ಬೆಳಗಾವಿ | ಮನರೇಗಾ ಯೋಜನೆಯಡಿ ಅಭಿವೃದ್ಧಿ; ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯಕ್ಕೆ ಮೆರಗು

Date:

Advertisements

ಬೆಳಗಾವಿಯಿಂದ 15 ಕಿಮೀ ದೂರದಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಭೂತರಾಮನ ಹಟ್ಟಿಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯ ಪ್ರವಾಸಿಗರ ನೆಚ್ಚಿನ ತಾಣ. ಕಳೆದ ವರ್ಷದಿಂದ ಟೈಗರ್ ಸಫಾರಿ ಪ್ರಾರಂಭವಾಗಿದ್ದು, ಜನರಿಂದಲೂ ಒಳ್ಳೆಯ ಸ್ಪಂದನೆ ಸಿಕ್ಕಿದೆ‌. ಗ್ರಾಮ ಪಂಚಾಯತಿಯಿಂದ 2020-2021 ಹಾಗೂ 2021-2022ರ ಆರ್ಥಿಕ ವರ್ಷದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯವನ್ನು ಅಭಿವೃದ್ಧಿಪಡಿಸಿದ್ದು, ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕಾರಣವಾಗಿದೆ.

125 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಿರುವ ಈ ಮೃಗಾಲಯವು, ಈ ಹಿಂದೆ ಚುಕ್ಕೆ ಜಿಂಕೆಗಳ ವಾಸಸ್ಥಾನವಾಗಿತ್ತು. ಹಾಗಾಗಿ, ಅದಕ್ಕೆ ಸ್ಥಳೀಯರು ‘ಚಿಗರಿ ಮಾಳ’ ಎಂದು ಕರೆಯುತ್ತಿದ್ದರು. ಆ ಬಳಿಕ ಇಲ್ಲಿ 1989ರಲ್ಲಿ ನಿಸರ್ಗಧಾಮ ನಿರ್ಮಿಸಲಾಯಿತು. 2018ರಲ್ಲಿ ಕೇಂದ್ರೀಯ ಮೃಗಾಲಯ ಪ್ರಾಧಿಕಾರದಿಂದ ಅನುಮತಿ ಪಡೆದುಕೊಂಡು ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯ ಆರಂಭಿಸಲಾಗಿದೆ.

ಗ್ರಾಮ ಪಂಚಾಯಿತಿ ಸಹಕಾರದೊಂದಿಗೆ ₹27 ಲಕ್ಷ ವೆಚ್ಚದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ 3 ಹೊಸ ಕೆರೆಗಳ ನಿರ್ಮಾಣ ಮಾಡಲಾಗಿದೆ. ₹27 ಲಕ್ಷದಲ್ಲಿ ನೀರಾವರಿ ಕಾಲುವೆ, ಸಿಂಹದ ಪಂಜರದ ಬಳಿ ₹19 ಲಕ್ಷಗಳಲ್ಲಿ ಕೆರೆ ನಿರ್ಮಾಣ, 67 ಲಕ್ಷ ರೂಗಳಲ್ಲಿ ಚರಂಡಿ ನಿರ್ಮಾಣ, ರಸ್ತಗಳಿಗೆ ಫೇವರ್ಸ್ ಅಳವಡಿಕೆ 114 ಲಕ್ಷ ರೂಗಳಲ್ಲಿ, ಹುಲಿ ಸಫಾರಿ ರಸ್ತೆ ನಿರ್ಮಾಣ, ಮೃಗಾಯದಲ್ಲಿ ಸಿಸಿ ರಸ್ತಗಳ ನಿರ್ಮಾಣ ಸೇರಿದಂತೆ 760 ಲಕ್ಷ ರೂಗಳಲ್ಲಿ ಅನೇಕ ಅಭಿವೃದ್ದಿ ಕೆಲಸಗಳನ್ನು ಮಾಡುವ ಮೂಲಕ ಉದ್ಯೋಗ ಖಾತ್ರಿ ಯೋಜನೆಯ ಲಾಭವನ್ನು ಸದುಪಯೋಗ ಮಾಡಿಕೊಂಡಿರುವುದು ಈ ಮೃಗಾಲಯದ ವಿಶೇಷವಾಗಿದೆ.

Advertisements
ಮೃಗಾಲಯ 1

ಮೃಗಾಲಯದಲ್ಲಿ 2 ಸಿಂಹಗಳು, 3 ಹುಲಿಗಳು, 3 ಚಿರತೆಗಳು, 2 ಕರಡಿಗಳು ಇವೆ. 13 ನರಿ, 16 ಜಿಂಕೆ, 26 ಕೃಷ್ಣಮೃಗ,ಬ್ಲ್ಯಾಕ್ ಬಕ್ 4 ಕತ್ತೆಕಿರುಬ, 6 ನವಿಲು, ಮೊಸಳೆ, ಕಡವೆ, ಎಮು, ಗುಲಾಬಿ ಕೊರಳಿನ ಗಿಳಿ, ಕೆಂದಲೆ ಗಿಳಿ ಸೇರಿದಂತೆ 25 ಪ್ರಭೇದಗಳ ಒಟ್ಟು 215 ಪ್ರಾಣಿ–ಪಕ್ಷಿಗಳನ್ನು ಇಲ್ಲಿ ನೋಡಬಹುದು.

