ಬೆಂಗಳೂರು | ಮಂಗಳವಾರ ಸುರಿದ ಜೋರು ಮಳೆಗೆ ವಾಹನ ಸವಾರರ ಪರದಾಟ

Date:

Advertisements
  • ತಾಪಮಾನದಲ್ಲಿ ಕಡಿಮೆಯಾಗಿದ್ದು, ಚಳಿ ವಾತಾವರಣ
  • ಮಳೆಯಿಂದ ನಗರದೆಲ್ಲೆಡೆ ವಾಹನ ಸಂಚಾರ ದಟ್ಟಣೆ

ರಾಜ್ಯದಲ್ಲಿ ಮುಂಗಾರು ಈಗ ಚುರುಕುಗೊಂಡಿದೆ. ಬೆಂಗಳೂರಿನಲ್ಲಿ ಮಂಗಳವಾರ ಸಂಜೆಯಿಂದ ಜೋರು ಮಳೆ ಸುರಿಯುತ್ತಿದ್ದು, ಈ ಮಳೆ ಇನ್ನೂ ನಾಲ್ಕು ದಿನ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಗರದ ಪ್ರಕಾಶನಗರ, ರಾಜಾಜಿನಗರ, ಯಶವಂತಪುರ, ಮಲ್ಲೇಶ್ವರಂ, ಸದಾಶಿವನಗರ, ವಿಜಯನಗರ, ಗೋವಿಂದರಾಜನಗರ, ನವರಂಗ ಸೇರಿದಂತೆ ನಗರದ ಹಲವೆಡೆ ಜೋಡು ಮಳೆ ಸುರಿಯುತ್ತಿದೆ. ಮಳೆಯಲ್ಲಿ ಸಂಚರಿಸಲು ವಾಹನ ಸವಾರರಿಗೆ ಕಿರಿಕಿರಿ ಉಂಟಾಗಿದೆ.

ಕಳೆದ ಒಂದು ವಾರದಿಂದ ನಗರದಲ್ಲಿ ಮಳೆ ಜತೆ ತಂಪು ವಾತಾವರಣ ಇದ್ದು, ನಗರದ ಹಲವೆಡೆ ಸೋಮವಾರವೂ ಮಳೆ ಸುರಿದಿದೆ. ಭಾನುವಾರ ನಗರದ ವಿವಿಧೆಡೆ ಉತ್ತಮ ಮಳೆ ದಾಖಲಾಗಿದೆ. ತಾಪಮಾನದಲ್ಲಿ ಇಳಿಕೆ ಆಗಿದ್ದು, ಎಲ್ಲೆಡೆ ಚಳಿ ವಾತಾವರಣ ಆರಂಭವಾಗಿದೆ.

Advertisements

ಮಂಗಳವಾರ ನಗರದಲ್ಲಿ ಜೋರು ಮಳೆ ಸುರಿಯುತ್ತಿದ್ದು, ಸಾಯಂಕಾಲ ಕೆಲಸ ಮುಗಿಸಿ ಮನೆಗೆ ತೆರಳುವವರು ಪರದಾಡಿದರು. ವಾಹನ ಸವಾರರು ಮಳೆಯಿಂದ ತಪ್ಪಿಸಿಕೊಳ್ಳಲು ಅಂಡರ್‌ಪಾಸ್‌ಗಳಲ್ಲಿ ಆಶ್ರಯ ಪಡೆದಿದ್ದರು. ಇನ್ನೂ ನಗರದೆಲ್ಲೆಡೆ ವಾಹನ ಸಂಚಾರ ದಟ್ಟಣೆ ಉಂಟಾಗಿತ್ತು.

ಕಾಮಾಕ್ಷಿಪಾಳ್ಯ ಬಸ್ ಸ್ಟಾಪ್ ಬಳಿ ರಸ್ತೆಯಲ್ಲಿ ಮಳೆ ನೀರು ನಿಂತು ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ರಸ್ತೆಯಲ್ಲಿ ನಿಂತಿದ್ದ ಮಳೆ ನೀರನ್ನು ಹೆಡ್ ಕಾನ್ಸ್‌ಟೇಬಲ್ ಮಧುಸೂದನ್ ರವರು ತೆರುವುಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಈ ಸುದ್ದಿ ಓದಿದ್ದೀರಾ? ‘ಶಕ್ತಿ’ ಯೋಜನೆಗೆ ತಿಂಗಳು: ಲಾಭ ಪಡೆದ 16.73 ಕೋಟಿ ಮಹಿಳೆಯರು, 402 ಕೋಟಿ ಟಿಕೆಟ್ ಮೊತ್ತ

ಇನ್ನೂ ಪಣತ್ತೂರು ರೈಲ್ವೆ ಸೇತುವೆಯ ಅಂಡರ್‌ಪಾಸ್‌ ಕೆಳಗೆ ಮಳೆ ನೀರು ನಿಂತಿದ್ದು, ಮಳೆಯಿಂದಾಗಿ ಸಂಚಾರವು ಸ್ವಲ್ಪ ನಿಧಾನವಾಗಿದೆ. ಹಾಗಾಗಿ, ಪ್ರಯಾಣಿಕರು ಈ ಮಾರ್ಗದ ಪರ್ಯಾಯವಾಗಿ ಬದಲಿ ಮಾರ್ಗದಲ್ಲಿ ಸಂಚರಿಸಲು ಬೆಂಗಳೂರು ಸಂಚಾರ ಪೊಲೀಸ್‌ ತಿಳಿಸಿದೆ.

ಬೆಳ್ಳಂದೂರಿನ ಡೌನ್ ರಾಂಪ್‌ನಲ್ಲಿ ನೀರು ತುಂಬಿರುವ ಕಾರಣ ಇಕೋಸ್ಪೇಸ್‌ನಿಂದ ಇಬ್ಬಲೂರು ಕಡೆಗೆ ವಾಹನಗಳು ನಿಧಾನವಾಗಿ ಚಲಿಸುತ್ತಿದ್ದು, ಸಂಚಾರ ಪೊಲೀಸರು ಸುಗಮ ಸಂಚಾರಕ್ಕೆ ನೀರನ್ನು ತೆರುವು ಮಾಡುತ್ತಿದ್ದಾರೆ.  

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X