ರಾಯಚೂರು | ಮನರೇಗಾ ಅಧಿಕಾರಿ, ಸಿಬ್ಬಂದಿಗೆ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ತರಾಟೆ

Date:

Advertisements

ಮನರೇಗಾ ಯೋಜನೆಯಡಿಯಲ್ಲಿ ಹಲವು ಕಾಮಗಾರಿಗಳ ಅಂದಾಜು ತಯಾರಿಕೆ, ಗೋಮಾಳ ಅಭಿವೃದ್ಧಿ ಸೇರಿದಂತೆ ಇತರೆ ಕಾಮಗಾರಿಗಳನ್ನು ಮಾಡುವಲ್ಲಿ ನಿರ್ಲಕ್ಷ್ಯ ವಹಿಸಿದ ಮನರೇಗಾ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಪ್ರಕಾಶ ವಡ್ಡರ್ ಅವರು ತರಾಟೆಗೆ ತೆಗೆದುಕೊಂಡರು.‌

ರಾಯಚೂರು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮನರೇಗಾ ಯೋಜನೆ ಕುರಿತು ಹಮ್ಮಿಕೊಂಡ ಪ್ರಗತಿ ಪರಿಶೀಲನಾ ಸಭೆಯಲ್ಲಿ ತರಾಟೆಗೈದರು. ಮನರೇಗಾ ಯೋಜನೆಯಡಿಯಲ್ಲಿ ಬರುವ ಗೋಮಾಳ ಅಭಿವೃದ್ಧಿಗೆ ಜಿಲ್ಲೆಯಲ್ಲಿ ಒಟ್ಟು 179 ಗ್ರಾಮ ಪಂಚಾಯಿತಿಗಳಲ್ಲಿ 114 ಗೋಮಾಳಗಳ ಗುರಿ ನೀಡಲಾಗಿದೆ. ಅವುಗಳಲ್ಲಿ ಕೇವಲ 30 ಗೋಮಾಳಗಳ ಅಭಿವೃದ್ಧಿಗೆ ಅಂದಾಜು ಸಿದ್ದಪಡಿಸಿದ್ದು, ಅದರಲ್ಲಿ 23 ಕಾಮಗಾರಿಗಳು ಮಾತ್ರ ಪ್ರಗತಿ ಹಂತದಲ್ಲಿವೆ. ಇನ್ನುಳಿದ ಗೋಮಾಳಗಳ ಸ್ಥಳ ಪರಿಶೀಲಿಸಿ ಹುಡುಕಾಟ ನಡೆಸುತ್ತಿದ್ದು, ಗೋಮಾಳ ಇರುವ ಕುರಿತು ಮಾಹಿತಿ ಇಲ್ಲದೇ ಇರುವುದರಿಂದ ಸಿಬ್ಬಂದಿಗಳಿಗೆ ತರಾಟೆಗೆ ತೆಗೆದುಕೊಂಡರು.

ಸ್ಥಳಕ್ಕೆ ತೆರಳಿ ಕೆಲಸ ಮಾಡದೇ ಕೇಲವ ಕಾಟಾಚಾರಕ್ಕೆ ಮಾಹಿತಿ ನೀಡುತ್ತಿದ್ದ ಸಿಬ್ಬಂದಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

Advertisements

“ಗೋಮಾಳ ಅಭಿವೃದ್ಧಿಗೆ ಸುತ್ತಲೂ ಸರಹದ್ದು ಮಾಡಿ, ಒಂದೆಡೆ ಕುಡಿಯುವ ನೀರಿನ ಘಟಕ ನಿರ್ಮಿಸಿ ಮತ್ತೊಂದೆಡೆ ಮೇವು ಬೆಳೆಯಲು ಸಮತಟ್ಟು ಮಾಡಿ ಮಾಹಿತಿ ನೀಡಲು ಆಗುತ್ತಿಲ್ಲವೆ?” ಎಂದು ಅಸಮಧಾನ ವ್ಯಕ್ತಪಡಿಸಿದರು.

