ಯಾದಗಿರಿ | ಈಜಲು ಹೋದ ಇಬ್ಬರು ಕುರಿಗಾಯಿ ಯುವಕರು ನೀರುಪಾಲು

Date:

Advertisements

ಸುರಪುರ ತಾಲ್ಲೂಕಿನ ಏವೂರ ಗ್ರಾಮದ ಸಮೀಪದ ಜೆಬಿಸಿ ಕಾಲುವೆಯಲ್ಲಿ ಈಜಲು ತೆರಳಿದ್ದ ಇಬ್ಬರು ಕುರಿಗಾಯಿ ಯುವಕರು ನೀರುಪಾಲಾದ ಘಟನೆ ಶನಿವಾರ ನಡೆದಿದೆ.

ವಿಜಯಪುರ ಮೂಲದ ಪ್ರಧಾನಿ ಜಟ್ಟೆಪ್ಪ ಕನ್ನೊಳ್ಳಿ (19) ಹಾಗೂ ಆತನನ್ನು ರಕ್ಷಿಸಲು ಹೋದ ಕರಿಯಪ್ಪ ಬೀರಪ್ಪ ಹೊನ್ನಮೀಸೆ (19) ಮೃತ ಯುವಕರು.

ʼವಿಜಯಪುರ ಜಿಲ್ಲೆಯ ಆರು ಕುರಿಗಾಹಿ ಯುವಕರು ಶನಿವಾರ ಮಧ್ಯಾಹ್ನ ಜೆಬಿಸಿ ಕಾಲುವೆಯಲ್ಲಿ ಸ್ನಾನ ಮಾಡಲು ತೆರಳಿದ್ದರು. ಆರೂ ಜನರಿಗೆ ಈಜು ಬಾರದೇ ಇದ್ದುದರಿಂದ ದಡದಲ್ಲೇ ಸ್ನಾನ ಮಾಡಿದ್ದಾರೆ. ಕಾಲಿಗೆ ಹತ್ತಿದ್ದ ಕೊಳೆ ತೊಳೆಯಲು ಪ್ರಧಾನಿ ಎಂಬ ಯುವಕ ಮತ್ತೊಮ್ಮೆ ನೀರಿಗೆ ಇಳಿಯಲು ಹೋದಾಗ ಕಾಲು ಜಾರಿ ಕಾಲುವೆಗೆ ಬಿದ್ದಿದ್ದಾನೆ. ಆತನನ್ನು ರಕ್ಷಿಸಲು ಹೋದ ಕರಿಯಪ್ಪ ಸಹ ನೀರಿನಲ್ಲಿ ಮುಳುಗಿದ್ದಾನೆ.

Advertisements

ಇಬ್ಬರ ಶವಗಳು ನೂರು ಮೀಟರ್ ದೂರದಲ್ಲಿ ಕಾಲುವೆಯಲ್ಲಿ ಸಿಕ್ಕಿವೆ. ಈ ಸಂಬಂಧ ಕೆಂಭಾವಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಕಲಬುರಗಿ | ಸಾಲದ ಹಣ ತಡವಾಗಿ ನೀಡಿದಕ್ಕೆ ಹಲ್ಲೆ‌ : ಆರು ಜನರಿಗೆ 2 ವರ್ಷ ಜೈಲು ಶಿಕ್ಷೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X