ರಾಮನಗರ | ಮರಣೋತ್ತರ ಪರೀಕ್ಷೆ; ರೈಲು ಡಿಕ್ಕಿಯಿಂದಲೇ ಬಾಲಕಿ ಸಾವು ಎಂದ ಎಸ್‌ಪಿ

Date:

Advertisements

ರಾಮನಗರ ಜಿಲ್ಲೆಯ ಬಿಡದಿ ಬಳಿಯ ಭದ್ರಾಪುರದಲ್ಲಿ ಅಪ್ರಾಪ್ತ ಬಾಲಕಿಯದ್ದು ಕೊಲೆಯಲ್ಲ, ಬದಲಿಗೆ ರೈಲು ಅಪಘಾತವಾಗಿ ಬಾಲಕಿ ಮೃತಪಟ್ಟಿದ್ದಾಳೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಆರ್ ಶ್ರೀನಿವಾಸ ಗೌಡ ಅವರು ಹೇಳಿದ್ದಾರೆ. 15 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆಯಾಗಿದೆ ಎಂದು ಹೇಳಲಾಗಿತ್ತು. ಆದರೆ ಇದೀಗ ಮರಣೋತ್ತರ ಪರೀಕ್ಷೆಯಲ್ಲಿ ಇದು ಕೊಲೆಯಲ್ಲ ಅಪಘಾತ ಎಂದು ತಿಳಿದುಬಂದಿದೆ ಎಂದು ವರದಿಯಾಗಿದೆ.

ಸೋಮವಾರ ಮರಣೋತ್ತರ ಪರೀಕ್ಷೆಯ ವರದಿ ಸಿಕ್ಕಿದೆ. ಜೊತೆಗೆ ರೈಲು ಅಪಘಾತದ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಯು ವಾಟ್ಸಾಪ್ ಮೂಲಕ ಹರಿದಾಡಿದೆ. ಪೊಲೀಸರು ಈ ವಿಡಿಯೋ ಅಸಲಿ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ಬಿಡದಿ | ಮೂಕ ಬಾಲಕಿ ಅಪಹರಿಸಿ ಕೊಲೆ, ಅಧಿಕಾರಿಗಳ ಸಮ್ಮುಖದಲ್ಲಿ ಅಂತ್ಯಸಂಸ್ಕಾರ

Advertisements

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಆರ್ ಶ್ರೀನಿವಾಸ ಗೌಡ, “ಬಾಲಕಿಯ ಮರಣೋತ್ತರ ಪರೀಕ್ಷೆ ವರದಿ ಮತ್ತು ಎಫ್‌ಎಸ್‌ಎಲ್ ವರದಿ ಸಿಕ್ಕಿದೆ. ಎಲ್ಲಾ ಆಯಾಮಗಳಿಂದ ಈ ಪ್ರಕರಣದ ತನಿಖೆ ನಡೆಸಲಾಗಿದೆ. ಈ ಪ್ರಕರಣದ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳು ಸುಳ್ಳು” ಎಂದು ಹೇಳಿದರು.

“ಎಫ್‌ಎಸ್‌ಎಲ್‌ ಮತ್ತು ಮರಣೋತ್ತರ ಪರೀಕ್ಷೆಯಲ್ಲಿ ಬಾಲಕಿಯ ತಲೆಗೆ ಏಟಾಗಿದೆ ಎಂದು ತಿಳಿದುಬಂದಿದೆ. ಜೊತೆಗೆ ತನಿಖೆಯಲ್ಲಿ ರೈಲ್ವೆ ಇನ್ಸ್‌ಟಿಟ್ಯೂಟ್ ಕ್ಯಾಮೆರಾ ವಿಡಿಯೋ ಲಭಿಸಿದೆ. ಎರಡು ಸಿಸಿ ಕ್ಯಾಮೆರಾದಲ್ಲಿ ಬಾಲಕಿಯ ಚಲನವಲನದ ಪರಿಶೀಲಿಸಿದ್ದೇವೆ. ರೈಲ್ವೆ ಅಪಘಾತದಿಂದ ಬಾಲಕಿ ಮೃತಪಟ್ಟಿರುವುದು ಖಚಿತವಾಗಿದೆ” ಎಂದು ಹೇಳಿದರು.

