ವಿಜಯಪುರ | ಒಳ ಮೀಸಲಾತಿ ಜಾರಿಯಾಗುವುದು ಖಚಿತ: ಎಚ್‌ ಆಂಜನೇಯ ವಿಶ್ವಾಸ

Date:

Advertisements

ತೀರಾ ಹಿಂದುಳಿದಿರುವ ಮಾದಿಗ ಸಮುದಾಯಕ್ಕೆ ಈ ಬಾರಿ ಒಳ ಮೀಸಲಾತಿ ಜಾರಿಯಾಗುವುದು ಖಚಿತ. ಸತತ 30 ವರ್ಷಗಳಿಂದ ನಡೆಸಿರುವ ಹೋರಾಟಕ್ಕೆ ಫಲ ಸಿಗಲಿದೆ ಎಂದು ಮಾಜಿ ಸಚಿವ ಎಚ್‌ ಆಂಜನೇಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಜಯಪುರ ನಗರದ ಪ್ರವಾಸಿಮಂದಿರದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, “ಆಂಧ್ರದಲ್ಲಿ ತೀವ್ರ ಹೋರಾಟದ ಮೂಲಕ ಒಳ ಮೀಸಲಾತಿ ಪಡೆದುಕೊಂಡಿದ್ದಾರೆ. ಇದೀಗ ಸುಪ್ರೀಂ ಕೋರ್ಟ್ ಆದೇಶ ಬಂದಮೇಲೆ ನಮ್ಮ ರಾಜ್ಯದಲ್ಲೂ ಒಳಮೀಸಲಾತಿ ಕೊಡುವ ಕೆಲಸ ಆಗಲಿದೆ. ಸದಾಶಿವ ಆಯೋಗದ ವರದಿ ಹಾಗೂ ಮಾಧುಸ್ವಾಮಿ ನೇತೃತ್ವದಲ್ಲಿ ಬೊಮ್ಮಾಯಿ ಸರ್ಕಾರವಿದ್ದಾಗ ಅವರು ಶಿಫಾರಸು ಮಾಡಿದ್ದರು. ಆದರೆ ಆದು ಆಗಿರಲಿಲ್ಲ. ಇದೀಗ ಒಳ ಮೀಸಲಾತಿ ಅನುಷ್ಠಾನಕ್ಕೆ ತರುವ ಕೆಲಸ ಸಿದ್ದರಾಮಯ್ಯನವರ ಮುಂದಿದೆ. ಸಿಎಂ ಜೂನ್ ತಿಂಗಳ ಒಳಗಾಗಿ ಈ ಕೆಲಸ ಮಾಡಲಿದ್ದು, ಮಾದಿಗ ಸಮುದಾಯಕ್ಕೆ ಒಳಮೀಸಲಾತಿ ಸಿಗಲಿದೆ” ಎಂದರು.

“ಮೈಸೂರು ಹಾಗೂ ಬೆಂಗಳೂರು ವಿಭಾಗದಲ್ಲಿ ಆದಿ ಕರ್ನಾಟಕ ಸಮುದಾಯದ ಜನರು ಮಾದಿಗ ಸೌಲಭ್ಯಕ್ಕೆ ಮುಂದಾಗಿದ್ದು, ಅದು ಗೊಂದಲ ಮೂಡಿಸಿದೆ. ಒಳ ಮೀಸಲಾತಿ ಕುರಿತು ಸಮೀಕ್ಷೆ ಸಮಯ ವಿಸ್ತರಣೆಯಾಗಿದ್ದು, ಎಲ್ಲರನ್ನೂ ನೋಂದಾಯಿಸುವ ಕೆಲಸ ನಡೆಯುತ್ತಿದೆ. ಯಾರೊಬ್ಬರೂ ಈ ಸಮೀಕ್ಷೆಯಿಂದ ಹೊರಗುಳಿಯಬಾರದು. ಸಮೀಕ್ಷೆ ಮುಗಿಯುವವರೆಗೂ ಸಮಾಜದ ಮುಖಂಡರು ಕಾರ್ಯಕ್ರಮಗಳನ್ನು ಮಾಡಬಾರದು. ಎಲ್ಲರೂ ಊರಲ್ಲೇ ಇದ್ದು, ಎಲ್ಲರನ್ನೂ ನೋಂದಾಯಿಸಬೇಕು” ಎಂದು ಮನವಿ ಮಾಡಿದರು.

Advertisements

ಇದನ್ನೂ ಓದಿ: ವಿಜಯಪುರ | ಕೇಂದ್ರದ ಅಸಹಕಾರದ ನಡುವೆ ರಾಜ್ಯ ಸರ್ಕಾರ ಉತ್ತಮ ಆಡಳಿತ: ಕೆಪಿಸಿಸಿ ವಕ್ತಾರ ಗಣಿಹಾರ

“ಒಳಮೀಸಲಾತಿ ಅನುಷ್ಠಾನ ಆದ ಮೇಲೆಯೇ ಹೊಸ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಕಳೆದ ವರ್ಷ ಅಕ್ಟೋಬ‌ರ್ 10 ರಿಂದ ಹೊಸ ಹುದ್ದೆಗಳ ಭರ್ತಿಯನ್ನು ನಿಲ್ಲಿಸಲಾಗಿದೆ. ಈ ಬಾರಿ ಜೂನ್‌ನಲ್ಲಿ ಒಳಮೀಸಲಾತಿ ಸೌಲಭ್ಯ ಅನುಷ್ಠಾನ ಆಗಲೇಬೇಕು. ಅದನ್ನು ಸಿಎಂ ಸಿದ್ದರಾಮಯ್ಯ ಮಾಡುತ್ತಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ರಮೇಶ ಆಸಂಗಿ, ಸುಭಾಷ ಕಾಲೇಬಾಗ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X