ರಸ್ತೆ ಅಪಘಾತ | 5 ವರ್ಷಗಳಲ್ಲಿ 1.5 ಲಕ್ಷ ಪಾದಚಾರಿಗಳು ಸಾವು

Date:

Advertisements

ರಸ್ತೆ ಬದಿ ನಡೆದು ಹೋಗುವಾಗ, ರಸ್ತೆ ದಾಟುವಾಗ ಅಪಘಾತಕ್ಕೆ ಸಿಲುಕಿ ಐದು ವರ್ಷಗಳಲ್ಲಿ 1.5 ಲಕ್ಷ ಜನರು ಜೀವ ಕಳೆದುಕೊಂಡಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ.

ಸಾರಿಗೆ ಸಂಶೋಧನೆ, ಗಾಯ ತಡೆ ಕೇಂದ್ರ ಹಾಗೂ ದೆಹಲಿ ಐಐಟಿ ಜಂಟಿಯಾಗಿ ಅಧ್ಯಯನ ನಡೆಸಿದೆ. ಅಧ್ಯಯನದಲ್ಲಿ ರಸ್ತೆಗಳ ಅಗಲ, ಫುಟ್‌ಪಾತ್‌ ಲಭ್ಯತೆ ಹಾಗೂ ಪಾದಚಾರಿಗಳ ಸಾವಿನ ಬಗ್ಗೆ ವಿಶ್ಲೇಷಣೆ ಮಾಡಲಾಗಿದ್ದು, ವರದಿ ಪ್ರಕಟಿಸಿದೆ. ವರದಿ ಪ್ರಕಾರ, 2019ರ ಜನವರಿಯಿಂದ 2023ರ ಅಂತ್ಯದ ಅವರೆಗೆ ರಸ್ತೆ ಅಪಘಾತಗಳಿಗೆ 1.5 ಲಕ್ಷ ಮಂದಿ ಪಾದಚಾರಿಗಳು ಬಲಿಯಾಗಿದ್ದಾರೆ.

ಅಂದಹಾಗೆ, ಇದೇ ವಾರ, ಭಾರತೀಯ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಪಾದಚಾರಿಗಳಿಗೆ ರಸ್ತೆ ಬಳಕೆಯ ಹಕ್ಕನ್ನು ಖಾತರಿಪಡಿಸಲಾಗಿದೆ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಅಲ್ಲದೆ, ರಸ್ತೆಯಲ್ಲಿ ಪಾದಚಾರಿಗಳಿಗೇ ಮೊದಲ ಹಕ್ಕು ಇದೆ ಎಂದು ಕಾನೂನುಗಳು ಹೇಳುತ್ತವೆ. ಆದರೆ, ರಸ್ತೆ ಮೇಲೆ ನಡೆಯುವ ಕಾರಣಕ್ಕಾಗಿಯೇ ಲಕ್ಷಾಂತರ ಮಂದಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.

Advertisements

2019 ಮತ್ತು 2013ರ ನಡುವೆ ರಸ್ತೆ ಅಪಘಾತಗಳಲ್ಲಿ ಒಟ್ಟು 7.9 ಲಕ್ಷ ಮಂದಿ ಸಾವನ್ನಪ್ಪಿದ್ದಾರೆ. ಅವರಲ್ಲಿ, 1.5 ಲಕ್ಷ ಮಂದಿ ಪಾದಚಾರಿಗಳು. ಉಳಿದವರು ದ್ವಿಚಕ್ರ ವಾಹ, ಕಾರು, ಬಸ್‌ ಹಾಗೂ ಭಾರೀ ವಾಹನಗಳಲ್ಲಿ ಪ್ರಯಾಣಿಸುವಾಗ ಮತ್ತು ಚಲಾಯಿಸುವಾಗ ಅಪಘಾತಕ್ಕೀಡಾಗಿ ಮೃತಪಟ್ಟಿದ್ದಾರೆ ಎಂದು ವರದಿ ಹೇಳಿದೆ.

ಈ ವರದಿ ಓದಿದ್ದೀರಾ?: ‘ತಿರಂಗಾ ಯಾತ್ರೆ’ ಯಾರಿಗಾಗಿ? ದೇಶಕ್ಕೋ-ಮೋದಿಗೋ?

“ಭಾರತದ ಎಲ್ಲ ರಾಜ್ಯಗಳ ಪೈಕಿ ಕೆಲವು ರಾಜ್ಯಗಳಲ್ಲಿನ ಒಟ್ಟು ರಸ್ತೆಯ ಪೈಕಿ 3% ರಸ್ತೆಗಳು ಮಾತ್ರವೇ ಫುಟ್‌ಪಾತ್ ಹೊಂದಿವೆ. ಹಲವು ರಾಜ್ಯಗಳು 19% ಫುಟ್‌ಪಾತ್‌ಗಳನ್ನು ಹೊಂದಿದ್ದರೆ, ಕೆಲವು ರಾಜ್ಯಗಳಲ್ಲಿ ಗರಿಷ್ಠವೆಂದರೆ 73% ರಸ್ತೆಗಳು ಫುಟ್‌ಪಾತ್ ಹೊಂದಿವೆ ಎಂದು ವರದಿಯು ಹೇಳಿದೆ.

ಈ ಪೈಕಿ, ಮಹಾರಾಷ್ಟ್ರವು ಅತ್ಯಧಿಕ ಪ್ರಮಾಣದ ಫುಟ್‌ಪಾತ್‌ಗಳನ್ನು ಹೊಂದಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು ರಸ್ತೆಯ ಪೈಕಿ ಕೇವಲ 3% ರಸ್ತೆಗಳು ಮಾತ್ರವೇ ಫಟ್‌ಪಾತ್‌ಗಳನ್ನು ಹೊಂದಿವೆ. ಪುದುಚೇರಿ 5% ಫುಟ್‌ಪಾತ್‌ಗಳನ್ನು ಒಳಗೊಂಡಿದೆ.

ವಿಶ್ವ ಆರೋಗ್ಯ ಸಂಸ್ಥೆ ಹೇಳುವಂತೆ, ಜಾಗತಿಕವಾಗಿ ಒಟ್ಟು ರಸ್ತೆ ಅಪಘಾತಗಳಲ್ಲಿ ಸಾವನ್ನುವ ಸಂಖ್ಯೆಯಲ್ಲಿ 21% ಮಂದಿ ಪಾದಚಾರಿಗಳಾಗಿದ್ದಾರೆ ಎಂದು ಹೇಳಿದೆ. ಹೀಗಾಗಿ, ಎಲ್ಲ ರಾಷ್ಟ್ರಗಳು ಉತ್ತಮ ಪಾದಚಾರಿ ಮಾರ್ಗಗಳನ್ನು ನಿರ್ಮಾಣ ಮಾಡಬೇಕು ಎಂದು ವಿಶ್ವಸಂಸ್ಥೆ ಸೂಚಿಸಿದೆ. ಆದಾಗ್ಯೂ, ರಸ್ತೆ ಅಪಘಾತಗಳಿಗೆ ಬಲಿಯಾಗುವ ಪಾದಚಾರಿಗಳ ಸಂಖ್ಯೆ ಕಡಿಮೆಯಾಗಿಲ್ಲ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X