ಉಡುಪಿ | ಕಳ್ಳನೆಂದು ಭಾವಿಸಿ ಯುವಕನ ಮೇಲೆ ಹಲ್ಲೆ, ಮಾನಸಿಕ ಅಸ್ವಸ್ಥನ ರಕ್ಷಣೆ: ಸೂಚನೆ

Date:

Advertisements

ಉಡುಪಿ ನಗರದ ಉದ್ಯಾವರ ಪರಿಸರದಲ್ಲಿ ಮಹಾರಾಷ್ಟ್ರ ಮೂಲದ ಮಾನಸಿಕ ವ್ಯಕ್ತಿ ಓರ್ವನನ್ನು ಕಳ್ಳನೆಂದು ಭಾವಿಸಿ ಹಲ್ಲೆ ನಡೆಸಿದ್ದು ಸಕಾಲದಲ್ಲಿ ವಿಶು ಶೆಟ್ಟಿ ಅಂಬಲಪಾಡಿ ಆ ಮಾನಸಿಕ ಅಸ್ವಸ್ಥನನ್ನು ರಕ್ಷಿಸಿ ಕೊಳಲಗಿರಿಯ ಸ್ವರ್ಗ ಆಶ್ರಮಕ್ಕೆ ದಾಖಲಿಸಿದ ಘಟನೆ ಮೇ 18ರ ತಡರಾತ್ರಿ ನಡೆದಿದೆ.

ವ್ಯಕ್ತಿ ಯೂಸುಫ್ ಸುನ್ನಿ (40) ಮುಂಬೈಯ ಗೋರೆಗಾವ್ ಫಿಲ್ಮ್ ಸಿಟಿ ನಿವಾಸಿ ಹಾಗೂ ಮಡದಿ ಮಕ್ಕಳಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ. ವ್ಯಕ್ತಿ ಸಾರ್ವಜನಿಕರ ಮನೆಗಳಿಗೆ ರಾತ್ರಿ ಹೊತ್ತು ಹೋದ ಸಮಯ ಕಳ್ಳನೆಂದು ಭಾವಿಸಿ ಹಲ್ಲೆಗೊಳಗಾಗಿದ್ದಾನೆ. ದೇಹದಲ್ಲಿ ಏಟಿನ ಬಾಸುಂಡೆಗಳಿವೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದೆ.

ಉದ್ಯಾವರದ ಜಯಶ್ರೀ ವ್ಯಕ್ತಿಗೆ ರಾತ್ರಿ ಊಟ ನೀಡಿ ಉಪಚರಿಸಿದ್ದು ವಿಶು ಶೆಟ್ಟಿಯವರ ನೆರವಿನಿಂದ ಸಂಭಾವ್ಯ ಅನಾಹುತ ತಪ್ಪಿದೆ ಎಂದು ತಿಳಿಸಿದ್ದಾರೆ. ಸಂಬಂಧಿಕರು ಅಥವಾ ಸಂಬಂಧಪಟ್ಟವರು ಸ್ವರ್ಗ ಆಶ್ರಮ ಅಥವಾ ಕಾಪು ಪೊಲೀಸ್ ಠಾಣೆ ಸಂಪರ್ಕಿಸುವಂತೆ ವಿಶು ಶೆಟ್ಟಿ ವಿನಂತಿಸಿದ್ದಾರೆ.

Advertisements

1005459224
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X