ರಾಯಚೂರು | ಪಿಡಿಒ ಚಕಾರ ,ಗ್ರಾಮ ಪಂಚಾಯತ್ ಢಮಾರ್; ಮುತ್ತಿಗೆ ಹಾಕಿ ಪ್ರತಿಭಟನೆ

Date:

Advertisements

ಲಿಂಗಸೂಗೂರು ತಾಲ್ಲೂಕು ನಾಗಲಾಪುರ ಗ್ರಾಮದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆರು ದಿನಗಳಿಂದ ಕೆಲಸಕ್ಕೆ ಗೈರು ಹಾಜರಾಗಿದ್ದು ಅಬಿವೃದ್ಧಿ ಕಾರ್ಯಗಳು ಕುಂಠಿತ ಗೊಂಡಿವೆ ಎಂದು ಗ್ರಾಮಸ್ಥರು ಪಂಚಾಯತಗೆ ಮುತ್ತಿಗೆ ಹಾಕಿದರು.

ಗ್ರಾಮಸ್ಥ ಮಾತನಾಡಿ ,ಮೇ 14 ರಿಂದ ಪಿಡಿಒ ಕಚೇರಿಗೆ ಬಂದಿಲ್ಲ.ಅನಧಿಕೃತವಾಗಿ ವಾರಗಳಿಂದ ಗೈರುಹಾಜರಾಗಿದ್ದು ಅಭಿವೃದ್ಧಿ ಕುಡಿಯುವ ನೀರು ಪೂರೈಕೆ ಅಸ್ತವ್ಯಸ್ತಗೊಂಡಿದೆ. ನೈರ್ಮಲ್ಯ ವ್ಯವಸ್ಥೆ ಹದಗೆಟ್ಟಿದೆ, ಬೀದಿದೀಪಗಳೂ ಇಲ್ಲ. ಜನರಿಗೆ ಉದ್ಯೋಗ ಇಲ್ಲ ಎಂದು ಆರೋಪಿಸಿದರು.

ಪಿಡಿಒ ಅವರನ್ನು ಕೇಳಿದರೆ ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ ಎಂದು ಆರೋಪಿಸಿದ ಅವರು, ಕಚೇರಿಗೆ ಬಾರದೆ ಗೈರು ಹಾಜರಾಗಿದ್ದರೂ ಪಿಡಿಒ ಮನೆಯಿಂದ ದಾಖಲೆಗಳಿಗೆ ಸಹಿ ಮಾಡಿ ಕೊಡುತ್ತಿದ್ದಾರೆ ಎಂದು ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ರಾಯಚೂರು |ಸಿಡಿಲು ಬಡಿದು ಕುರಿಗಾಹಿ ಸಾವು

ಉದ್ಯೋಗ ಖಾತ್ರಿ ಕೆಲಸ ಕೇಳಿದರೆ ನನಗೂ ನರೇಗಾ ಕೆಲಸಕ್ಕೂ ಸಂಬಂಧವಿಲ್ಲ,ನಾನು ಹೇಳಿದಂತೆ ಕೇಳಬೇಕು ನೀವು ಹೇಳಿದಂತೆ ನಾನು ಕೇಳಲ್ಲ ಎಂದು ಉಡಾಫೆ ಉತ್ತರ ನೀಡುತ್ತಾರೆ.ರಾಜಕೀಯ ಹಿಂಬಾಲಕರನ್ನು ಬಳಸಿಕೊಂಡು ರೈತರ, ಕೂಲಿ ಕಾರ್ಮಿಕರ ಮೇಲೆ ದಬ್ಬಾಳಿಕೆ ಮಾಡುವ ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಆರೋಪಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

Download Eedina App Android / iOS

X