ಶಕ್ತಿ ಯೋಜನೆ | ಖಾಸಗಿ ಬಸ್​​ ಮಾಲೀಕರು, ಆಟೋ ಚಾಲಕರಿಗೆ ಭಾರೀ ತೊಂದರೆ: ಕುಮಾರಸ್ವಾಮಿ ಕಿಡಿ

Date:

Advertisements

ರಾಜ್ಯ ಸರ್ಕಾರ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುಕೂಲ ಮಾಡಿಕೊಟ್ಟಿರುವ ಶಕ್ತಿ ಯೋಜನೆ ಬಗ್ಗೆ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಬುಧವಾರದ ಕಲಾಪದಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯಪಾಲರ ಭಾಷಣದ ಚರ್ಚೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, “ಶಕ್ತಿ ಯೋಜನೆಯಿಂದ ಖಾಸಗಿ ಬಸ್​​ ಮಾಲೀಕರು, ಆಟೋ ಚಾಲಕರಿಗೆ ಭಾರೀ ತೊಂದರೆ ಆಗುತ್ತಿದೆ” ಎಂದು ಆರೋಪಿಸಿದರು.

“ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಿದ್ದೀರಿ. ಇದರ ಬಗ್ಗೆ ನಮಗೇನು ತಕಾರರು ಇಲ್ಲ. ಆದರೆ, ಇದರಿಂದ ನಷ್ಟ ಅನುಭವಿಸುತ್ತಿರೋ ಖಾಸಗಿ ಬಸ್​​ ಮಾಲೀಕರು, ಆಟೋ ಚಾಲಕರು ಏನು ಮಾಡಬೇಕು? ನಾವು ಇವರ ಬಗ್ಗೆಯೂ ಯೋಚಿಸಬೇಕು” ಎಂದು ಹೇಳೀದರು.

Advertisements

ಸರ್ಕಾರಿ ಬಸ್​ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಘೋಷಿಸಿದ ಬೆನ್ನಲ್ಲೇ ಸರ್ಕಾರದ ವಿರುದ್ಧ ಆಟೋ ಚಾಲಕರು, ಖಾಸಗಿ ಬಸ್​ ಮಾಲೀಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಈಗ ಅವರ ಪರವಾಗಿ ಕುಮಾರಸ್ವಾಮಿ ವಿಧಾನಸಭಾ ಕಲಾಪದಲ್ಲಿ ಧ್ವನಿ ಎತ್ತಿದ್ದಾರೆ.

ಅದ್ಭುತ ಸ್ಪಂದನೆ

ಕಳೆದ ಜೂನ್​​​ ತಿಂಗಳಿನಿಂದಲೇ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿ ಮಾಡಿದೆ. ಈ ಸ್ಕೀಮ್​​ ಅಡಿಯಲ್ಲಿ ರಾಜ್ಯದ ಎಲ್ಲ ಮಹಿಳೆಯರಿಗೂ ಸರ್ಕಾರಿ ಬಸ್​ನಲ್ಲಿ ಸಂಪೂರ್ಣ ಉಚಿತ. ಇಡೀ ರಾಜ್ಯದಲ್ಲಿ ಮಹಿಳೆಯರು ಎಲ್ಲಿಂದ ಎಲ್ಲಿಗೆ ಬೇಕಾದರೂ ಹೋಗಬಹುದು. ರಾಜ್ಯ ಸರ್ಕಾರದ ಈ ಮಹತ್ವದ ಯೋಜನೆಗೆ ಮಹಿಳೆಯರಿಂದಲೂ ಅದ್ಭುತ ಸ್ಪಂದನೆ ಸಿಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X