ಧಾರವಾಡ | ಗ್ರಾಕೂಸ್ ಹೋರಾಟಕ್ಕೆ ಮಣಿದ ಗ್ರಾಪಂ; 3 ತಿಂಗಳಿಂದ ಕೂಲಿ ಕಾರ್ಮಿಕರನ್ನು ಸತಾಯಿಸಿದ್ದ ಆರೋಪ

Date:

Advertisements

ಮನರೇಗಾ ಯೋಜನೆ ಅಡಿಯಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರಿಗೆ ಕೆಲಸ ಕೊಡದೆ ಇದ್ದಾಗ; ಕಳೆದ ಮೂರು ತಿಂಗಳಿನಿಂದ ಕೂಲಿ ಕಾರ್ಮಿಕರು ನಿರಂತರ ಪ್ರತಿಭಟಿಸಿ, ಅಧಿಕಾರಿಗಳನ್ನು ಒತ್ತಾಯಸುತ್ತಾ ಬಂದಿದ್ದು, ಇದೀಗ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಮತ್ತಗಟ್ಟಿ ಗ್ರಾಮದ ಕಾರ್ಮಿಕರಿಗೆ ಕೆರೆ ಹೂಳೆತ್ತುವ ಕೆಲಸ ಕೊಟ್ಟಿದ್ದು, ಕಾರ್ಮಿಕರು ಸಂತಸಪಟ್ಟಿದ್ದಾರೆ.

ಈ ಕುರಿತು ಹಿರಿಯ ಕೂಲಿ ಕಾರ್ಮಿಕ ರುದ್ರಪ್ಪ ಸುತಗಟ್ಟಿ ಮಾತನಾಡಿ, ಕಳೆದ ಮೂರು ತಿಂಗಳಿಂದ ಕೆಲಸಕ್ಕಾಗಿ ನಾವು ಹೋರಾಟ ನಡೆಸಿದ್ದೇವೆ. ಆದರೆ; ನಮ್ಮ ಮನವಿಗೆ ಗ್ರಾಪಂ ಸ್ಪಂದಿಸದೇ ಸತಾಯಿಸಿದ್ದಾರೆ. ಮತ್ತು ನಮಗೆ ಕೆಲಸ ಕೊಡದೆ ಹೆಬ್ಬೆಟ್ಟು ತಗದುಕೊಂಡು, ಅವ್ಯವಹಾರ ಮಾಡಿದ್ದಾರೆ ಎಂದು ಆರೋಪಿಸಿದರು.

ಕಳೆದ ಒಂದು ವರ್ಷದಿಂದ ಹೆಬ್ಬೆಟ್ಟು ತೆಗೆದುಕೊಂಡು 200 ಕೊಟ್ಟು ಕಳಿಸುತ್ತಾ ಬಂದಿದ್ದಾರೆ. ಕೆಲಸದ ಬಗ್ಗೆ ನಮಗೆ ಗೊತ್ತಿಲ್ಲ. ಇದೀಗ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ವತಿಯಿಂದ ನಮಗೆ ನ್ಯಾಯ ಸಿಕ್ಕಿದೆ ಎನ್ನುತ್ತಾರೆ ಎಲ್ಲವ್ವ ಹುಬ್ಬಳ್ಳಿ. ನಮ್ಮಲ್ಲಿ ಕೆಲಸ ಮಾಡಬೇಕು ಎಂಬ ಛಲವಿದೆ. ಆದರೆ ಗ್ರಾಮ‌ ಪಂಚಾಯತಿಯವರು ನಮಗೆ ಕೆಲಸ ಕೊಟ್ಟಿಲ್ಲ. ಇವತ್ತು ಕೆಲಸ ಕೊಟ್ಟಿದ್ದಾರೆ. ಮತ್ತು ಮುಖ್ಯವಾಗಿ ಕಾರ್ಮಿಕರು ಕೂಲಿ ಮಾಡುವ ಸಂದರ್ಭದಲ್ಲಿ ಅನಾಹುತಗಳಾದರೆ; ನಮಗೆ ಆರೋಗ್ಯ ಕಿಟ್‌ಗಳನ್ನು ಕೊಡಬೇಕು ಎಂದು ಒತ್ತಾಯಿಸಿದರು.

