ಭಾರೀ ಮಳೆ | ಬಿರುಗಾಳಿಗೆ ಹಾರಿ‌ಹೋದ ಮಕ್ಕಳು

Date:

Advertisements

ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಮಧ್ಯಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯ ನಡುವೆ ಬೀಸುತ್ತಿರುವ ಬಿರುಗಾಳಿಗೆ ಮಕ್ಕಳೇ ಹಾರಿ ಹೋಗಿರುವ ಘಟನೆ ಮಧ್ಯಪ್ರದೇಶದ ಸಾಗರ ಜಿಲ್ಲೆಯಲ್ಲಿ ನಡೆದಿದೆ.

ಸಾಗರ ಜಿಲ್ಲೆಯ ಬಂದಾದಲ್ಲಿ ಗುರುವಾರ ಸಂಜೆ ಘಟನೆ ನಡೆದಿದೆ. ಗ್ರಾಮದಲ್ಲಿ ಧಾರಾಕಾರ ಮಳೆ ಸುರಿದಿದ್ದು, ಬಿರುಗಾಳಿಯೂ ಭೀಕರವಾಗಿ ಬೀಸಿದೆ. ಬಿರುಗಾಳಿಗೆ ಸಿಲುಕಿ ಮಕ್ಕಳು ಹಾರಿಹೋಗಿದ್ದಾರೆ.

ಗ್ರಾಮದಲ್ಲಿ ಬೀಸುತ್ತಿದ್ದ ಬಿರುಗಾಳಿಗೆ ಗುಡಿಸಲಿನ‌ ಮೇಲ್ಛಾವಣಿ ಹಾರಿ ಹೋಗಿದೆ. ಮನೆಯಲ್ಲಿದ್ದವರು ಛಾವಣಿ ಹಾರಿಹೋಗದಂತೆ ಹಿಡಿಯಲು ಯತ್ನಿಸಿದ್ದಾರೆ. ಛಾವಣಿಯನ್ನು ಹಿಡಿದುಕೊಂಡಿದ್ದಾರೆ. ಆದರೆ, ಛಾವಣಿ ಸಮೇತವಾಗಿ ಮಕ್ಕಳು ಕೂಡ ಹಾರಿಹೋಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Advertisements

ಇನ್ನು, ಕರ್ನಾಟಕದಲ್ಲಿಯೂ ಮಳೆದ ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಗೋಡೆ ಕುಸಿತ, ವಿದ್ಯುತ್ ಸ್ಪರ್ಶ, ಸಿಡಿಲಿಗೆ ಸಿಲುಕಿ ರಾಜ್ಯಾದ್ಯಂತ ಆರು ಮಂದಿ ಸಾವನ್ನಪ್ಪಿದ್ದಾರೆ. ಭಾರೀ ಬೆಳ, ಆಸ್ತಿ ನಷ್ಟವಾಗಿದೆ. ಇನ್ನೂ ಐದಾರು ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X