ಬೆಂಗಳೂರು | ಸಾಕಾಗಿದೆ ಸಾಯಿ ಲೇಔಟ್ ಬದುಕು; ಸಾಧಾರಣ ಮಳೆಗೆ ಮುಳುಗಿದ ಬಡಾವಣೆ

Date:

Advertisements

ಬೆಂಗಳೂರಿನಲ್ಲಿ ಭಾನುವಾರ ರಾತ್ರಿಯಿಂದ ಮಳೆ ಅಬ್ಬರ ಹೆಚ್ಚಾಗಿದೆ. ಧಾರಾಕಾರವಾಗಿ ಮಳೆ ಸುರಿಯದಿದ್ದರೂ, ನಿರಂತರವಾಗಿ ಸಾಧಾರಣ ಮಳೆ ಸುರಿಯುತ್ತಿದೆ. ಸಣ್ಣ ಪ್ರಮಾಣದಲ್ಲಿ ಬೀಳುತ್ತಿರುವ ಮಳೆಗೆ ಬೆಂಗಳೂರು ಜಲಾವೃತಗೊಳ್ಳುತ್ತಿದೆ. ನೀರು ಹರಿಯಲು ಉತ್ತಮ ವ್ಯವಸ್ಥೆ ಇಲ್ಲದ ಕಾರಣ ರಸ್ತೆಗಳು, ಬೀದಿಗಳಲ್ಲಿ ಪ್ರವಾಹದಂತೆ ನೀರು ಹರಿಯುತ್ತಿದೆ. ಅದರಲ್ಲೂ, ಶ್ರೀಸಾಯಿ ಲೇಔಟ್, ಮಾನ್ಯತಾ ಟೆಕ್‌ಪಾರ್ಟ್‌ಗಳು ನೀರಿನಲ್ಲಿ ಮುಳುಗಿಹೋಗಿವೆ. ಸಾಯಿ ಲೇಔಟ್‌ನ ಜನರ ಬದುಕು ದುಸ್ತರವಾಗಿದೆ.

ಸೋಮವಾರ ಸುರಿದ ಮಳೆಗೆ ಶೀಸಾಯಿ ಲೇಔಟ್‌ ನೀರಿನಲ್ಲಿ ಮುಳುಗಿಹೋಗಿತ್ತು. ರಸ್ತೆ, ಬೀದಿಗಳಲ್ಲಿ ಆಳೆತ್ತರಕ್ಕೆ ನೀರು ನಿಂತಿತ್ತು. ಮಳೆಗಳು, ಕಚೇರಿಗಳು, ಅಂಗಡಿ ಮುಂಗಟ್ಟುಗಳೂ ಜಲಾವೃತಗೊಂಡಿದ್ದವು. ಜನರು ತಮ್ಮ ಮನೆಯ ತಾರಸಿಗಳಲ್ಲಿ ರಾತ್ರಿ ಕಳೆಯುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.

ಎಲ್ಲೆಡೆ ನೀರು ನುಗ್ಗಿದ್ದರಿಂದಾಗಿ ಗೃಹೋಪಯೋಗಿ ವಸ್ತುಗಳು, ಆಹಾರ ಪದಾರ್ಥಗಳು, ವಾಹನಗಳು ನೀರಿನಲ್ಲಿ ತೋಯ್ದು-ಕೊಚ್ಚಿ ಹೋಗಿವೆ. ಕೋಟ್ಯಂತರ ಮೌಲ್ಯದ ಆಸ್ತಿ-ಪಾಸ್ತಿ ನಷ್ಟವಾಗಿದೆ ಎಂದು ಹೇಳಲಾಗಿದೆ. ಅಲ್ಲಿನ ನಿವಾಸಿಗಳಿಗೆ ಬಿಬಿಎಂಪಿ ನೌಕರರು ಬೋಟ್‌ ಮತ್ತು ಟ್ರ್ಯಾಕ್ಟರ್‌ಗಳ ಮೂಲಕ ಆಹಾರದ ವಿತರಿಸಿದ್ದಾರೆ.

Advertisements

ಈ ವರದಿ ಓದಿದ್ದೀರಾ: ಗುಲಬರ್ಗಾ ವಿವಿ ಕರ್ಮಕಾಂಡ-3: ಮೂರು ವರ್ಷಗಳಿಂದ 9,024 ಫಲಿತಾಂಶ ಪೆಂಡಿಂಗ್!

ಸ್ಥಳಕ್ಕೆ ಶಾಸಕ ಬೈರತಿ ಬಸವರಾಜು, ಬಿಬಿಎಂಪಿ ಅಡಳಿತಾಧಿಕಾರಿ ತುಷಾರ್ ಗಿರಿನಾಥ್ ಹಾಗೂ ಬಿಡಿಎ ಆಯುಕ್ತ ಜಯರಾಂ ಸೇರಿದಂತೆ ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

“ಲೇಔಟ್‌ನಲ್ಲಿನ ನೀರು ಸಂಪೂರ್ಣವಾಗಿ ಹರಿದು ಹೋಗಲು ಹೆಚ್ಚು ಸಮಯ ಬೇಕು. ಮಂಗಳವಾರ ರಾತ್ರಿಯೂ ಮತ್ತೆ ಮಳೆಯಾದರೆ, ಮುನ್ನೆಚ್ಚರಿಕೆಯಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಜಲವೃತ ಪ್ರದೇಶಗಳಿಂದ ಹೊರಬರುವಂತೆ ಅಲ್ಲಿನ ನಿವಾಸಿಗಳಿಗೆ ತಿಳಿಸಿದ್ದೇವೆ. ಅಲ್ಲೇ ಇರುವವರಿಗೆ ಆಹಾರ ಪೂರೈಕೆ ಮಾಡುತ್ತಿದ್ದೇವೆ” ಎಂದು ಗಿರಿನಾಥ್ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X