ಧಾರವಾಡ | ಮಕ್ಕಳ ಚಟುವಟಿಕೆ ಕಡೆಗೆ ಪಾಲಕರ ಗಮನವಿರಲಿ: ಡಾ.ಆಯ.ಎ.ಮುಲ್ಲಾ

Date:

Advertisements

ಮಗುವಿನ ಸರ್ವಾಂಗೀನ ವ್ಯಕ್ತಿತ್ವ ವಿಕಾಸದಲ್ಲಿ ಶಾಲಾ ಶಿಕ್ಷಕರು ಎಷ್ಟು ಮಹತ್ವದ ಪಾತ್ರ ನಿರ್ವಹಿಸುವರೋ, ಅಷ್ಟೇ ಪ್ರಮುಖ ಪಾತ್ರ ಪಾಲಕರು ಸಹ ನಿರ್ವಹಿಸಬೇಕು. ಮಕ್ಕಳ ಚಟುವಟಿಕೆ ಕುರಿತು ಪಾಲಕರು ಗಮನಹರಿಸಬೇಕು‌ ಎಂದು ಅಂಜುಮನ್ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಆಯ.ಎ .ಮುಲ್ಲಾ ಹೇಳಿದರು.

ನಗರದ ಅಂಜುಮನ್ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ ಹಾಗೂ ಪಿ.ಜಿ ಅಧ್ಯಯನ ಕೇಂದ್ರದಲ್ಲಿ “ಪಾಲಕರು ಶಿಕ್ಷಕರ ಸಭೆಯ” ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಮಕ್ಕಳೊಂದಿಗೆ ಭಾವನಾತ್ಮಕವಾಗಿ ಉತ್ತಮ ಸಂಬಂಧ ಹೊಂದಿರಬೇಕು ಹಾಗೂ ಅವರೊಂದಿಗೆ ಪ್ರೀತಿ ವಿಶ್ವಾಸದಿಂದ ವರ್ತಿಸಬೇಕು. ಶಿಕ್ಷಕರ ಜೊತೆಗೆ ಪಾಲಕರೂ ಮಕ್ಕಳ ವಿದ್ಯಾಭ್ಯಾಸದ ಕಡೆಗೆ ಖಾಳಜಿವಹಿಸಬೇಕು ಎಂದರು.

ಇದೇ ವೇಳೆ ರಿಜವಾನ್ ಅಹಮದ್ ಬಿ.ಎಸ್ಸಿ ವಿಭಾಗದ ಸಾಧನೆ ಮತ್ತು ವಿವಿಧ ಕಾರ್ಯಕ್ರಮಗಳ ವಿವರ ಪಿ.ಪಿ.ಟಿ ಮೂಲಕ ತಿಳಿಸಿದರು. ಉಲ್ಲಾಸ್ ದೊಡ್ಡಮನಿ ವಾಣಿಜ್ಯ ಕೋರ್ಸ್‌ದೊಂದಿಗೆ ದೊರೆಯಬಹುದಾದ ಉದ್ಯೋಗಾವಕಾಶಗಳ ಕುರಿತು ತಿಳಿಸಿದರು. ಡಾ. ಅಧೋನಿ ಮಾತನಾಡಿ ಮಾನವೀಯ ಮೌಲ್ಯಗಳನ್ನು ಮಕ್ಕಳಲ್ಲಿ ಬೆಳೆಸಬೇಕು ಎಂದರು. ಪಾಲಕರ ಅನಿಸಿಕೆಯಲ್ಲಿ ಉಮಾ ಚೌಹಾನ್ ಮಾತನಾಡಿ, ಪಾಲಕರು ಆಗಾಗ ಶಿಕ್ಷಕರೊಂದಿಗೆ ಸಂಪರ್ಕದಲ್ಲಿದ್ದು ಮಗುವಿನ ಕುರಿತು ಮಾಹಿತಿ ಪಡೆಯುತ್ತಿರಬೇಕು ಎಂದರು. ಐ.ಕ್ಯೂ.ಎ .ಸಿ ಸಂಯೋಜಕ ಡಾ. ಏನ್ .ಬಿ ನಲತವಾಡ ಸ್ವಾಗತಿಸುತ್ತಾ, ಪಾಲಕರು-ಶಿಕ್ಷಕರ ಸಭೆಯ ಉದ್ದೇಶ ತಿಳಿಸಿದರು. ಸಂಖ್ಯಾಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಏನ್.ಬಿ.ಗುದಗನವರ್ ಪಿ.ಪಿ.ಟಿ ಮೂಲಕ ಕಾಲೇಜಿನ ಪರಿಚಯ ಮಾಡಿದರು.

Advertisements

ಇದನ್ನು ಓದಿದ್ದೀರಾ? ಧಾರವಾಡ | ದ್ವಾಮವ್ವ, ದುರ್ಗವ್ವ ಮೂರ್ತಿ ಹೊತ್ತು ಭಾವೈಕ್ಯ ಮೆರೆದ ಮುಸ್ಲಿಮರು

ಕಾರ್ಯಕ್ರಮದಲ್ಲಿ ಅಹಮದ್‌ರಜಾ ಪಠಾಣ್ ಕುರಾನ್ ಪಠಣ ಮಾಡಿದರು, ವಿದ್ಯಾರ್ಥಿ ಪ್ರವೀಣ್ ಲಮಾಣಿ ಶ್ಲೋಕ ಪಠಿಸಿದರು. ದಿನಾಚರಣೆ ಸಮಿತಿಯ ಅಧ್ಯಕ್ಷೆ ಡಾ. ಸೌಭಾಗ್ಯ ಜಾದವ್ ಕಾರ್ಯಕ್ರಮ ನಿರೂಪಿಸಿದರು. ಶ್ರುತಿ ಯಾವಗಲ್‌ಮಠ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X