ಒಂದೇ ಇನ್ನಿಂಗ್ಸ್‌ನಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆದ ಸ್ಪಿನ್ನರ್ ಆರ್. ಅಶ್ವಿನ್

Date:

Advertisements

ವೆಸ್ಟ್‌ಇಂಡೀಸ್ ಪ್ರವಾಸದಲ್ಲಿರುವ ಟೀಮ್ ಇಂಡಿಯಾ, ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಮೊದಲ ದಿನವೇ ಹಿಡಿತ ಸಾಧಿಸಿದರೆ, ಸ್ಪಿನ್ನರ್ ಆರ್. ಅಶ್ವಿನ್ ಒಂದೇ ಇನ್ನಿಂಗ್ಸ್ ನಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆದಿದ್ದಾರೆ.

5 ವಿಕೆಟ್ ಗೊಂಚಲು : ಜೇಮ್ಸ್ ಆ್ಯಂಡರ್‌ಸನ್ ಹಿಂದಿಕ್ಕಿದ ಅಶ್ವಿನ್

ಐಸಿಸಿ ಟೆಸ್ಟ್ ರ್‍ಯಾಂಕಿಂಗ್ ನಲ್ಲಿ ಅಗ್ರಸ್ಥಾನದಲ್ಲಿರುವ ಅಶ್ವಿನ್, ಈವರೆಗೆ ಒಟ್ಟು 33 ಬಾರಿ ಇನಿಂಗ್ಸ್‌ವೊಂದರಲ್ಲೇ ಐದು ವಿಕೆಟ್ ಗೊಂಚಲು ಪಡೆದ ಸಾಧನೆ ಮಾಡಿದ್ದಾರೆ. ಆ ಮೂಲಕ ಹೆಚ್ಚು ಸಲ ಒಂದೇ ಇನಿಂಗ್ಸ್‌ನಲ್ಲಿ ಐದು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿದ್ದಾರೆ.

Advertisements

32 ಸಲ ಈ ಸಾಧನೆ ಮಾಡಿದ್ದ ಇಂಗ್ಲೆಂಡ್ ವೇಗಿ ಜೇಮ್ಸ್ ಆ್ಯಂಡರ್‌ಸನ್ ಇದೀಗ 7ನೇ ಸ್ಥಾನಕ್ಕೆ ಜಾರಿದ್ದಾರೆ. ಶ್ರೀಲಂಕಾದ ನಿವೃತ್ತ ಬೌಲರ್ ಮುತ್ತಯ್ಯ ಮುರಳೀಧರನ್ 67 ಬಾರಿ ಪಡೆಯುವ ಮೂಲಕ ಈ ಸಾಧನೆಯ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಟೀಮ್ ಇಂಡಿಯಾದ ನಿವೃತ್ತ ಕ್ರಿಕೆಟಿಗ, ಕನ್ನಡಿಗ ಅನಿಲ್ ಕುಂಬ್ಳೆ 35 ಬಾರಿ ಈ ಸಾಧನೆ ಮಾಡಿ, ನಾಲ್ಕನೇ ಸ್ಥಾನದಲ್ಲಿದ್ದಾರೆ.

ತಂದೆ- ಮಗನನ್ನು ಔಟ್ ಮಾಡಿದ ವಿಶಿಷ್ಟ ದಾಖಲೆ

ಕ್ರಿಕೆಟ್‌ನಲ್ಲಿ ತಂದೆ ಮತ್ತು ಮಗನನ್ನು ಔಟ್ ಮಾಡಿದ ವಿಶಿಷ್ಟ ದಾಖಲೆಯ ಪಟ್ಟಿಗೂ ಆರ್. ಅಶ್ವಿನ್ ಸೇರ್ಪಡೆಗೊಂಡಿದ್ದಾರೆ.

12.4ನೇ ಓವರ್‍‌ನಲ್ಲಿ ಆಕರ್ಷಕ ಎಸೆತ ಎಸದೆ ಅಶ್ವಿನ್, ಎಡಗೈ ಬ್ಯಾಟರ್ ತಗ್‌ನರೇನ್ ಚಂದ್ರಪಾಲ್ ಅವರನ್ನು ಬೌಲ್ಡ್ ಮಾಡುವ ಮೂಲಕ ತಂದೆ- ಮಗನನ್ನು ಔಟ್ ಮಾಡಿದ ವಿಶ್ವದ ಐದನೇ ಬೌಲರ್ ಎನಿಸಿಕೊಂಡಿದ್ದಾರೆ. ತಗ್ನರೇನ್ ಚಂದ್ರಪಾಲ್ ವೆಸ್ಟ್‌ಇಂಡೀಸ್‌ನ ನಿವೃತ್ತ ಕ್ರಿಕೆಟಿಗ ಶಿವನರೇನ್ ಚಂದ್ರಪಾಲ್ ಅವರ ಮಗ.

700 ವಿಕೆಟ್ ಪಡೆದ ಭಾರತದ ಮೂರನೇ ಬೌಲರ್

ವೆಸ್ಟ್ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ನ ಪ್ರಥಮ ಇನ್ನಿಂಗ್ಸ್ ನಲ್ಲಿ 5 ವಿಕೆಟ್ ಗಳಿಸಿದ ರವಿಚಂದ್ರನ್ ಅಶ್ವಿನ್, ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 700 ವಿಕೆಟ್ ಗಳಿಸಿದ ಭಾರತದ ಮೂರನೇ ಬೌಲರ್ ಎಂಬ ಹೆಗ್ಗಳಿಕೆಗೂ ಪಾತ್ರರಾದರು.

ಈ ಟೆಸ್ಟ್ ನಲ್ಲಿ ಮೂರನೇ ವಿಕೆಟ್ ರೂಪದಲ್ಲಿ ಅಲ್ಜರಿ ಜೋಸೆಫ್ (4) ಅವರನ್ನು ಔಟ್ ಮಾಡುವ ಮೂಲಕ 700 ವಿಕೆಟ್ ಸಾಧನೆ ಮಾಡಿದರು.

ತಮಿಳುನಾಡು ಮೂಲದ ಅಶ್ವಿನ್, ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಮೂರನೇ ಬೌಲರ್ ಎನಿಸಿಕೊಂಡಿದ್ದಾರೆ. ಒಟ್ಟು ಈವರೆಗೆ 702 ವಿಕೆಟ್‌ಗಳನ್ನು ಪಡೆದಿದ್ದು, ಈ ಪಟ್ಟಿಯಲ್ಲಿ ಹರ್ಭಜನ್ ಸಿಂಗ್ ಅವರನ್ನು ಹಿಂದಕ್ಕಿ ಎರಡನೇ ಸ್ಥಾನಕ್ಕೇರಬೇಕಾದರೆ. ಕೇವಲ 6 ವಿಕೆಟ್‌ಗಳು ಬೇಕಿದೆ.

ಭಾರತದ ಪರ ಹರ್ಭಜನ್ ಸಿಂಗ್ 707 ವಿಕೆಟ್ ಪಡೆದು ಎರಡನೇ ಸ್ಥಾನದಲ್ಲಿದ್ದರೆ, ಅನಿಲ್ ಕುಂಬ್ಳೆ 953 ವಿಕೆಟ್‌ಗಳನ್ನು ಕಬಳಿಸಿ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X