ಬಿಎಸ್‌ಪಿ ಮುಖ್ಯ ರಾಷ್ಟ್ರೀಯ ಸಂಯೋಜಕರಾಗಿ ಸೋದರಳಿಯ ಆಕಾಶ್ ಆನಂದ್‌ರನ್ನು ಮೂರನೇ ಬಾರಿಗೆ ನೇಮಿಸಿದ ಮಾಯಾವತಿ

Date:

Advertisements

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ಬಿಎಸ್‌ಪಿಯ ಎಲ್ಲಾ ಹುದ್ದೆಗಳಿಂದ ತೆಗೆದುಹಾಕಿದ ತಿಂಗಳುಗಳ ನಂತರ ಮತ್ತೆ ಅವರನ್ನು ಬಿಎಸ್‌ಪಿ ಮುಖ್ಯ ರಾಷ್ಟ್ರೀಯ ಸಂಯೋಜಕರನ್ನಾಗಿ ನೇಮಿಸಿದ್ದಾರೆ. ಇಂದು (ಮೇ 18) ದೆಹಲಿಯ ಲೋಧಿ ರಸ್ತೆಯಲ್ಲಿರುವ ಬಿಎಸ್‌ಪಿ ಕೇಂದ್ರ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಪ್ರಮುಖ ರಾಷ್ಟ್ರೀಯ ಸಮಸ್ಯೆಗಳು ಮತ್ತು ಸಾಂಸ್ಥಿಕ ವಿಷಯಗಳ ಬಗ್ಗೆ ಚರ್ಚಿಸಲು ಹಿರಿಯ ನಾಯಕರು, ರಾಜ್ಯ ಪ್ರತಿನಿಧಿಗಳು ಮತ್ತು ಸಂಯೋಜಕರು ಸೇರಿ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಮುಂಬರುವ ಚುನಾವಣೆಯಲ್ಲಿ ಆಕಾಶ್ ಪ್ರಚಾರದ ಜವಾಬ್ದಾರಿಯನ್ನು ವಹಿಸಿಕೊಳ್ಳುತ್ತಾರೆ ಎಂದು ನಿರ್ಧರಿಸಲಾಗಿದೆ.

ಇದನ್ನು ಓದಿದ್ದೀರಾ? ಬಿಎಸ್‌ಪಿ ರಾಷ್ಟ್ರೀಯ ಸಂಯೋಜಕ ಹುದ್ದೆಯಿಂದ ಆಕಾಶ್ ಆನಂದ್ ವಜಾ

Advertisements

“ಈ ಬಾರಿ ಆಕಾಶ್ ಆನಂದ್ ಪಕ್ಷದ ಮತ್ತು ಪಕ್ಷದ ಸೈದ್ಧಾಂತಿಕ ಅಡಿಪಾಯವನ್ನು ಬಲಪಡಿಸುವ ಚಳುವಳಿಯ ಹಿತದೃಷ್ಟಿಯಿಂದ ಎಚ್ಚರಿಕೆಯಿಂದ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ ಎಂದು ಆಶಿಸಲಾಗಿದೆ” ಎಂದು ಬಿಎಸ್‌ಪಿ ಹೇಳಿಕೆಯಲ್ಲಿ ತಿಳಿಸಿದೆ.

ಈ ಬಾರಿ ಮಾಯಾವತಿ ಅವರು ಮೂವರು ರಾಷ್ಟ್ರೀಯ ಸಂಯೋಜಕರನ್ನು ನೇಮಿಸಿದ್ದಾರೆ. ರಾಮ್ ಜಿ ಗೌತಮ್, ರಣಧೀರ್ ಬೆನಿವಾಲ್ ಮತ್ತು ರಾಜಾ ರಾಮ್ ವರದಿಯಾಗಿದೆ.

ಇನ್ನು ಈ ಹಿಂದೆ ಮಾರ್ಚ್ 3ರಂದು ಮಾಯಾವತಿ, ಆಕಾಶ್ ಆನಂದ್ ಅವರನ್ನು ಬಿಎಸ್‌ಪಿಯಿಂದ ಹೊರಹಾಕಿದ್ದರು. ಅದಾದ ಕೇವಲ ನಲವತ್ತು ದಿನಗಳಲ್ಲಿ, ಏಪ್ರಿಲ್ 13ರಂದು ಆಕಾಶ್ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಳಿಕ ಮತ್ತೆ ಪಕ್ಷಕ್ಕೆ ಸೇರಿಸಿಕೊಂಡಿದ್ದರು.

