15 ಕೆಜಿ ಟೊಮೆಟೊ ಬರೋಬ್ಬರಿ ₹2,200ಕ್ಕೆ ಮಾರಾಟ

Date:

Advertisements

ಕೋಲಾರದ ಎಪಿಎಂಸಿ ಮಾರುಕಟ್ಟೆಯಲ್ಲಿ ಮಂಗಳವಾರ 15 ಕೆಜಿ ಟೊಮೆಟೊ ಬಾಕ್ಸ್‌ ಬರೋಬ್ಬರಿ 2,200 ರೂ.ಗೆ ಮಾರಾಟವಾಗಿದೆ. ಈ ಮಾರುಕಟ್ಟೆಯು ದೇಶದ ಹೆಚ್ಚಿನ ಭಾಗಗಳಿಗೆ ಟೊಮೆಟೊ ರಫ್ತು ಮಾಡುವ ಕೇಂದ್ರವಾಗಿದೆ. ಜೊತೆಗೆ, ಇಲ್ಲಿಂದ ಮಾರಾಟವಾಗುವ ಟೊಮೆಟೊ ಚಿಲ್ಲರೆ ಮಾರುಕಟ್ಟೆಯಲ್ಲಿ ಮತ್ತಷ್ಟು ಹೆಚ್ಚಿನ ಬೆಲೆಗೆ ಮಾರಾಟವಾಗುತ್ತದೆ.

ಕೋಲಾರ ಎಪಿಎಂಸಿಯಲ್ಲಿ ಟೊಮೆಟೊ ಬೆಲೆ ಅತ್ಯಧಿಕವಾಗಿತ್ತು. ಆದರೆ ಇದು ಹಿಂದೆಂದೂ ಕಾಣದ ಗರಿಷ್ಠ ಬೆಲೆಯಾಗಿದೆ ಎಂದು ಕೆಲವರು ಹೇಳುತ್ತಿದ್ದಾರೆ. 2021ರಲ್ಲಿ ಒಂದು ಬಾಕ್ಸ್‌ ಟೊಮೆಟೊ 2,000 ರೂ.ಗೆ ಮಾರಾಟವಾಗಿತ್ತು.

“ಇದೇ ಬೆಲೆ ಹೀಗೆ ಮುಂದುವರಿದರೆ ಅಥವಾ ಮತ್ತಷ್ಟು ಏರಿಕೆಯಾಗಿದೆ, ನಗರದಲ್ಲಿ ಒಂದು ಕೆಜಿ ಟೊಮೆಟೊ ಬೆಲೆ 200 ರೂ.ಗೆ ಹೆಚ್ಚುವ ಸಾಧ್ಯತೆ ದಟ್ಟವಾಗಿದೆ” ಎಂದು ವರ್ತಕರು ಹೇಳುತ್ತಿದ್ದಾರೆ.

Advertisements

ರಾಜ್ಯದಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳು ಟೊಮೆಟೊ ಬೆಳೆಯುವ ಪ್ರಮುಖ ಜಿಲ್ಲೆಗಳಾಗಿವೆ. ಇಲ್ಲಿನ ಟೊಮೆಟೊ ಮುಖ್ಯವಾಗಿ ದಕ್ಷಿಣ ಭಾರತಕ್ಕೆ ಹೆಚ್ಚು ಪೂರೈಕೆಯಾಗುತ್ತದೆ. ಮಹಾರಾಷ್ಟ್ರದ ನಾಸಿಕ್ ಪ್ರದೇಶದಲ್ಲಿ ಟೊಮೆಟೊ ಬೆಳೆ ವಿಫಲವಾದ ಕಾರಣ, ದಕ್ಷಿಣ ರಾಜ್ಯಗಳ ಜೊತೆಗೆ ಪಶ್ಚಿಮ ಬಂಗಾಳ, ಒಡಿಶಾ ಮತ್ತು ಬಾಂಗ್ಲಾದೇಶಕ್ಕೂ ಕೋಲಾರ ಮಾರುಕಟ್ಟೆಯಿಂದ ಟೊಮೆಟೊ ಪೂರೈಕೆಯಾಗುತ್ತಿದೆ. ಪರಿಣಾಮವಾಗಿ ಬೆಲೆ ಏರಿಕೆಯಾಗಿದೆ. ಜೊತೆಗೆ, ಬಿಳಿ ನೊಣ ರೋಗ ಮತ್ತು ಕರ್ಲಿ ಎಲೆಗಳ ರೋಗದಿಂದಾಗಿ ಟೊಮೆಟೊಗೆ ಇಳುವರಿ ಕಡಿಮೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X