ಬೆಳಗಾವಿ | ವಿದ್ಯುತ್ ತಗುಲಿ ಪ್ರೌಢ ಶಾಲಾ ಶಿಕ್ಷಕ ಸಾವು

Date:

Advertisements

ಮನೆಯ ಗೇಟ್‌ ತೆಗೆಯುವ ವೇಳೆ ವಿದ್ಯುತ್‌ ತಗುಲಿ ಪ್ರೌಢ ಶಾಲಾ ಶಿಕ್ಷಕರೊಬ್ಬರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಸತ್ಯ ಪ್ರಮೋದ್‌ ನಗರದಲ್ಲಿ ನಡೆದಿದೆ.

ಪ್ರವೀಣ ಕುಮಾರ ಜಿ. ಕಡಪಟ್ಟಿಮಠ (41) ಮೃತ ದುರ್ದೈವಿ. ವಿವಾಹ ವಾರ್ಷಿಕೋತ್ಸವ ಹಿನ್ನಲೆಯಲ್ಲಿ ಪ್ರವಾಸ ಮುಗಿಸಿ ವಾಪಸ್ ಮನೆಗೆ ಬಂದ ಸಂದರ್ಭದಲ್ಲಿ ಗೇಟ್ ತಗೆಯಲು ಹೋದಾಗ ವಿದ್ಯುತ್‌ ತಗುಲಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೂಲತಃ ತೇರದಾಳ ಗ್ರಾಮದವರಾದ ಇವರು, ತಾಲೂಕಿನ ಸತ್ತಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದರು. ಪ್ರವೀಣ ಕುಮಾ‌ರ್ ದಂಪತಿ ನಿನ್ನೆಯಷ್ಟೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

ಬೆಳಗಾವಿ : ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಸಂಪೂರ್ಣ ನೆಲಕಚ್ಚಿದ ಸೋಯಾಬೀನ್‌ ಬೆಳೆ: ಪರಿಹಾರದ ನಿರೀಕ್ಷೆಯಲ್ಲಿ ರೈತರು

ಬೈಲಹೊಂಗಲ, ಸವದತ್ತಿ, ಕಿತ್ತೂರು ಸೇರಿದಂತೆ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅತಿ...

Download Eedina App Android / iOS

X