ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿದ ಶ್ರೀಲಂಕಾದ ಮಾಜಿ ನಾಯಕ

Date:

Advertisements

ಶ್ರೀಲಂಕಾದ ಆಲ್‌ರೌಂಡರ್ ಏಂಜೆಲೊ ಮ್ಯಾಥ್ಯೂಸ್ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿದ್ದಾರೆ. ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಮ್ಯಾಥ್ಯೂಸ್ ತಮ್ಮ ಅಭಿಮಾನಿಗಳಿಗೆ ಈ ಮಾಹಿತಿಯನ್ನು ನೀಡಿದ್ದಾರೆ. 2009 ರಿಂದ ಶ್ರೀಲಂಕಾದ ಟೆಸ್ಟ್ ಕ್ರಿಕೆಟ್‌ನ ಭಾಗವಾಗಿದ್ದರು.

ಏಂಜೆಲೊ ಮ್ಯಾಥ್ಯೂಸ್ 2009 ರಲ್ಲಿ ಗಾಲೆಯಲ್ಲಿ ನಡೆದಿದ್ದ ಪಾಕಿಸ್ತಾನ ವಿರುದ್ಧದ ಪಂದ್ಯದೊಂದಿಗೆ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. ತಮ್ಮ 16 ವರ್ಷಗಳ ಟೆಸ್ಟ್ ವೃತ್ತಿಜೀವನದಲ್ಲಿ ಮ್ಯಾಥ್ಯೂಸ್ 118 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 44.63 ಸರಾಸರಿಯಲ್ಲಿ 8,167 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ, ಅವರು 16 ಶತಕಗಳು ಮತ್ತು 45 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದರಲ್ಲಿ 200 ರನ್‌ ಅವರ ಅತ್ಯುತ್ತಮ ಸ್ಕೋರ್ .

ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಕೊಡುಗೆ ನೀಡಿರುವ ಮ್ಯಾಥ್ಯೂಸ್, ತಮ್ಮ ವೃತ್ತಿಜೀವನದಲ್ಲಿ 33 ಟೆಸ್ಟ್ ವಿಕೆಟ್‌ಗಳನ್ನು ಕಬಳಿಸಿದ್ದರು. ಅಲ್ಲದೆ ಶ್ರೀಲಂಕಾ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಮೂರನೇ ಆಟಗಾರರಾಗಿದ್ದು, ಕುಮಾರ್ ಸಂಗಕ್ಕಾರ ಮತ್ತು ಮಹೇಲ ಜಯವರ್ಧನೆ ನಂತರದ ಸ್ಥಾನದಲ್ಲಿದ್ದಾರೆ.

Advertisements

ಇದನ್ನು ಓದಿದ್ದೀರಾ? ಮೈದಾನದಲ್ಲಿ ಜಗಳಕ್ಕಿಳಿದ ಅಭಿಷೇಕ್ ಶರ್ಮಾ–ದಿಗ್ವೇಶ್ ರಥಿ; ಬಿಸಿಸಿಐನಿಂದ ಒಬ್ಬರಿಗೆ ಅಮಾನತು ಶಿಕ್ಷೆ

ತಮ್ಮ ನಿವೃತ್ತಿ ನಿರ್ಧಾರದ ಬಗ್ಗೆ ಸುದೀರ್ಘವಾಗಿ ಬರೆದುಕೊಂಡಿರುವ ಏಂಜೆಲೊ ಮ್ಯಾಥ್ಯೂಸ್, ‘ನನ್ನ ಪ್ರೀತಿಯ ಸ್ನೇಹಿತರೇ ಮತ್ತು ಕುಟುಂಬವೇ, ಈಗ ನಾನು ಆಟದ ಅತ್ಯಂತ ಪ್ರೀತಿಯ ಸ್ವರೂಪವಾದ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳುವ ಸಮಯ ಬಂದಿದೆ. ಕಳೆದ 17 ವರ್ಷಗಳಿಂದ ಶ್ರೀಲಂಕಾ ಪರ ಕ್ರಿಕೆಟ್ ಆಡುವುದು ನನಗೆ ಸಿಕ್ಕ ಅತ್ಯಂತ ದೊಡ್ಡ ಗೌರವ ಮತ್ತು ಹೆಮ್ಮೆ. ರಾಷ್ಟ್ರೀಯ ಜೆರ್ಸಿ ಧರಿಸಿದಾಗ ಮೂಡುವ ದೇಶಭಕ್ತಿ ಭಾವನೆಯನ್ನು ಯಾರೂ ಸರಿಗಟ್ಟಲು ಸಾಧ್ಯವಿಲ್ಲ. ನಾನು ನನ್ನ ಎಲ್ಲವನ್ನೂ ಕ್ರಿಕೆಟ್‌ಗೆ ನೀಡಿದ್ದೇನೆ ಮತ್ತು ಪ್ರತಿಯಾಗಿ ಕ್ರಿಕೆಟ್ ನನಗೆ ಎಲ್ಲವನ್ನೂ ನೀಡಿದೆ. ಜೂನ್‌ನಲ್ಲಿ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ನನ್ನ ದೇಶಕ್ಕಾಗಿ ನನ್ನ ಕೊನೆಯ ರೆಡ್-ಬಾಲ್ ಪಂದ್ಯವಾಗಿರುತ್ತದೆ ಎಂದು ಏಂಜೆಲೊ ಮ್ಯಾಥ್ಯೂಸ್ ಬರೆದುಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X