Advertisements
IMG 20250521 144525

ಈ ಕುರಿತು ಗ್ರಾಕೂಸ್ ಸಂಘಟನೆಯ ಸಂಚಾಲಕಿ ನಿಂಗಮ್ಮ ಸವಣೂರ ಮಾತನಾಡಿ, ಕಳೆದ ಮೂರು ತಿಂಗಳಿಂದ ಕೂಲಿ ಕಾರ್ಮಿಕರನ್ನು ಅಧಿಕಾರಿಗಳು ಸತಾಯಿಸಿದ್ದಾರೆ. ಇತ್ತೀಚಿಗೆ ಕೆಲಸ ಕೊಟ್ಟರೂ ಎರಡು ದಿನ ಗುಡ್ಡದಲ್ಲಿ ಕೆಲಸ ಕೊಟ್ಟಿದ್ದರು. ನಂತರ ಎನ್ಎಮ್ಆರ್ ಕೊಡದೆ ಕಾರ್ಮಿಕರನ್ನು ಮನೆಯಿಂದ-ಪಂಚಾಯತಿ ಹೀಗೆ ಅಲೆದಾಡಿಸಿದ್ದಾರೆ. ಕೊನೆಗೆ ಎಲ್ಲ ಕೂಲಿ‌ಕಾರ್ಮಿಕರು ಒಂದಾಗಿ ಸೆಲಕಿ, ಬುಟ್ಟಿ ತೆಗೆದುಕೊಂಡು ತಾಲೂಕು ಪಂಚಾಯತಿ ಮುತ್ತಿಗೆ ಹಾಕಲು ಮುಂದಾದಾಗ; ಗ್ರಾಮ‌ ಪಂಚಾಯತಿಯವರು ಕೆಲಸ ಕೊಟ್ಟಿದ್ದಾರೆ. ಆದರೆ; ಎನ್ಎಮ್ಆರ್ ಕೊಡಬೇಕು ಎಂದು ಒತ್ತಾಯಿಸಿದರು. ಮತ್ತು ಗ್ರಾಮೀಣ ಕೂಲಿ ಕಾರ್ಮಿಕರಾದ ನಾವು 24 ಜಿಲ್ಲೆಗಳಲ್ಲಿ ಕೆಲಸ ಮಾಡುತ್ತಿದ್ದೇವೆ. ಆದ್ದರಿಂದ ದುಡಿಯು ಜನರಿಗೆ ಅನ್ಯಾಯ ಮಾಡದಿರಿ ಎಂದು ಅಧಿಕರಿಗಳಿಗೆ ಎಚ್ಚರಿಕೆ ನೀಡಿದರು.

ಇದನ್ನು ಓದಿದ್ದೀರಾ? ಧಾರವಾಡ | ಸಿಡಿಲು ಬಡಿದು ಯುವಕ‌ ಸಾವು

ಗ್ರಾಪಂ ಅಭಿವೃದ್ಧಿ ಅಧಿಕಾರಿ ಮರಿಗೌಡ ಪಾಟೀಲ್ ಮಾತನಾಡಿ, ಪ್ರತಿ ವರ್ಷವೂ ಜಲ ಮೂಲಗಳಿಗೆ ಸಂಬಂಧಿಸಿದ ಕೆಲಸಗಳಿಗೆ ಮೊದಲ ಪ್ರಾಧ್ಯಾನ್ಯತೆ ಕೊಡಬೇಕು. ಅನಂತರ ರಸ್ತೆ ನಿರ್ಮಾಣದಂತ ಯೋಜನೆಗಳಿಗೆ ಮುಂದಾಗಬೇಕು. ಹೀಗಾಗಿ ಬದುವು, ಕೆರೆ ನಿರ್ಮಾಣದ ಕ್ರಿಯಾ ಯೋಜನೆಗಳನ್ನು ರೂಪಿಸಿ, ಕಾಮಗಾರಿಗಳನ್ನು ಶುರುಮಾಡಲಾಗಿದೆ. ಕೂಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಕೆಲಸ ಕೇಳಿಕೊಂಡು ಬಂದಿರುವುದು ಖುಷಿ ತಂದಿದೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X