ʼನ್ಯೂಸ್‌ಲಾಂಡ್ರಿʼ ಪತ್ರಕರ್ತೆಯರ ವಿರುದ್ಧ ಮಾನಹಾನಿ; ಪೋಸ್ಟ್‌ಗಳನ್ನು ಅಳಿಸಲು ಅಭಿಜಿತ್ ಅಯ್ಯರ್‌ಗೆ ಹೈಕೋರ್ಟ್ ತಾಕೀತು

Date:

Advertisements

ನ್ಯೂಸ್‌ಲಾಂಡ್ರಿ ಕಾರ್ಯನಿರ್ವಾಹಕ ಸಂಪಾದಕಿ ಮನೀಷಾ ಪಾಂಡೆ ಮತ್ತು ಇತರ ಎಂಟು ಪತ್ರಕರ್ತೆಯರ ವಿರುದ್ಧ ಅವಹೇಳನಾಕಾರಿ ಪೋಸ್ಟ್‌ ಹಾಕಿದ್ದ ಬಲಪಂಥೀಯ ಲೇಖಕ ಅಭಿಜಿತ್ ಅಯ್ಯರ್ ಮಿತ್ರ ಅವರನ್ನು ದೆಹಲಿ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ. ಐದು ಗಂಟೆಗಳೊಳಗೆ ಪೋಸ್ಟ್‌ಗಳನ್ನು ಡಿಲೀಟ್‌ ಮಾಡಬೇಕು. ಇಲ್ಲದಿದ್ದಾರೆ, ಎಫ್‌ಐಆರ್‌ ದಾಖಲಿಸಲು ಆದೇಶಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಅಭಿಜಿತ್ ಅಯ್ಯರ್ ವಿರುದ್ಧ ನ್ಯೂಸ್‌ಲ್ಯಾಂಡ್ರಿಯ ಪತ್ರಕರ್ತೆಯರು ಮೊಕದ್ದಮೆ ದಾಖಲಿಸಿದ್ದಾರೆ. ಆರೋಪಿ ಅಭಿಜಿತ್ ಲಿಖಿತವಾಗಿ ಕ್ಷಮೆಯಾಚಿಸಬೇಕು ಮತ್ತು 2 ಕೋಟಿ ರೂ. ಪರಿಹಾರ ಕೊಡಿಸಬೇಕೆಂದು ಮೊಕದ್ದಮೆಯಲ್ಲಿ ನ್ಯಾಯಾಲಯವನ್ನು ಮನವಿ ಮಾಡಿದ್ದಾರೆ.

ಅವರ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಾಲಯವು ಅಭಿಜಿತ್ ಅವರು ಪತ್ರಕರ್ತೆಯರನ್ನು ವೇಶ್ಯೆಯರು ಎಂದು, ನ್ಯೂಸ್‌ಲ್ಯಾಂಡ್ರಿಯನ್ನು ವೇಶ್ಯಾಗೃಹವೆಂದೂ ಕರೆದಿದ್ದಾರೆ ಎಂಬುದನ್ನು ಗಮನಿಸಿದೆ. ಅಭಿಜಿತ್ ಅಯ್ಯರ್ ಅವರು ಸಾಮಾಜಿಕ ಜಾಲತಾನದಲ್ಲಿ ಹಾಕಿರುವ ಪೋಸ್ಟ್‌ಗಳನ್ನು ‘ಯಾವುದೇ ನಾಗರಿಕ ಸಮಾಜವು ಸಹಿಸುವುದಿಲ್ಲ. ಇಂತಹ ಪೋಸ್ಟ್‌ಗಳು ಸಮಾಜಕ್ಕೆ ಮಾರಕ ಎಂದು ಕೋರ್ಟ್‌ ಹೇಳಿದೆ.

Advertisements

ಈ ವರದಿ ಓದಿದ್ದೀರಾ?: ಸಂವಿಧಾನವೇ ಸುಪ್ರೀಂ: ಧನಕರ್‌ಗೆ ಸಿಜೆಐ ಪವರ್‌ಫುಲ್ ಕ್ಲಾಸ್‌

“ನಾಗರಿಕ ಸಮಾಜದಲ್ಲಿ ಮಹಿಳೆಯರ ವಿರುದ್ಧ ಅಭಿಜಿತ್ ಬಳಸಿರುವ ಭಾಷೆ ಮತ್ತು ಪದಗಳ ಬಳಕೆಯನ್ನು ಅನುಮತಿಸಬಹುದೇ? ಅಂತಹ ಪದ ಬಳಸಿರುವ ಅಭಿಜಿತ್ ವಿರುದ್ಧ ಸ್ವಯಂಪ್ರೇರಿತವಾಗಿ ಕ್ರಿಮಿನಲ್ ಪ್ರಕರಣ ದಾಖಲಿಸಿ, ಬಂಧಿಸಲು ನಾವು ನಿರ್ದೇಶಿಸಬಹುದು” ಎಂದು ನ್ಯಾಯಾಲಯ ಹೇಳಿದೆ.

ಆರೋಪಿ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ವಕೀಲರು, ಪೋಸ್ಟ್‌ಗಳನ್ನು 5 ಗಂಟೆಗಳ ಒಳಗೆ ತೆಗೆದುಹಾಕುವುದಾಗಿ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X