‘ಆಪರೇಷನ್ ಸಿಂಧೂರ’ದ ಬಗ್ಗೆ ಮೋದಿ ಮಾಡಿದ ಭಾಷಣ ತನ್ನ ಪ್ರಚಾರಕ್ಕೆ ಬಳಕೆ; ವೈದ್ಯ ಅಮಾನತು

Date:

Advertisements

ತಮ್ಮ ಸೇವೆಗಳ ಪ್ರಚಾರಕ್ಕಾಗಿ ಛತ್ತೀಸ್‌ಗಢದ ವೈದ್ಯರೊಬ್ಬರು ಆಪರೇಷನ್ ಸಿಂಧೂರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಬಳಸಿಕೊಂಡಿದ್ದು, ಸದ್ಯ ವೈದ್ಯರ ವಿರುದ್ಧ ಕ್ರಮಕೈಗೊಳ್ಳಲಾಗಿದೆ. ಪ್ರಧಾನಿ ಮೋದಿ ಭಾಷಣದಲ್ಲಿ “ರಕ್ತ ಮತ್ತು ನೀರು ಜೊತೆಯಾಗಿ ಹರಿಯಲು ಸಾಧ್ಯವಿಲ್ಲ” ಎಂದು ಹೇಳಿದ್ದರು. ಇದನ್ನೇ ಬಳಸಿಕೊಂಡು ಪ್ರಚಾರ ಮಾಡಿದ್ದಕ್ಕೆ ಭಿಲಾಯಿ ಮೂಲದ ಮೂತ್ರಶಾಸ್ತ್ರಜ್ಞರನ್ನು ಅಮಾನತುಗೊಳಿಸಲಾಗಿದೆ.

ಶ್ರೀ ಶಂಕರಾಚಾರ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ. ಶಿವೇಂದ್ರ ಸಿಂಗ್ ತಿವಾರಿ ಅವರು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ವೈದ್ಯಕೀಯ ಸೇವೆ ಪ್ರಚಾರವನ್ನು ಮಾಡಿದ್ದರು. ಈ ವೇಳೆ ಆಪರೇಷನ್ ಸಿಂಧೂರದ ಬಗ್ಗೆ ಪ್ರಧಾನಿ ಮೋದಿ ನೀಡಿದ್ದ ಹೇಳಿಕೆಯನ್ನು ಉಲ್ಲೇಖಿಸಿದ್ದರು.

ಇದನ್ನು ಓದಿದ್ದೀರಾ? ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯ ಯಶಸ್ಸು ಭಾರತೀಯ ಸೈನ್ಯಕ್ಕೆ ಸಲ್ಲಬೇಕು: ಸಿಎಂ ಸಿದ್ದರಾಮಯ್ಯ

Advertisements

ವೈದ್ಯರು ತಮ್ಮ ಜಾಹೀರಾತು ಫಲಕದಲ್ಲಿ ಪ್ರಧಾನಿಯವರ ಸಾಲನ್ನೇ ಬಳಸಿದ್ದಾರೆ. ಅದರೊಂದಿಗೆ ತಮ್ಮ ಸಾಲುಗಳನ್ನೂ ಜಾಣತನದಿಂದ ಸೇರಿಸಿಕೊಂಡಿದ್ದಾರೆ. “ರಕ್ತ ಮತ್ತು ನೀರು ಜೊತೆಯಾಗಿ ಹರಿಯಲು ಸಾಧ್ಯವಿಲ್ಲ. ಆದ್ದರಿಂದ ನೀವು ನಿಮ್ಮ ಮೂತ್ರದಲ್ಲಿ ರಕ್ತವನ್ನು ನೋಡಿದರೆ, ತಕ್ಷಣ ಮೂತ್ರಶಾಸ್ತ್ರಜ್ಞರನ್ನು ಸಂಪರ್ಕಿಸಿ. ಅದು ಗಂಭೀರ ಸಮಸ್ಯೆ ಆಗಿರಬಹುದು” ಎಂದು ಹೇಳಿದ್ದಾರೆ.

ಈ ಜಾಹೀರಾತು ಮೂತ್ರಶಾಸ್ತ್ರೀಯ ಆರೋಗ್ಯವನ್ನು ಉತ್ತೇಜಿಸುವ ಸ್ಪಷ್ಟ ಪ್ರಯತ್ನ. ವೈದ್ಯರು ರೋಗಿಗಳಲ್ಲಿ ಜಾಗೃತಿ ಮೂಡಿಸಲು ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಬಳಸಬಹುದು. ಆದರೆ ಪ್ರಧಾನ ಮಂತ್ರಿಯವರ ಹೇಳಿಕೆಯೊಂದಿಗೆ ಸ್ವಯಂ ಪ್ರಚಾರ ಮಾಡುವುದು ಸರಿಯಲ್ಲ ಎಂಬ ವಾದಗಳು ಕೇಳಿಬಂದಿದೆ.

ಸದ್ಯ ಈ ಬಗ್ಗೆ ತನಿಖೆ ನಡೆಸಲು ಆಡಳಿತವು ಉನ್ನತ ಅಧಿಕಾರ ಸಮಿತಿಯನ್ನು ರಚಿಸಿದೆ ಮತ್ತು ಸಂಸ್ಥೆಯು ವೈದ್ಯರನ್ನು 15 ದಿನಗಳವರೆಗೆ ಅಮಾನತುಗೊಳಿಸಿದೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.

ಸಂಸ್ಥೆಯ ಡೀನ್ ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ. “ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ನಿಮ್ಮ ಜಾಹೀರಾತು ಅನಗತ್ಯ ಮತ್ತು ಜವಾಬ್ದಾರಿಯುತ ವೈದ್ಯಕೀಯ ಸಿಬ್ಬಂದಿಯಾಗಿ ನೀವು ಮಾಡಿದ ಅವಮಾನ. ಆಡಳಿತ ಮಂಡಳಿಯು ನಿಮ್ಮ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿದೆ. ನಿಮ್ಮನ್ನು 15 ದಿನಗಳವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ” ಎಂದು ಉಲ್ಲೇಖಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X