ಮೃಗಾಲಯ 2

ಈ ಕುರಿತು ವಲಯ ಅರಣ್ಯಾಧಿಕಾರಿ ಪವನ್ ಮಾತನಾಡಿ, “ಈ ಮೃಗಾಲಯದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಸಿಸಿ ರಸ್ತೆ, ಕೆರೆ, ಚರಂಡಿಗಳು ಸೇರಿದಂತೆ ಅನೇಕ ಅಭಿವೃದ್ಧಿಗಳಾಗಿದ್ದು, ಮೃಗಾಲಯದಲ್ಲಿ 27 ವಿಧದ 215 ಪ್ರಾಣಿ ಪಕ್ಷಿಗಳಿವೆ. ನಿತ್ಯ 800ರಿಂದ 1000 ಜನ ಬರುತ್ತಾರೆ. ಶನಿವಾರ ಮತ್ತು ಭಾನುವಾರ 3000ದವರೆಗೆ ಪ್ರವಾಸಿಗರು ಬರುತ್ತಾರೆ. ಪಶು ವೈದ್ಯಾಧಿಕಾರಿಗಳು ಹಾಗೂ 30 ಜನರು ಕೆಲಸಗಾರು ಇದ್ದಾರೆ” ಎಂದು ತಿಳಿಸಿದರು.

ಮೃಗಾಲಯ 3

ಧಾರವಾಡದಿಂದ ಮೃಗಾಲಯಕ್ಕೆ ಆಗಮಿಸಿದ ಪ್ರವಾಸಿಗರು ಈ ದಿನ.ಕಾಮ್ ಜತೆಗೆ ಮಾತನಾಡಿ, “ಇಲ್ಲಿ ಸಿಂಹ, ಕರಡಿ, ಜಿಂಕೆ, ಚಿರತೆ ಸೇರಿದಂತೆ ವಿವಿಧ ಪ್ರಾಣಿ ಪಕ್ಷಿಗಳು ಇದ್ದು, ಮಕ್ಕಳನ್ನು ಇಲ್ಲಿಗೆ ಕರೆದುಕೊಂಡು ಬರುವುದು ಒಳ್ಳೆಯದು ಹಾಗೂ ಸರ್ಕಾರವು ಇನ್ನೂ ಹೆಚ್ಚು ಪ್ರಾಣಿ-ಪಕ್ಷಿಗಳನ್ನು ಮೃಗಾಲಯಕ್ಕೆ ತರಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಆಫ್ರಿಕನ್‌ ಹಂದಿ ಜ್ವರ ಪತ್ತೆ; ಹಂದಿ ಕೃಷಿ ಉದ್ಯಮ ಧ್ವಂಸ

ಈ ಕುರಿತು ಈ ದಿನ.ಕಾಮ್ ಜತೆ ಸಾವಿತ್ರಿ ಮಾತನಾಡಿ, “ಇಲ್ಲಿ ವಿವಿಧ ಪ್ರಾಣಿ ಪಕ್ಷಿಗಳಿವೆ. ನಾವು 4 ವರ್ಷಗಳ ಹಿಂದೆ ಇಲ್ಲಿಗೆ ಬಂದಿದ್ದೆವು. ಈಗ ಮತ್ತೊಮ್ಮೆ ಬಂದಿದ್ದೇವೆ. ಈಗ ಸ್ವಲ್ಪಮಟ್ಟಿಗೆ ಅಭಿವೃದ್ಧಿಯಾಗಿದೆ. ಮಕ್ಕಳಿಗೂ ಆಟ ಆಡಲು ಅನುಕೂಲವಿದೆ” ಎಂದು ತಿಳಿಸಿದರು.

ಮನರೇಗಾ ಯೋಜನೆಯಡಿಯಲ್ಲಿ ಅಭಿವೃದ್ಧಿ ಹೊಂದಿರುವ ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯಕ್ಕೆ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿರುವುದು ಯೋಜನೆಯೊಂದನ್ನು ಸದ್ಬಳಕೆ ಮಾಡಿಕೊಂಡರೆ ಹೆಚ್ಚಿನ ಅಭಿವೃದ್ಧಿ ಮಾಡಬಹುದು ಎಂಬುದಕ್ಕೆ ಸಾಕ್ಷಿಯಾಗಿದೆ.

ಸುನಿಲ್
ಸುನಿಲ್ ಹಂಪನ್ನವರ
+ posts

ಬೆಳಗಾವಿ ಜಿಲ್ಲಾ ಸಂಯೋಜಕರು

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಸುನಿಲ್ ಹಂಪನ್ನವರ
ಸುನಿಲ್ ಹಂಪನ್ನವರ
ಬೆಳಗಾವಿ ಜಿಲ್ಲಾ ಸಂಯೋಜಕರು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಮಹಾರಾಷ್ಟ್ರದಲ್ಲಿ ಮಳೆ – ಬೆಳಗಾವಿ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಇರುವ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X