ಆಕಾಶ್ ಅವರನ್ನು ಯಾರಿಂದಲೂ ಪ್ರಭಾವಿತರಾಗದಂತೆ ಎಚ್ಚರಿಸಿ ಪಕ್ಷಕ್ಕೆ ಸೇರಿಸಿದ್ದರು. ಆಕಾಶ್ ಆನಂದ್ ತನ್ನ ಮಾವನ ಮಾತುಗಳಿಗೆ ಮಣಿಯುತ್ತಿಲ್ಲ ಎಂದು ಭರವಸೆ ನೀಡಿದ ಬಳಿಕ ಮತ್ತೊಂದು ಅವಕಾಶ ನೀಡಲು ನಿರ್ಧರಿಸಲಾಗಿದೆ” ಎಂದು ಹೇಳಿದ್ದರು.

ಹಾಗೆಯೇ ಅದಾದ ಬಳಿಕ ಮಾಯಾವತಿ 2023ರಲ್ಲಿ ಆಕಾಶ್ ಆನಂದ್ ಅವರನ್ನು ತನ್ನ ರಾಜಕೀಯ ಉತ್ತರಾಧಿಕಾರಿ ಎಂದು ಘೋಷಿಸಿದ್ದರು. ಇದಾದ ಒಂದು ವರ್ಷದ ನಂತರ ಮಾಯಾವತಿ, ಆಕಾಶ್ ಅವರನ್ನು ಪಕ್ಷದಿಂದ ಹೊರಹಾಕಿದರು. ಪ್ರಬುದ್ಧತೆ ಇಲ್ಲ ಎಂದು ಕಾರಣ ನೀಡಿದ್ದರು.

“ನಾನು ಆಕಾಶ್ ಆನಂದ್ ಅವರನ್ನು ರಾಷ್ಟ್ರೀಯ ಸಂಯೋಜಕರು ಮತ್ತು ಅವರ ಉತ್ತರಾಧಿಕಾರಿ ಎಂದು ಘೋಷಿಸಿದ್ದೆ. ಆದರೆ ಪಕ್ಷ ಮತ್ತು ಚಳವಳಿಯ ಹಿತದೃಷ್ಟಿಯಿಂದ ಅವರು ಪೂರ್ಣ ಪ್ರಬುದ್ಧತೆಯನ್ನು ಪಡೆಯುವವರೆಗೆ ಈ ಎರಡೂ ಪ್ರಮುಖ ಜವಾಬ್ದಾರಿಗಳಿಂದ ಅವರನ್ನು ವಜಾಗೊಳಿಸಲಾಗುತ್ತಿದೆ” ಎಂದು ಹೇಳಿದ್ದರು. ಒಂದು ತಿಂಗಳ ನಂತರ ಆಂತರಿಕ ಹೊಂದಾಣಿಕೆ ಬಳಿಕ ಆಕಾಶ್ ಅವರನ್ನು ಮತ್ತೆ ಸೇರಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ಯಾಂಕ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ನಿವಾಸದ ಮೇಲೆ ಸಿಬಿಐ ದಾಳಿ, ಎಫ್‌ಐಆರ್ ದಾಖಲು

ಸುಮಾರು ಎರಡು ಸಾವಿರ ಕೋಟಿ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ...

ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಬಂಧಿಸಿದ ಇಡಿ: ನಗದು ಸಹಿತ ಚಿನ್ನಾಭರಣ ವಶಕ್ಕೆ

ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆ, ಕಚೇರಿ ಸೇರಿದಂತೆ 31...

ತಾಂತ್ರಿಕ ದೋಷ: ಮತ್ತೊಂದು ಏರ್‌ ಇಂಡಿಯಾ ವಿಮಾನ ರದ್ದು, ವಾರದಲ್ಲೇ ಮೂರನೇ ಘಟನೆ

110 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮುಂಬೈನಿಂದ ಜೋಧ್‌ಪುರಕ್ಕೆ ಹಾರುತ್ತಿದ್ದ ಏರ್‌ ಇಂಡಿಯಾ ವಿಮಾನವನ್ನು...

ಧರ್ಮಸ್ಥಳ ಪ್ರಕರಣ | ನಾವು ಯಾರ ಪರವೂ ಇಲ್ಲ; ನ್ಯಾಯದ ಪರ: ಡಿಸಿಎಂ ಡಿ.ಕೆ.ಶಿವಕುಮಾರ್

"ನಾವು ಧರ್ಮಸ್ಥಳದವರ ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ...

Download Eedina App Android / iOS

X