅಂಬೇಡ್ಕರ್ ಭಾವಚಿತ್ರಕ್ಕೆ ಕೆಸರೆರಚಿ ಅವಮಾನಿಸಿದ ಕಿಡಿಗೇಡಿಗಳು

ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕದ ಅಧ್ಯಕ್ಷ ಚಂದ್ರಶೇಖರ್, ಮಾಜಿ ನಗರ ಪಾಲಿಕೆ ಸದಸ್ಯ ಎಂ.ಡಿ. ಪಾರ್ಥಸಾರಥಿ, ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್, ನಿರೂಪಕ ಅಜಯ್ ಶಾಸ್ತ್ರಿ, ಎಸ್. ಎನ್. ರಾಜೇಶ್, ರವಿಚಂದ್ರ, ಶ್ರೀಧರ್ ಹಾಗೂ ಇನ್ನಿತರರು ಮನವಿ ಸಲ್ಲಿಸುವಾಗ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X