ಗದಗ | ಕಾಮಗಾರಿ ನಾಮ ಫಲಕದಲ್ಲಿ ಸಂಪೂರ್ಣ ಮಾಹಿತಿ ದಾಖಲಿಸಬೇಕು: ಜಿ.ಪಂ ಸಿಇಒ

Date:

Advertisements

ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ (ಮನರೇಗಾ) ಕೈಗೊಳ್ಳುವ ಎಲ್ಲ ಕಾಮಗಾರಿಯ ಸಂಪೂರ್ಣ ಮಾಹಿತಿಯನ್ನು ನಾಮ ಫಲಕದಲ್ಲಿ ಅಳವಡಿಸಬೇಕು. ಆ ಮೂಲಕ ಜನರಿಗೆ ಮಾಹಿತಿ ದೊರಕುವಂತೆ ಮಾಡುವುದು ಗ್ರಾಮ ಪಂಚಾಯತಿ ಹಂತದ ಸಿಬ್ಬಂದಿಗಳ ಕರ್ತವ್ಯ ಎಂದು ಗದಗ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಡಾ. ಸುಶೀಲಾ ಬಿ ಹೇಳಿದರು.

ರೋಣ ತಾಲೂಕಿನ ಮಲ್ಲಾಪುರ, ಮಾರನಬಸರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮನರೇಗಾ ಯೋಜನೆಯಡಿ ಕೈಗೊಂಡ ರಸ್ತೆ ಕಾಮಗಾರಿ, ಸಿಸಿ ರಸ್ತೆಗಳ ಕಾಮಗಾರಿಗಳನ್ನು ಅವರು ಪರಿಶೀಲಿಸಿದರು. “ಕಾಮಗಾರಿಯ ಸಂಪೂರ್ಣ ಮಾಹಿತಿಯನ್ನು ನಾಮಫಲಕದಲ್ಲಿ ಅಳವಡಿಸಿ, ಜನರಿಗೆ ಮಾಹಿತಿ ದೊರಕುವಂತೆ ಮಾಡುವುದು ಸಿಬ್ಬಂಗಿಳ ಕರ್ತವ್ಯ. ಯಾವುದೇ ರೀತಿಯಲ್ಲಿ ಅಪೂರ್ಣ ಮಾಹಿತಿ ಇದ್ದಲ್ಲಿ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು.

“ಗ್ರಾಮೀಣ ಭಾಗದ ಜನರಿಗೆ ಹೆಚ್ಚು ಹೆಚ್ಚು ಆಸ್ತಿ ಸೃಜನೆ ಮಾಡುವ ಮೂಲಕ ಅವರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗ (ಪಿಡಿಒ) ಕೆಲಸ ಮಾಡಬೇಕು. ಪಂಚಾಯತಿ ನಿರ್ಮಾಣ ಮಾಡುವ ಸಿಸಿ ರಸ್ತೆಗಳು ಗುಣಮಟ್ಟದಿಂದ ಕೂಡಿರಬೇಕು. ಗುಣಮಟ್ಟದಲ್ಲಿ ಯಾವುದೇ ರೀತಿಯ ಲೋಪ ಆಗದಂತೆನಿಗಾವಹಿಸುವ ಮೂಲಕ ಕಾಮಗಾರಿ ಲಾಭ ಜನ ಸಾಮಾನ್ಯರಿಗೆ ತಲುಪಿಸಬೇಕು” ಎಂದು ತಿಳಿಸಿದರು.

Advertisements

ಈ ಸಂದರ್ಭದಲ್ಲಿ ಸಿಇಓ ಆಪ್ತ ಸಹಾಯಕ ಬಿ.ಎಸ್ ಕಪರದ, ಪಿಡಿಒ ಅಧಿಕಾರಿ ಲೋಹಿತ ಎಮ್.ಎಸ್, ಸಂಕನೂರ, ತಾಂತ್ರಿಕ ಸಹಾಯಕ ಪ್ರವೀಣ ಸೂಡಿ, ಐಇಸಿ ಮಂಜುನಾಥ, ತಾಂತ್ರಿಕ ಇಂಜಿನಿಯರ ಲಿಂಗರಾಜಗೌಡ ಮುದಿಗೌಡ್ರ, ಅಜಯ ಅಬ್ಬಿಗೇರಿ, ಬಿಎಫ್‌ಟಿ ಈರಣ್ಣ ಬೇಲೆರಿ, ಶಿವು ಯಲಿಗಾರ. ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X