ರಾಮನಗರ ಜಿಲ್ಲೆ ಬಿಡದಿಯಲ್ಲಿ ಮಾತು ಬಾರದ ಮತ್ತು ಕಿವಿ ಕೇಳದ ಬಾಲಕಿಯು ಶವವಾಗಿ ಪತ್ತೆಯಾಗಿದ್ದಳು. “ತಮ್ಮ ಮಗಳ ಮೇಲೆ ಅತ್ಯಾಚಾರ ಎಸಗಿ, ಚಿತ್ರಹಿಂಸೆ ನೀಡಿ ಕ್ರೂರವಾಗಿ ಕೊಲೆ ಮಾಡಲಾಗಿದೆ. ಹಂತಕರನ್ನು ಪೊಲೀಸರು ಬಂಧಿಸುವವರೆಗೆ ಆಕೆಯ ಶವಸಂಸ್ಕಾರ ಮಾಡುವುದಿಲ್ಲ” ಎಂದು ಹೇಳಿ ಪೋಷಕರು ಹೇಳಿದ್ದರು.

ಇದಾದ ಬಳಿಕ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಅದಾದ ಬಳಿಕ ಕೊನೆಗೆ ಅಧಿಕಾರಿಗಳು ಪಾಲಕರ ಮನವೊಲಿಸಿದ್ದು, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಸ್ಥಳಕ್ಕೆ ಧಾವಿಸಿದ ನಂತರ ಸ್ಥಳೀಯ ಸ್ಮಶಾನದಲ್ಲಿ ಬಾಲಕಿಯ ಅಂತ್ಯಸಂಸ್ಕಾರ ನಡೆದಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಮನಗರ | ಪಿತೃಪ್ರಭುತ್ವವು ಪುರುಷರಿಗೂ ಸೀಮಿತತೆ ತರುತ್ತದೆ: ಕಿರಣ

ಪಿತೃಪ್ರಭುತ್ವವು ಮಹಿಳೆಯರಿಗೆ ಮಾತ್ರವಲ್ಲ, ಪುರುಷರಿಗೂ ಒತ್ತಡ ಮತ್ತು ಸೀಮಿತತೆಯನ್ನು ತರುತ್ತದೆ ಎಂದು...

ರಾಮನಗರ | ವೇತನ ಅಸೂಯೆ: ಸಹೋದ್ಯೋಗಿ ಗುದದ್ವಾರಕ್ಕೆ ಕಂಪ್ರೆಸ್ಸರ್ ಗಾಳಿ ಬಿಟ್ಟು ವಿಕೃತಿ

ವಿಕೃತ ವ್ಯಕ್ತಿಯೊಬ್ಬ ತನಗಿಂತ ಹೆಚ್ಚು ವೇತನ ಪಡೆಯುತ್ತಿದ್ಧಾರೆ ಎಂಬ ಕಾರಣ...

ಹಾರೋಹಳ್ಳಿ | ಬನವಾಸಿಯಲ್ಲಿ ಅಸ್ಪೃಶ್ಯತೆ ಆಚರಣೆ: ರಾಜಿ, ಮಾತುಕತೆ ನೆಪದಲ್ಲಿ ಆರೋಪಿಗಳ ರಕ್ಷಣೆ

ಜಾತಿ ಅವಮಾನ, ಅಸ್ಪೃಶ್ಯತೆಯಂತಹ ಪ್ರಕರಣ ನಡೆದಾಗ ತಪ್ಪಿತಸ್ಥರನ್ನು ಒದ್ದು, ಬುದ್ಧಿಕಲಿಸಬೇಕಾದ ಪೊಲೀಸರು,...

ಬಿಡದಿ ಬಾಲಕಿಯ ಕೊಲೆ; ಸಮರ್ಪಕ ತನಿಖೆಗೆ ಜನವಾದಿ ಸಂಘಟನೆ ಒತ್ತಾಯ

ರಾಮನಗರ ಜಿಲ್ಲೆಯ ಬಿಡದಿ ಬಳಿಯ ಭದ್ರಾಪುರದಲ್ಲಿ ಅಪ್ರಾಪ್ತ ಬಾಲಕಿಯ ಕೊಲೆ ಮತ್ತು...

Download Eedina App Android / iOS

X