ಛತ್ತೀಸ್‌ಗಢ | ನಾಯಕ ಬಸವರಾಜು ಸೇರಿ 27 ಮಾವೋವಾದಿ ಹೋರಾಟಗಾರರ ಎನ್‌ಕೌಂಟರ್‌

Date:

Advertisements

ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯ ಅಬುಜ್‌ಮದ್ ಪ್ರದೇಶದಲ್ಲಿ ಬುಧವಾರ ಬೆಳಿಗ್ಗೆ ನಡೆದ ಎನ್‌ಕೌಂಟರ್‌ನಲ್ಲಿ ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ)ನ ನಾಯಕ ಬಸವರಾಜು ಸೇರಿದಂತೆ ಒಟ್ಟು 27 ಸದಸ್ಯರನ್ನು ಹತ್ಯೆ ಮಾಡಲಾಗಿದೆ. ಇನ್ನು ಈ ಎನ್‌ಕೌಂಟರ್ ವೇಳೆ ಜಿಲ್ಲಾ ಮೀಸಲು ಗಾರ್ಡ್‌(ಡಿಆರ್‌ಜಿ)ನ ಓರ್ವ ಸಿಬ್ಬಂದಿಯೂ ಮೃತಪಟ್ಟಿರುವುದಾಗಿ ವರದಿ ಉಲ್ಲೇಖಿಸಿದೆ.

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಬಸ್ತಾರ್ ವಲಯದ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಸುಂದರರಾಜ್ ಪಿ, “ಈ ಎನ್‌ಕೌಂಟರ್ ವೇಳೆ ಓರ್ವ ಡಿಆರ್‌ಜಿ ತಂಡದ ಸಿಬ್ಬಂದಿ ಹುತಾತ್ಮರಾದರು. ಎನ್‌ಕೌಂಟರ್ ಸಮಯದಲ್ಲಿ ಕೆಲವು ಇತರ ಸಿಬ್ಬಂದಿ ಗಾಯಗೊಂಡಿದ್ದಾರೆ. ಸದ್ಯ ಶೋಧ ಕಾರ್ಯಾಚರಣೆ ಮುಂದುವರೆದಿದೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಛತ್ತೀಸ್‌ಗಢ | ಎನ್‌ಕೌಂಟರ್‌; ಎಂಟು ನಕ್ಸಲರು ಹತ

Advertisements

ಹಿರಿಯ ಮಾವೋವಾದಿ ನಾಯಕ ಅಬುಜ್‌ಮದ್‌ನ ನಿರ್ದಿಷ್ಟ ಪ್ರದೇಶದಲ್ಲಿ ಅಡಗಿಕೊಂಡಿದ್ದಾರೆ ಎಂಬ ಮಾಹಿತಿಯ ಆಧಾರದಲ್ಲಿ ನಾರಾಯಣಪುರ, ದಂತೇವಾಡ, ಬಿಜಾಪುರ ಮತ್ತು ಕೊಂಡಗಾಂವ್‌ನ ನಾಲ್ಕು ಜಿಲ್ಲೆಗಳ ಜಿಲ್ಲಾ ಮೀಸಲು ಗಾರ್ಡ್ (ಡಿಆರ್‌ಜಿ) ಕಾರ್ಯಾಚರಣೆಯನ್ನು ನಡೆಸಿದೆ ಎನ್ನಲಾಗಿದೆ.

ಎನ್‌ಕೌಂಟರ್ ಬಗ್ಗೆ ಮಾತನಾಡಿದ ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ, “ಕಾರ್ಯಾಚರಣೆಗಳನ್ನು ಮುಖ್ಯವಾಗಿ ಡಿಆರ್‌ಜಿ ನಡೆಸುತ್ತದೆ. ನಾನು ಅವರ ಧೈರ್ಯಕ್ಕೆ ನಮಸ್ಕರಿಸುತ್ತೇನೆ. ನಾವು ಆರಂಭದಿಂದಲೂ ಶರಣಾಗುವಂತೆ ಮಾವೋವಾದಿಗಳಿಗೆ ಮನವಿ ಮಾಡುತ್ತಿದ್ದೇವೆ. ಈಗ ಮತ್ತೆ ಅದನ್ನು ಪುನರಾವರ್ತಿಸುವ ಅಗತ್ಯವಿಲ್ಲ” ಎಂದು ಹೇಳಿಕೊಂಡಿದ್ದಾರೆ.

ಛತ್ತೀಸ್‌ಗಢದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ ಎಂಬ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಆದರೆ ಇದರ ಹೆಸರಲ್ಲಿ ಅದೆಷ್ಟೋ ಆದಿವಾಸಿಗಳ ಹತ್ಯೆ ನಡೆದಿದೆ ಎಂಬ ಆರೋಪಗಳಿವೆ. ಏಪ್ರಿಲ್ 21ರಂದು ಕಾರ್ಯಾಚರಣೆ ನಡೆಸಲು ಆರಂಭಿಸಲಾಗಿದ್ದು, ಒಟ್ಟು 31 ಮಾವೋವಾದಿಗಳ ಹತ್ಯೆ ಮಾಡಲಾಗಿದೆ. ಈ ಪೈಕಿ 16 ವರ್ಷದ ಬಾಲಕ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X