ಬೆಂಗಳೂರಿನಲ್ಲೊಬ್ಬ ವಿಚಿತ್ರ ಕಳ್ಳ; ಕದ್ದ ಹಣದಲ್ಲಿ 20 ಮಕ್ಕಳ ಶಾಲಾ, ಕಾಲೇಜು ಶುಲ್ಕ ಕಟ್ಟಿದ್ದ!

Date:

Advertisements

ಕಳ್ಳತನ ಮಾಡಿ 20 ಮಕ್ಕಳ ಶಾಲಾ, ಕಾಲೇಜು ಶುಲ್ಕ ಕಟ್ಟಿದ್ದ ಮನೆಗಳ್ಳನನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಬೇಗೂರು ನಿವಾಸಿ ಶಿವು ಅಲಿಯಾಸ್ ಶಿವರಪ್ಪನ್ ಈ ಕಳ್ಳತನದ ಪ್ರಮುಖ ರೂವಾರಿ. ಈತ ತಾನು ವಾಸಿಸುತ್ತಿದ್ದ ಸ್ಥಳದಲ್ಲಿ ತನ್ನ ಸ್ನೇಹಿತರು ಅವರ ಮಕ್ಕಳಿಗಾಗಿ ಶಾಲಾ, ಕಾಲೇಜು ಶುಲ್ಕ ಕಟ್ಟಲು ಪರದಾಡುತ್ತಿರುವುದನ್ನು ನೋಡಿದ್ದ.

ಬಳಿಕ ಬ್ಯಾಡರಹಳ್ಳಿ ಸೇರಿದಂತೆ ಹಲವೆಡೆ ಮನೆಗಳಿಗೆ ಕನ್ನ ಹಾಕಿ ಚಿನ್ನಾಭರಣವನ್ನು ದೋಚಿ ಸ್ನೇಹಿತರಾದ ಅನಿಲ್ ಮತ್ತು ವಿವೇಕ್‌ ಸಹಾಯದಿಂದ ಮಾರಾಟ ಮಾಡಿದ್ದಾನೆ.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಂಗಳೂರು-ತುಮಕೂರು ಮೆಟ್ರೊ ಯೋಜನೆ ಯಾರಿಗಾಗಿ?

ತಮಿಳುನಾಡಿನಲ್ಲಿ 22 ಲಕ್ಷಕ್ಕೆ ಚಿನ್ನ ಮಾರಾಟ ಮಾಡಿಸಿದ್ದ ಶಿವು ಬಂದ ಹಣದಲ್ಲಿ ವಿವೇಕ್‌ಗೆ 4 ಲಕ್ಷ, ಅನಿಲ್‌ಗೆ 4 ಲಕ್ಷ ರೂ. ಮೌಲ್ಯದ ಆಟೋ ಕೊಡಿಸಿದ್ದ.

ಉಳಿದ 14 ಲಕ್ಷ ರೂ. ಹಣದಲ್ಲಿ ಪ್ರದೇಶದ 20 ಮಕ್ಕಳಿಗೆ ಶಾಲಾ ಹಾಗೂ ಕಾಲೇಜು ಶುಲ್ಕ ಕಟ್ಟಿದ್ದಾನೆ. ಮನೆಗಳ್ಳರ ಬೆನ್ನತ್ತಿದ್ದ ಬ್ಯಾಡರಹಳ್ಳಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಪೊಲೀಸರು 24 ಲಕ್ಷ ಮೌಲ್ಯದ 260 ಗ್ರಾಂ ಚಿನ್ನದ ಗಟ್ಟಿಯನ್ನು ವಶಪಡಿಸಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

ಬೆಂಗಳೂರು ಮೆಟ್ರೋ: ನಾಳೆ ಹಳದಿ ಮಾರ್ಗದಲ್ಲಿ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ಹಳದಿ ಮಾರ್ಗದಲ್ಲಿ ಸೋಮವಾರ...

ಆರೋಗ್ಯ ಸಂಪರ್ಕ ಕಾರ್ಯಕರ್ತೆಯರ ವೇತನ ಪಾವತಿ ಗೊಂದಲ ಬಗೆಹರಿಸಲು ಕ್ರಮ: ಡಿ.ಕೆ.ಶಿವಕುಮಾರ್

ಬಿಬಿಎಂಪಿ ಆರೋಗ್ಯ ಸಂಪರ್ಕ ಕಾರ್ಯಕರ್ತೆಯರ ವೇತನ ಗೊಂದಲವನ್ನು ಅಧಿಕಾರಿಗಳ ಜತೆ ಚರ್ಚಿಸಿ,...

Download Eedina App Android / iOS

X