ಅಂಗನವಾಡಿ ನೌಕರರಿಗೆ ಹೊಸ ಮೊಬೈಲ್ ವಿತರಿಸುವುದು ಸೇರಿದಂತೆ ನಾನಾ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಒತ್ತಾಯಿಸಿ ಭಾಲ್ಕಿತಾಲೂಕಿನ ಅಂಗನವಾಡಿ ನೌಕರರು ಪ್ರತಿಭಟನೆ ನಡೆಸಿದ್ದಾರೆ.
ಅಂಗನವಾಡಿ ನೌಕರರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ನೌಕರರು ತಹಶೀಲ್ದಾರ್ಗೆ ಹಕ್ಕೊತ್ಥಾಯ ಪತ್ರ ಸಲ್ಲಿಸಿದ್ದಾರೆ. “ಸರ್ಕಾರ ನೀಡಿರುವ ಮೊಬೈಲ್ಗಳಲ್ಲಿ ನೆಟ್ವರ್ಕ್, ರ್ಯಾಮ್, ಸ್ಟೋರೇಜ್ ಸಮಸ್ಯೆ ಇದೆ. ಹೊಸ ಆ್ಯಪ್ಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ಅವಕಾಶವಿಲ್ಲ. ಪ್ರತಿನಿತ್ಯ ಮಕ್ಕಳ, ಪೋಷಕರ ಹಾಜರಾತಿ, ಆಹಾರ ವಿತರಣೆ, ಶಾಲಾಪೂರ್ವ ಶಿಕ್ಷಣ ಚಟುವಟಿಕೆಗಳನ್ನು ಅಪ್ಲೋಡ್ ಮಾಡುವುದಕ್ಕೆ ಸಮಸ್ಯೆಯಾಗುತ್ತಿದೆ” ಎಂದು ವಿವಹಿಸಿದ್ದಾರೆ.
“ಈಗಾಗಲೇ ನಾಲ್ಕು ವರ್ಷಗಳ ಹಿಂದೆ ನೀಡಿರುವ ಮೊಬೈಲ್ಗಳು ಹಾಳಾಗಿವೆ. ಆದ್ದರಿಂದ, ಆರೋಗ್ಯ ಸಮೀಕ್ಷೆ ಕೈಗೊಳ್ಳಲು ಹೊಸ ಮೊಬೈಲ್ಗಳನ್ನು ನೀಡಬೇಕು. ಇಲ್ಲವಾದರೆ, ಕೈಪಿಡಿಯಲ್ಲಿ ದಾಖಲಿಸಲು ಅವಕಾಶ ನೀಡಬೇಕು. ಹಿಂದಿನ ಸರ್ಕಾರ ಬಜೆಟ್ನಲ್ಲಿ ಘೋಷಿಸಿರುವ 1,000 ಗೌರವಧನವನ್ನು ಕೂಡಲೇ ಪಾವತಿ ಮಾಡಬೇಕು. ಕನಿಷ್ಠ ವೇತನ ಜಾರಿ, ಸಾಮಾಜಿಕ ಭದ್ರತೆ, ಏಕ ರೂಪದ ಸೇವಾ ನಿಯಮ ಜಾರಿಗೊಳಿಸಬೇಕು” ಎಂದು ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ತಾಲೂಕು ಅಂಗನವಾಡಿ ನೌಕರರ ಸಂಘದ ತಾಲೂಕು ಅಧ್ಯಕ್ಷೆ ಸುಶೀಲಾ ಹತ್ತಿ, ಉಪಾಧ್ಯಕ್ಷೆ ಅನಿತಾ ಪಸರಗೆ, ಖಜಾಂಚಿ ಈಶ್ವರಮ್ಮ ಮಠಪತಿ, ಕಾರ್ಯದರ್ಶಿ ಪೂಜಾಶೀಲಾ ಭಾವಿಕಟ್ಟಿ ಸೇರಿದಂತೆ ನೂರಾರು ಅಂಗವಾಡಿ ಕಾರ್ಯಕರ್ತೆಯರು ಹಾಜರಿದ್ದರು.