ರಾಯಚೂರು | ನಾಳೆಯಿಂದ ಚಿಂತನ-ಮಂಥನ ಕಾರ್ಯಕ್ರಮ

Date:

Advertisements

ಹೈದರಾಬಾದ್- ಕರ್ನಾಟಕ ಜನಾಂದೋಲನ ಕೇಂದ್ರ ಜಿಲ್ಲಾ ಸಮಿತಿಯಿಂದ ಮೇ 24, 25 ರಂದು ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕೆವಿಕೆ ಸಭಾಂಗಣದಲ್ಲಿ ವರ್ತಮಾನ ಸಂದರ್ಭದ ರಾಜಕಾರಣ ತತ್ವ ಸಿದ್ಧಾಂತಗಳ ಮನನ ಕುರಿತು ಚಿಂತನ-ಮಂಥನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೈದರಾಬಾದ್- ಕರ್ನಾಟಕ ಜನಾಂದೋಲನ ಕೇಂದ್ರ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಬಿ.‌ ಬಸವರಾಜ ತಿಳಿಸಿದರು.

ಮೇ 24 ರಂದು ಬೆಳಿಗ್ಗೆ 9.30 ರಿಂದ 12 ರವರೆಗೆ ಗೋಷ್ಠಿ-1 ನಡೆಯಲಿದೆ. ಹೈದರಾಬಾದ್- ಕರ್ನಾಟಕ ಜಿಲ್ಲಾ ಕೇಂದ್ರದ ಸಂಸ್ಥಾಪಕ ರಾಘವೇಂದ್ರ ಕುಷ್ಟಗಿ ಅಂಬೇಡ್ಕರ್ ಬರೆದ ಸಂವಿಧಾನದ ಬಗ್ಗೆ ಪ್ರಸ್ತಾವನೆ ಮಾಡಲಿದ್ದಾರೆ. ಸಾಹಿತಿ ಶಿವಸುಂದರ ಅಂಬೇಡ್ಕರ್ ಬಯಸಿದ್ದ ಸಂವಿಧಾನ ಕುರಿತು ವಿಷಯ ಮಂಡಿಸಲಿದ್ದಾರೆ. ವಿದ್ಯಾನಿಧಿ ಕಾಲೇಜಿನ ಪ್ರಾಂಶುಪಾಲ ಚಂದ್ರಗಿರೀಶ ಅಧ್ಯಕ್ಷತೆ ವಹಿಸುವರು ಎಂದು ಗುರುವಾರ ಮಾಧ್ಯಮ ಗೋಷ್ಠಿಯಲ್ಲಿ ಹೇಳಿದರು.

ಗೋಷ್ಠಿ-2 ಮಧ್ಯಾಹ್ನ 12.15 ರಿಂದ 2 ಗಂಟೆವರೆಗೆ ನಡೆಯಲಿದೆ. ಸಿಪಿಐಎಂ ರಾಜ್ಯ ಕಾರ್ಯದರ್ಶಿ ಕೆ.‌ಪ್ರಕಾಶ ಸಂವಿಧಾನ ಸಶಕ್ತೀಕರಣ- ಸವಾಲುಗಳು ಮತ್ತು ಸಾಧ್ಯತೆ ಕುರಿತು ವಿಷಯ ಮಂಡಿಸಲಿದ್ದಾರೆ. ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ಕಾರ್ಯದರ್ಶಿ ಕೆ. ವಿ. ಭಟ್ ಅಧ್ಯಕ್ಷತೆ ವಹಿಸುವರು.

Advertisements

ಈ ಸುದ್ದಿ ಓದಿದ್ದೀರಾ? ರಾಯಚೂರು | ಮಸೀದಿ ಆವರಣದಲ್ಲಿದ್ದ ಅನಧಿಕೃತ ಮನೆ, ಅಂಗಡಿ ತೆರವು

ಗೋಷ್ಠಿ-3 ಮಧ್ಯಾಹ್ನ 3 ರಿಂದ 5 ರವರೆಗೆ ನಡೆಯಲಿದೆ. ಕರ್ನಾಟಕ ರಾಷ್ಟ್ರ ಸಮಿತಿಯ ಸಂಸ್ಥಾಪಕ ರವಿಕೃಷ್ಣ ರೆಡ್ಡಿ ವರ್ತಮಾನ ಸಂದರ್ಭದಲ್ಲಿ ಗಾಂಧಿವಾದದ ಸ್ಥಾನಮಾನ ಸ್ಥಿತಿಗತಿ ಕುರಿತು ವಿಷಯ ಮಂಡಿಸಲಿದ್ದಾರೆ. ಸಾಮಾಜಿಕ ಕಾರ್ಯಕರ್ತ ದಿಲೀಪ ಕಾಮತ್ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದರು.

ಮೇ 25 ರಂದು ಬೆಳಿಗ್ಗೆ 9.30 ರಿಂದ 12 ಗಂಟೆ ವರೆಗೆ ಗೋಷ್ಠಿ-4 ನಡೆಯಲಿದೆ. ಸಾಮಾಜಿಕ ಕಾರ್ಯಕರ್ತ ದಿಲೀಪ ಕಾಮತ್ ಭಾರತದ ಪರಿಕಲ್ಪನೆ- ವ್ಯವಸ್ಥೆ ಮತ್ತು ಜನಬದುಕಿನ ವೈರುಧ್ಯಗಳ ಕುರಿತು ವಿಷಯ ಮಂಡಿಸಲಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ ಅಧ್ಯಕ್ಷತೆ ವಹಿಸುವರು.

ಗೋಷ್ಠಿ-5 ಬೆಳಿಗ್ಗೆ 12.15 ರಿಂದ 2 ರವರೆಗೆ ನಡೆಯಲಿದೆ. ಬೆಂಗಳೂರಿನ ಬಿಜಿವಿಎಸ್‌ನ ಚೇಗರೆಡ್ಡಿ, ಶಿಕ್ಷಣದ ಚಿಂತಕ ಸಯ್ಯದ್ ಹಫೀಜುಲ್ಲಾ ಹೈದರಾಬಾದ್- ಕರ್ಣಾಟಕ ಶೈಕ್ಷಣಿಕ ಪರಿಸ್ಥಿತಿ ಮತ್ತು ಕಥೆ-ವ್ಯಥೆ ಕುರಿತು ಮಾತನಾಡಲಿದ್ದಾರೆ. ಜತೆಗೆ ಗೋಷ್ಠಿಯಲ್ಲಿ ಸಹಸ್ಪಂದನಾ ಸಂವಾದ ಏರ್ಪಡಿಸಲಾಗಿದೆ ಎಂದು ಹೇಳಿದರು.

ಜಿಲ್ಲೆಯ ಶಿಕ್ಷಣ ಪ್ರೇಮಿಗಳು, ದಲಿತರ ಪರ ಚಿಂತಕರು, ಸಾಹಿತಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಡಾ. ಶಾರದ ಹುಲಿನಾಯಕ, ಲಿಂಗಪ್ಪ ಪೂಜಾರಿ, ಜಾನ್‌ ವೆಸ್ಲಿ, ಖಾಜಾ ಅಸ್ಲಂ ಮಹಮ್ಮದ್, ವೀರಣ್ಣ ಭಂಡಾರಿ, ಬೂದೇಪ್ಪ, ಲಕ್ಷ್ಮಣ, ಶಾಂತ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X