“ಮನಗರೇಗಾದಡಿ ಬಯೋಗ್ಯಾಸ್ ನಿರ್ಮಾಣಕ್ಕೆ ಜಿಲ್ಲೆಯಲ್ಲಿ 179 ಗ್ರಾಮ ಪಂಚಾಯತಿಗಳಲ್ಲಿ 358ಕ್ಕೆ ಗುರಿ ನೀಡಲಾಗಿದೆ, 301 ಬಯೋಗ್ಯಾಸ್ ಅಂದಾಜು ಸಿದ್ದಪಡಸಿದ್ದು, ಕೇವಲ 9ರ ಕಾಮಗಾರಿ ಮಾತ್ರ ಪ್ರಗತಿ ಹಂತದಲ್ಲಿದೆ. ಉಳಿದ ಕಾಮಗಾರಿ ಆರಂಭಿಸದೇ ಕುಂಟುನೆಪ ಹೇಳಿತ್ತಿದ್ದು, ಕೆಲಸ ಮಾಡಲು ಆಗದಿದ್ದರೆ ಮನೆಗೆ ತೆರಳಿ” ಎಂದರು.

“ಹಸಿರು ಸರೋವರ್ ಯೋಜನೆಯಡಿ ಜಿಲ್ಲೆಯಲ್ಲಿ 7ಕ್ಕೆ ಗುರಿ ನೀಡಿದೆ. 3 ಕಡೆ ಸ್ಥಳ ಗುರುತಿಸಿದ್ದು, ಮೂರೂ ಕಾಮಗಾರಿಗೆ ಅಂದಾಜು ಮಾಡಿದೆ. ಆದರೆ ಈವರೆಗೆ ಕೆಲಸ ಆರಂಭ ಮಾಡಿಲ್ಲ. ಹಸಿರು ಸರೋವರದ ಬಗ್ಗೆ ಏನು ಮಾಡಬೇಕೆಂಬ ಕಾನ್ಸೆಪ್ಟ್ ಗೊತ್ತಿಲ್ಲದಿದ್ದರೆ, ಕೆರೆಯ ಸುತ್ತಲೂ ಗಿಡಗಳನ್ನು ಬೆಳಸಿ ಮಣ್ಣು ಸವಕಳಿ ಆಗದಂತೆ ಕಾಪಾಡಿಕೊಂಡು ಹೋಗುವುದರ ಜೊತೆಗೆ ಸುತ್ತಮುತ್ತಲಿನ ಪ್ರದೇಶ ಹಸಿರಿನಿಂದ ಇರುವಂತೆ ಮಾಡುವುದು ಹಸಿರು ಸರೋವರದ ಉದ್ದೇಶವಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕಸ ವಿಲೇವಾರಿಯಲ್ಲಿ ನಿರ್ಲಕ್ಷ್ಯ ಕಂಡು ಬಂದಲ್ಲಿ ಅಧಿಕಾರಿಗಳ ಅಮಾನತು; ಡಿಸಿ ಎಚ್ಚರಿಕೆ

“ಹಸಿರು ಸರೋವರ್ ಯೋಜನೆ ಕೆರೆ ಗುರುತಿಸಿಲ್ಲ, ಅಂದಾಜು ಮಾಡಿದೆ. ಕಾಮಗಾರಿ ಆರಂಭ ಮಾಡಬೇಕು ಎಂದು ಹೇಳುತ್ತಿದ್ದು ಕೆಲಸ ಯಾವಾಗ ಮಾಡಿ ಮುಗಿಸಬೇಕು, ಅಧಿಕಾರಿಗಳು ಪರಿಶೀಲನೆಗೆ ಬಂದಾಗ ಹಸಿರು ಸರೋವರದ ಬಗ್ಗೆ ಎಲ್ಲಿ ತೋರಿಸಬೇಕು” ತರಾಟೆಗೆ ತೆಗೆದುಕೊಂಡರು.

ಮನರೇಗಾ ಸಿಬ್ಬಂದಿಗಳು ಸಭೆಯಲ್ಲಿ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Download Eedina App Android / iOS

X