ಬೀದರ್ | ಅಂಗನವಾಡಿ ನೌಕರರಿಗೆ ಹೊಸ ಮೊಬೈಲ್ ವಿತರಿಸಲು ಒತ್ತಾಯ

Date:

Advertisements

ಅಂಗನವಾಡಿ ನೌಕರರಿಗೆ ಹೊಸ ಮೊಬೈಲ್ ವಿತರಿಸುವುದು ಸೇರಿದಂತೆ ನಾನಾ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಒತ್ತಾಯಿಸಿ ಭಾಲ್ಕಿತಾಲೂಕಿನ ಅಂಗನವಾಡಿ ನೌಕರರು ಪ್ರತಿಭಟನೆ ನಡೆಸಿದ್ದಾರೆ.

ಅಂಗನವಾಡಿ ನೌಕರರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ನೌಕರರು ತಹಶೀಲ್ದಾರ್‌ಗೆ ಹಕ್ಕೊತ್ಥಾಯ ಪತ್ರ ಸಲ್ಲಿಸಿದ್ದಾರೆ. “ಸರ್ಕಾರ ನೀಡಿರುವ ಮೊಬೈಲ್‌ಗಳಲ್ಲಿ ನೆಟ್‌ವರ್ಕ್, ರ‍್ಯಾಮ್, ಸ್ಟೋರೇಜ್ ಸಮಸ್ಯೆ ಇದೆ. ಹೊಸ ಆ್ಯಪ್‌ಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶವಿಲ್ಲ. ಪ್ರತಿನಿತ್ಯ ಮಕ್ಕಳ, ಪೋಷಕರ ಹಾಜರಾತಿ, ಆಹಾರ ವಿತರಣೆ, ಶಾಲಾಪೂರ್ವ ಶಿಕ್ಷಣ ಚಟುವಟಿಕೆಗಳನ್ನು ಅಪ್‌ಲೋಡ್ ಮಾಡುವುದಕ್ಕೆ ಸಮಸ್ಯೆಯಾಗುತ್ತಿದೆ” ಎಂದು ವಿವಹಿಸಿದ್ದಾರೆ.

“ಈಗಾಗಲೇ ನಾಲ್ಕು ವರ್ಷಗಳ ಹಿಂದೆ ನೀಡಿರುವ ಮೊಬೈಲ್‌ಗಳು ಹಾಳಾಗಿವೆ. ಆದ್ದರಿಂದ, ಆರೋಗ್ಯ ಸಮೀಕ್ಷೆ ಕೈಗೊಳ್ಳಲು ಹೊಸ ಮೊಬೈಲ್‌ಗಳನ್ನು ನೀಡಬೇಕು. ಇಲ್ಲವಾದರೆ, ಕೈಪಿಡಿಯಲ್ಲಿ ದಾಖಲಿಸಲು ಅವಕಾಶ ನೀಡಬೇಕು. ಹಿಂದಿನ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿರುವ 1,000 ಗೌರವಧನವನ್ನು ಕೂಡಲೇ ಪಾವತಿ ಮಾಡಬೇಕು. ಕನಿಷ್ಠ ವೇತನ ಜಾರಿ, ಸಾಮಾಜಿಕ ಭದ್ರತೆ, ಏಕ ರೂಪದ ಸೇವಾ ನಿಯಮ ಜಾರಿಗೊಳಿಸಬೇಕು” ಎಂದು ಒತ್ತಾಯಿಸಿದ್ದಾರೆ.

Advertisements

ಪ್ರತಿಭಟನೆಯಲ್ಲಿ ತಾಲೂಕು ಅಂಗನವಾಡಿ ನೌಕರರ ಸಂಘದ ತಾಲೂಕು ಅಧ್ಯಕ್ಷೆ ಸುಶೀಲಾ ಹತ್ತಿ, ಉಪಾಧ್ಯಕ್ಷೆ ಅನಿತಾ ಪಸರಗೆ, ಖಜಾಂಚಿ ಈಶ್ವರಮ್ಮ ಮಠಪತಿ, ಕಾರ್ಯದರ್ಶಿ ಪೂಜಾಶೀಲಾ ಭಾವಿಕಟ್ಟಿ ಸೇರಿದಂತೆ ನೂರಾರು ಅಂಗವಾಡಿ ಕಾರ್ಯಕರ್ತೆಯರು ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X